ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ, ನಗದು ವಹಿವಾಟುಗಳ ಪಾರದರ್ಶಕತೆ ಕಾಪಾಡಲು ಸಿಸಿಟಿವಿ ವೆಬ್ ಕ್ಯಾಮರಾ ಅಳವಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ನಡೆದ ದೇವಾಲಯಗಳ ಹುಂಡಿಗಳ ಭದ್ರತೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.
ದೇವಾಲಯಗಳಲ್ಲಿ ಹುಂಡಿ ಎಣಿಕೆ/ಲೆಕ್ಕಪತ್ರ ನಿರ್ವಹಣೆ ಸಂದರ್ಭದಲ್ಲಿ ಕಳ್ಳತನ ಮತ್ತು ಚಿನ್ನಾಭರಣ, ನಗದು ಇತ್ಯಾದಿಗಳ ದುರುಪಯೋಗವಾಗುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು ಅಗತ್ಯ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ದೇವಾಲಯದಲ್ಲಿ ಅಳವಡಿಸುವ ಹುಂಡಿಗಳಿಗಳು ನಾಲ್ಕು ದಿಕ್ಕಿನಿಂದ ಕಾಣುವಂತೆ ಅಗತ್ಯವಾದ ಸಿಸಿ ಟಿವಿ Web ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಿ ಧಾರ್ಮಿಕ ದತ್ತಿ ಇಲಾಖೆ ಮೇಲ್ವಿಚಾರಣೆ ನಡೆಸುವುದು. ಜೊತೆಗೆ ವೆಬ್ ಕ್ಯಾಮರಾ ಭದ್ರತೆ ದೃಷ್ಟಿಯಿಂದ ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರು, ಪೊಲೀಸ್ ಠಾಣೆ ಕಚೇರಿಗಳಿಗೆ ದೇವಾಲಯಗಳ ವೆಬ್ ಕ್ಯಾಮರಾ ಸಂಪರ್ಕ ಕಲ್ಪಿಸಿ ವೀಕ್ಷಣೆ ಮಾಡುವುದು.
ನಗದು ಕಳ್ಳತನ ತಪ್ಪಿಸಲಕ ಡಿಜಿಟಲ್ ಪಾವತಿಗೆ ಹೆಚ್ಚಿನ ಉತ್ತೇಜನ ನೀಡಲು ಕ್ಯೂ ಆರ್ ಕೋಡ್ ಅಳವಡಿಸಿ ಜೊತೆಗೆ ಅದರ ಅಡಿಯಲ್ಲಿ ಸಂಬಂಧಪಟ್ಟ ಬ್ಯಾಂಕ್ ವಿವರಗಳನ್ನು ಅಳವಡಿಸಬೇಕು.
*ಹುಂಡಿ ಎಣಿಕೆಗೆ ಸಾರ್ವಜನಿಕರಿಗೆ ಅವಕಾಶವಿಲ್ಲ*
ಹುಂಡಿ ಎಣಿಕೆಗೆ ಸಾರ್ವಜನಿಕರ ಸೇವೆಯನ್ನು ಪಡೆಯುವುದರ ಬದಲಿಗೆ ಕಡ್ಡಾಯವಾಗಿ ಗೃಹ ರಕ್ಷಕದಳ ಸಿಬ್ಬಂದಿ, ಬ್ಯಾಂಕ್ ಸಿಬ್ಬಂದಿ, ಸರ್ಕಾರಿ ನೌಕರರ ಸೇವೆಯನ್ನು ಪಡೆಯುವುದು. ಖಾಸಗಿ ಅಥವಾ ಸಾರ್ವಜನಿಕರ ಸೇವೆಯನ್ನು ಹುಂಡಿ ಎಣಿಕೆಗೆ ಪಡೆಯಲು ಅವಕಾಶವಿಲ್ಲ.
ಹುಂಡಿ ಎಣಿಕೆಯನ್ನು ಸಂಬಂಧಪಟ್ಟ ತಹಶೀಲ್ದಾರ್ ಮೇಲ್ವಿಚಾರಣೆ ನಡೆಸುವುದು. ಹುಂಡಿ ಎಣಿಕೆ ಸಂದರ್ಭದಲ್ಲಿ ಸ್ವೀಕೃತವಾಗುವ ಚಿನ್ನ, ಬೆಳ್ಳಿ ಇತರೆ ಬೆಲೆ ಬಾಳುವ ವಸ್ತುಗಳು ಸ್ವೀಕೃತವಾದಾಗ ಅಂತಹ ವಸ್ತುಗಳನ್ನು ಎಣಿಕೆ ದಿನದಂದೇ ಕಡ್ಡಾಯವಾಗಿ ಮೌಲ್ಯಮಾಪನ ಮಾಡಿಸಿ ಅಂದೇ ಸಂಬಂಧಪಟ್ಟ ಜಿಲ್ಲಾ ಉಪ/ಉಪ ಖಜಾನೆಯಲ್ಲಿ ಜಮಾ ಮಾಡಬೇಕು. ಎಣಿಕೆಗೆ ಹಾಜರಿರುವ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಖಚಿತ ಪಡಿಸಿಕೊಳ್ಳಲು Face Recognition ಅನ್ನು ಅಳವಡಿಸುವುದು ಮತ್ತು ಸಿಬ್ಬಂದಿ ಮತ್ತು ಅಧಿಕಾರಿಗಳು ಎಣಿಕೆಗೆ ಪ್ರವೇಶಿಸುವ ಸಂದರ್ಭದಲ್ಲಿ Cash in handನ್ನು ಘೋಷಿಸುವುದು. ಹುಂಡಿ ತೆರೆಯುವುದರಿಂದ, ಹುಂಡಿ ಎಣಿಕೆ ಮಾಡಿ ಬ್ಯಾಂಕಿನವರಿಗೆ ಹಸ್ತಾಂತರಿಸುವವರೆಗೆ ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣವನ್ನು ದಿನಾಂಕ ಮತ್ತು ಸಮಯ ದಾಖಲೆಯಾಗುವಂತೆ ಕಡ್ಡಾಯವಾಗಿ ಚಿತ್ರೀಕರಿಸಬೇಕು.
ಕಂದಾಯ, ಪೊಲೀಸ್, ಧಾರ್ಮಿಕ ದತ್ತಿ,, ಸ್ಥಳೀಯ ಪ್ರಾಧಿಕಾರ ಮತ್ತು ಇತರೆ ಸಂಬಂಧಪಟ್ಟ ಅಧಿಕಾರಿಗಳು ಕನಿಷ್ಠ 15 ದಿನಗಳಿಗೊಮ್ಮೆ ದೇವಾಲಯಗಳಿಗೆ ಜಂಟಿಯಾಗಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ವ್ಯವಸ್ಥೆಗಳು ಸುವ್ಯವಸ್ಥಿತ ರೀತಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳತಕ್ಕದ್ದು ಹಾಗೂ ನ್ಯೂನತೆಗಳಿದ್ದಲ್ಲಿ ಕೂಡಲೇ ಸರಿಪಡಿಸತಕ್ಕದ್ದು.
*ಪ್ರವರ್ಗ ‘ಎ’ ದೇವಾಲಯಗಳು*
1. ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೊಡ್ಡಬಳ್ಳಾಪುರ ತಾಲ್ಲೂಕು.
2. ಶ್ರೀ ಗಂಗಾಧರೇಶ್ವರಸ್ವಾಮಿ ಮತ್ತು ಶ್ರೀ ಹೊನ್ನಾದೇವಿ ದೇವಾಲಯ ಶಿವಗಂಗೆ ನೆಲಮಂಗಲ ತಾಲ್ಲೂಕು.
3. ಶ್ರೀ ಬೈಲಾಂಜನೇಯಸ್ವಾಮಿ ದೇವಾಲಯ ಬೈರಶೆಟ್ಟಿಹಳ್ಳಿ ನೆಲಮಂಗಲ ತಾಲ್ಲೂಕು.
*ಪ್ರವರ್ಗ ‘ಬಿ’ ದೇವಾಲಯಗಳು*
1. ಶ್ರೀ ವೀರಭದ್ರಸ್ವಾಮಿ ದೇವಾಲಯ ದೇವರಹೊಸಹಳ್ಳಿ ನೆಲಮಂಗಲ ತಾಲ್ಲೂಕು.
2. ಶ್ರೀ ವೆಂಕಟರಮಣಸ್ವಾಮಿ ದೇವಾಲಯ ಮಹಿಮಾಪುರ ನೆಲಮಂಗಲ ತಾಲ್ಲೂಕು.
3. ಶ್ರೀ ಕರಿತಿಮ್ಮರಾಯಸ್ವಾಮಿ ದೇವಾಲಯ ಟಿ.ಬೇಗೂರು ನೆಲಮಂಗಲ ತಾಲ್ಲೂಕು.
4. ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯ ತೇರಿನಬೀದಿ ದೊಡ್ಡಬಳ್ಳಾಪುರ ಟೌನ್.
5. ಶ್ರೀ ಕತ್ತಿಮಾರಮ್ಮ ದೇವಾಲಯ ಕೋಡಗುರ್ಕಿ ದೇವನಹಳ್ಳಿ ತಾಲ್ಲೂಕು.
ಸಭೆಯಲ್ಲಿ ಎಸ್ಪಿ ಚಂದ್ರಕಾಂತ್ ಎಂ.ವಿ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರು ನಾಮದೇವ, ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ.ದಿನೇಶ್, ದೊಡ್ಡಬಳ್ಳಾಪುರ ತಹಶೀಲ್ದಾರ್ ಮಲ್ಲಪ್ಪ, ನೆಲಮಂಗಲ ತಹಶೀಲ್ದಾರ್ ಮಲ್ಲೇಶ್, ಹೊಸಕೋಟೆ ತಹಶೀಲ್ದಾರ್ ಶೀತಲ್, ಮುಜರಾಯಿ ತಹಶೀಲ್ದಾರ್ ಹೇಮಾವತಿ, ಜಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…
ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…
ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ…
ಬೆಂಗಳೂರು ಗ್ರಾಮಾಂತರ: ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಕಟೌಟ್ ಹಾಗೂ ಬಿಲ್ಬೋರ್ಡ್ಗಳನ್ನು ಅಳವಡಿಸದಂತೆ ರಾಜ್ಯ ಸರ್ಕಾರ ಮತ್ತು ನ್ಯಾಯಾಲಯಗಳು…
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…