ದೇವಸ್ಥಾನದಲ್ಲಿದ್ದ ಹುಂಡಿ ಹಣ ಕಳ್ಳತನಕ್ಕೆ ಯತ್ನಿಸಿದ ಕಳ್ಳನ ಕೈ ಹುಂಡಿಯಲ್ಲಿ ಸಿಕ್ಕಿಕೊಂಡು ಪರದಾಡಿದ ಘಟನೆ ತೆಲಂಗಾಣದ ಮಾಸುಪಲ್ಲಿ ಪೋಚಮ್ಮ ದೇವಸ್ಥಾನದಲ್ಲಿ ನಡೆದಿದೆ.
ಕಾಮರೆಡ್ಡಿ ಜಿಲ್ಲೆಯ ರಾಮೇಶ್ವರಪಲ್ಲಿ ಗ್ರಾಮದ ಸುರೇಶ್, ಮಾಸುಪಲ್ಲಿ ಪೋಚಮ್ಮ ದೇವಸ್ಥಾನದಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದರು, ಮಂಗಳವಾರ ರಾತ್ರಿ ಹುಂಡಿಯಲ್ಲಿದ್ದ ಹಣ ಕದಿಯಲು ಯತ್ನಿಸಿದಾಗ ಅವರ ಕೈ ಹುಂಡಿಯಲ್ಲಿ ಸಿಲುಕಿಕೊಂಡಿತ್ತು. ಹುಂಡಿಯಿಂದ ತನ್ನ ಕೈ ಹೊರ ತೆಗೆಯಲು ಹರಸಾಹಸ ಮಾಡಿದ್ದಾನೆ ಆದರೂ ಕೈ ಹೊರಬಂದಿಲ್ಲ. ಬೆಳಗ್ಗೆ ಸ್ಥಳೀಯರು ಇದನ್ನ ಗಮನಿಸಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಹುಂಡಿಯಿಂದ ಕೈ ಹೊರ ತೆಗೆದು ವಶಕ್ಕೆ ಪಡೆದರು.
ಆರೋಪಿ ಕಳ್ಳನ ವಿರುದ್ಧ ಕಳ್ಳತನ ಯತ್ನ ಪ್ರಕರಣ ದಾಖಲಾಗಿದೆ.
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…