ದೇವಸ್ಥಾನ ಸನ್ನಿಧಿಯಲ್ಲಿ ರಾಜಕಾರಣ ಬೇಡ, ಮಾತನಾಡುವುದಿಲ್ಲ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ನಂತರ ಜಾತಿಗಣತಿ ಬಹಿರಂಗ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಹೇಳಿದ್ದಾರೆ ನಾನು ಇನ್ನೂ ವರದಿ ನೋಡಿಲ್ಲ. ನಾನು ನಿನ್ನೆ ಬೆಳಗಾವಿ, ಮಂಗಳೂರಿಗೆ ಹೋಗಿದ್ದೆ. ನೋಡ್ತೀವಿ ಅದು ಇನ್ನೂ ನಮ್ಮ ಕ್ಯಾಬಿನೆಟ್ ನಲ್ಲಿ ಚರ್ಚೆ ಆಗಬೇಕು. ಸಿಎಂ ಸದನದಲ್ಲಿ ಚರ್ಚೆ ಮಾಡ್ತೀವಿ ಅಂತಾ ಹೇಳಿದ್ದಾರೆ. ಆತುರದ ನಿರ್ಧಾರ ಯಾರು ತೆಗೆದುಕೊಳ್ಳುವುದಿಲ್ಲ. ಕೆಲವು ರಾಜಕಾರಣಿಗಳು ಸ್ಟೇಟ್ಮೆಂಟ್ ಮಾಡಬೇಕು ಮಾಡ್ತಾರೆ. ಸತ್ಯಾಂಶ ತಿಳಿದುಕೊಂಡು ಎಲ್ಲರಿಗೂ ನ್ಯಾಯ ಒದಗಿಸಿಕೊಡುವ ಕೆಲಸ ಮಾಡ್ತೇವೆ ಎಂದರು.
ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥಾನ ಪ್ರಸಿದ್ಧ, ಐತಿಹಾಸಿಕ ಹಿನ್ನೆಲೆಯುಳ್ಳ ದೇವಾಲಯವಾಗಿದೆ. ಈ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ಪ್ರಾಧಿಕಾರ ರಚನೆ ಮಾಡಲಾಗಿದೆ ಎಂದರು.
ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇತಿಹಾಸವಿರುವ ಘಾಟಿ ಸುಬ್ರಹ್ಮಣ್ಯ ಬಹಳ ಪ್ರಸಿದ್ಧವಾದ ಧಾರ್ಮಿಕ ಕ್ಷೇತ್ರ, ನನ್ನ ಕಷ್ಟದ ದಿನಗಳಲ್ಲಿ ನನ್ನ ಸ್ನೇಹಿತರು ಸುಬ್ರಹ್ಮಣ್ಯಸ್ವಾಮಿಗೆ ಪ್ರಾರ್ಥನೆ ಮಾಡಿದ್ರು, ಪ್ರಾರ್ಥನೆಗೆ ಫಲ ಸಿಕ್ಕಿದೆ, ಬಹಳ ದಿನಗಳಿಂದ ಇಲ್ಲಿಗೆ ಬರಬೇಕೆಂದು ಕೊಂಡಿದೆ, ಆದರೆ ಸಾಧ್ಯವಾಗಿರಲಲ್ಲಿ, ಇವತ್ತು ಬಂದೇ ಬರಬೇಕೆಂದು ತಿರ್ಮಾನ ಮಾಡಿದೆ, ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ ಬಹಳ ಸಂತೋಷ ತಂದಿದೆ ಎಂದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…