ದೇವಸ್ಥಾನ ಸನ್ನಿಧಿಯಲ್ಲಿ ರಾಜಕಾರಣ‌ ಮಾತನಾಡುವುದಿಲ್ಲ: ಘಾಟಿಯನ್ನು ಯಾತ್ರಿಕ ಸ್ಥಳವನ್ನಾಗಿ ಮಾಡುತ್ತೇವೆ- ಡಿಸಿಎಂ‌ ಡಿಕೆಶಿ

ದೇವಸ್ಥಾನ ಸನ್ನಿಧಿಯಲ್ಲಿ ರಾಜಕಾರಣ‌ ಬೇಡ, ಮಾತನಾಡುವುದಿಲ್ಲ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಉಪಮುಖ್ಯಮಂತ್ರಿ‌‌ ಡಿ.ಕೆ ಶಿವಕುಮಾರ್ ಹೇಳಿದರು.

ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ನಂತರ ಜಾತಿಗಣತಿ ಬಹಿರಂಗ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಹೇಳಿದ್ದಾರೆ ನಾನು ಇನ್ನೂ ವರದಿ ನೋಡಿಲ್ಲ. ನಾನು ನಿನ್ನೆ ಬೆಳಗಾವಿ, ಮಂಗಳೂರಿಗೆ ಹೋಗಿದ್ದೆ. ನೋಡ್ತೀವಿ ಅದು ಇನ್ನೂ ನಮ್ಮ ಕ್ಯಾಬಿನೆಟ್ ನಲ್ಲಿ ಚರ್ಚೆ ಆಗಬೇಕು. ಸಿಎಂ ಸದನದಲ್ಲಿ ಚರ್ಚೆ ಮಾಡ್ತೀವಿ ಅಂತಾ ಹೇಳಿದ್ದಾರೆ. ಆತುರದ ನಿರ್ಧಾರ ಯಾರು ತೆಗೆದುಕೊಳ್ಳುವುದಿಲ್ಲ. ಕೆಲವು ರಾಜಕಾರಣಿಗಳು ಸ್ಟೇಟ್ಮೆಂಟ್ ಮಾಡಬೇಕು ಮಾಡ್ತಾರೆ. ಸತ್ಯಾಂಶ ತಿಳಿದುಕೊಂಡು ಎಲ್ಲರಿಗೂ ನ್ಯಾಯ ಒದಗಿಸಿಕೊಡುವ ಕೆಲಸ ಮಾಡ್ತೇವೆ ಎಂದರು.

ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥಾನ ಪ್ರಸಿದ್ಧ, ಐತಿಹಾಸಿಕ ಹಿನ್ನೆಲೆಯುಳ್ಳ ದೇವಾಲಯವಾಗಿದೆ. ಈ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ಪ್ರಾಧಿಕಾರ ರಚನೆ ಮಾಡಲಾಗಿದೆ ಎಂದರು.

ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇತಿಹಾಸವಿರುವ ಘಾಟಿ ಸುಬ್ರಹ್ಮಣ್ಯ ಬಹಳ ಪ್ರಸಿದ್ಧವಾದ ಧಾರ್ಮಿಕ ಕ್ಷೇತ್ರ, ನನ್ನ ಕಷ್ಟದ ದಿನಗಳಲ್ಲಿ ನನ್ನ ಸ್ನೇಹಿತರು ಸುಬ್ರಹ್ಮಣ್ಯಸ್ವಾಮಿಗೆ ಪ್ರಾರ್ಥನೆ ಮಾಡಿದ್ರು, ಪ್ರಾರ್ಥನೆಗೆ ಫಲ ಸಿಕ್ಕಿದೆ, ಬಹಳ ದಿನಗಳಿಂದ ಇಲ್ಲಿಗೆ ಬರಬೇಕೆಂದು ಕೊಂಡಿದೆ, ಆದರೆ ಸಾಧ್ಯವಾಗಿರಲಲ್ಲಿ, ಇವತ್ತು ಬಂದೇ ಬರಬೇಕೆಂದು ತಿರ್ಮಾನ ಮಾಡಿದೆ, ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ ಬಹಳ ಸಂತೋಷ ತಂದಿದೆ ಎಂದರು.

Ramesh Babu

Journalist

Recent Posts

ಬಗರ್ ಹುಕ್ಕುಂ ಸಮಿತಿ ಸಭೆ ವಿಳಂಬ: ಹಕ್ಕುಪತ್ರಕ್ಕಾಗಿ ರೈತರ ಅಲೆದಾಟ: ಅರ್ಜಿ ಸಲ್ಲಿಸಿ ವರ್ಷಗಳಾದರೂ ಸಾಗುವಳಿ ಚೀಟಿ ಇಲ್ಲ: ಆತಂಕದಲ್ಲಿ ರೈತ

ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…

5 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

21 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

1 day ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

1 day ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

2 days ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

2 days ago