ದೇವಾಲಯದ ಪ್ರಸಾದ ತಿಂದು ಆಸ್ಪತ್ರೆ ಪಾಲಾದ ಭಕ್ತರು? ತೀವ್ರ ಅಸ್ವಸ್ಥಗೊಂಡಿದ್ದ ಓರ್ವ ಮಹಿಳೆ ಸಾವು: ಫುಡ್ ಪಾಯಿಸನ್ ಮಹಿಳೆ ಸಾವಿಗೆ ಕಾರಣವಾಯ್ತಾ?

ನಿನ್ನೆ ಹನುಮ ಜಯಂತಿ, ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ದೇಗುಲಗಳಿಗೆ ಭೇಟಿ ನೀಡಿ‌ ಪ್ರಸಾದ ಸೇವಿಸಿದ್ದ ನೂರಾರು ಭಕ್ತರಿಗೆ ವಾಂತಿ, ಭೇದಿಯಾಗಿ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಹೊಸಕೋಟೆ ನಗರದಲ್ಲಿ ನಡೆದಿದೆ.

ವಾಂತಿ ಭೇದಿಯಿಂದ ಬಳಲುತ್ತಿದ್ದ ಸಿದ್ದಗಂಗಮ್ಮ(65) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಹೊಸಕೋಟೆ ನಗರದ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ ಸ್ವಾಮಿ, ಕೋಟೆ ಆಂಜನೇಯ ಸ್ವಾಮಿ ಇತ್ಯಾದಿ ದೇವಾಲಯಗಳಲ್ಲಿ ಪುಳಿಯೊಗರೆ, ಪಾಯಸ, ಲಡ್ಡು ಸೇವನೆ ಮಾಡಿದ್ದ ಭಕ್ತರು ಅಸ್ವಸ್ಥಗೊಂಡಿದ್ದಾರೆ ಎಂದು ಸ್ಥಳೀಯರಿಂದ ಮಾಹಿತಿ ಒದಗಿಬಂದಿದೆ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಿನ್ನೆ ರಾತ್ರಿಯಿಂದಲೇ ಹೊಸಕೋಟೆ ಖಾಸಗಿ ಆಸ್ಪತ್ರೆ, ಕೋಲಾರ, ಬೆಂಗಳೂರು ಆಸ್ಪತ್ರೆಗಳಲ್ಲಿ ಅಸ್ವಸ್ತಗೊಂಡ ಭಕ್ತರಿಗೆ ತೀವ್ರ‌ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಫುಡ್ ಪಾಯಿಸನ್ ಮಹಿಳೆ ಸಾವಿಗೆ ಕಾರಣವಾ?ಎಂಬುದರ ಬಗ್ಗೆ ವರದಿ ಬಂದ ಮೇಲೆ ಖಚಿತಪಡಿಸುವುದಾಗಿ ವೈದ್ಯರು ಹೇಳಿದ್ದಾರೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

8 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

8 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

11 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

11 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

21 hours ago