ದೇವಸ್ಥಾನ ಸನ್ನಿಧಿಯಲ್ಲಿ ರಾಜಕಾರಣ‌ ಮಾತನಾಡುವುದಿಲ್ಲ: ಘಾಟಿಯನ್ನು ಯಾತ್ರಿಕ ಸ್ಥಳವನ್ನಾಗಿ ಮಾಡುತ್ತೇವೆ- ಡಿಸಿಎಂ‌ ಡಿಕೆಶಿ

ದೇವಸ್ಥಾನ ಸನ್ನಿಧಿಯಲ್ಲಿ ರಾಜಕಾರಣ‌ ಬೇಡ, ಮಾತನಾಡುವುದಿಲ್ಲ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಉಪಮುಖ್ಯಮಂತ್ರಿ‌‌ ಡಿ.ಕೆ ಶಿವಕುಮಾರ್ ಹೇಳಿದರು.

ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ನಂತರ ಜಾತಿಗಣತಿ ಬಹಿರಂಗ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಹೇಳಿದ್ದಾರೆ ನಾನು ಇನ್ನೂ ವರದಿ ನೋಡಿಲ್ಲ. ನಾನು ನಿನ್ನೆ ಬೆಳಗಾವಿ, ಮಂಗಳೂರಿಗೆ ಹೋಗಿದ್ದೆ. ನೋಡ್ತೀವಿ ಅದು ಇನ್ನೂ ನಮ್ಮ ಕ್ಯಾಬಿನೆಟ್ ನಲ್ಲಿ ಚರ್ಚೆ ಆಗಬೇಕು. ಸಿಎಂ ಸದನದಲ್ಲಿ ಚರ್ಚೆ ಮಾಡ್ತೀವಿ ಅಂತಾ ಹೇಳಿದ್ದಾರೆ. ಆತುರದ ನಿರ್ಧಾರ ಯಾರು ತೆಗೆದುಕೊಳ್ಳುವುದಿಲ್ಲ. ಕೆಲವು ರಾಜಕಾರಣಿಗಳು ಸ್ಟೇಟ್ಮೆಂಟ್ ಮಾಡಬೇಕು ಮಾಡ್ತಾರೆ. ಸತ್ಯಾಂಶ ತಿಳಿದುಕೊಂಡು ಎಲ್ಲರಿಗೂ ನ್ಯಾಯ ಒದಗಿಸಿಕೊಡುವ ಕೆಲಸ ಮಾಡ್ತೇವೆ ಎಂದರು.

ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥಾನ ಪ್ರಸಿದ್ಧ, ಐತಿಹಾಸಿಕ ಹಿನ್ನೆಲೆಯುಳ್ಳ ದೇವಾಲಯವಾಗಿದೆ. ಈ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ಪ್ರಾಧಿಕಾರ ರಚನೆ ಮಾಡಲಾಗಿದೆ ಎಂದರು.

ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇತಿಹಾಸವಿರುವ ಘಾಟಿ ಸುಬ್ರಹ್ಮಣ್ಯ ಬಹಳ ಪ್ರಸಿದ್ಧವಾದ ಧಾರ್ಮಿಕ ಕ್ಷೇತ್ರ, ನನ್ನ ಕಷ್ಟದ ದಿನಗಳಲ್ಲಿ ನನ್ನ ಸ್ನೇಹಿತರು ಸುಬ್ರಹ್ಮಣ್ಯಸ್ವಾಮಿಗೆ ಪ್ರಾರ್ಥನೆ ಮಾಡಿದ್ರು, ಪ್ರಾರ್ಥನೆಗೆ ಫಲ ಸಿಕ್ಕಿದೆ, ಬಹಳ ದಿನಗಳಿಂದ ಇಲ್ಲಿಗೆ ಬರಬೇಕೆಂದು ಕೊಂಡಿದೆ, ಆದರೆ ಸಾಧ್ಯವಾಗಿರಲಲ್ಲಿ, ಇವತ್ತು ಬಂದೇ ಬರಬೇಕೆಂದು ತಿರ್ಮಾನ ಮಾಡಿದೆ, ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ ಬಹಳ ಸಂತೋಷ ತಂದಿದೆ ಎಂದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

3 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

7 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

9 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

20 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

21 hours ago