ಡಾ.ಬಿ.ಆರ್.ಅಂಬೇಡ್ಕರ್ ಅವರು ಸರ್ವ ಸಮ್ಮತವಾದ ಪ್ರಪಂಚದಲ್ಲೇ ಅತ್ಯುತ್ತಮವಾದ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಜೀವಪರ ಸಂವಿಧಾನವನ್ನು ರಚಿಸಿಕೊಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕನ್ನಡ ಪಕ್ಷದ ಮುಖಂಡ ಸಂಜೀವ ನಾಯಕ್ ಹೇಳಿದರು.
ನಗರದ ಅರಳು ಮಲ್ಲಿಗೆ ಬಾಗಿಲು ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಆವರಣದಲ್ಲಿ ಜನಪರ ಸಂಘಟನೆಗಳ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಿಐಟಿಯು ಮುಖಂಡ ಪಿ.ಎ.ವೆಂಕಟೇಶ್ ಮಾತನಾಡಿ, ಮುಸ್ಲಿಮರಿಗೆ ಕುರಾನ್, ಕ್ರಿಶ್ಚಿಯನ್ನರಿಗೆ ಬೈಬಲ್, ಹಿಂದುಗಳಿಗೆ ರಾಮಾಯಣ-ಮಹಾಭಾರತ ಶ್ರೇಷ್ಠಗ್ರಂಥವಾದರೆ ಇಡೀ ಭಾರತೀಯರಿಗೆ ನಮ್ಮ ಹೆಮ್ಮೆಯ ಸಂವಿಧಾನ ಶ್ರೇಷ್ಠವಾದ ಗ್ರಂಥ, ಸಂವಿಧಾನವೂ ಯಾವುದೇ ವ್ಯಕ್ತಿಯನ್ನು ಧರ್ಮ, ಜಾತಿ, ಭಾಷೆ, ಆಧಾರದ ಮೇಲೆ ತಾರತಮ್ಯ ತೋರುವುದಿಲ್ಲ, ಲಿಂಗ ಅಸಮಾನತೆಯನ್ನು ಸಹಿಸುವುದಿಲ್ಲ. ಇಂತಹ ಜೀವಪರ ಮೌಲ್ಯಗಳನ್ನು ಭಾರತೀಯರಾದ ನಾವೆಲ್ಲರೂ ಪಾಲಿಸುವುದರಿಂದ ದೇಶದ ಸಮಗ್ರತೆ ಮತ್ತು ಐಕ್ಯತೆ ಗಟ್ಟಿಗೊಳ್ಳುತ್ತದೆ, ಅಸಮಾನತೆ ತೊರೆದು ಸರ್ವರೂ ಸ್ವಾಭಿಮಾನದಿಂದ ಬದುಕುವಂತಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ.ಅಂಜನೇಯ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ರಾಜುಸಣ್ಣಕ್ಕಿ, ತಾಲ್ಲೂಕು ಕನ್ನಡ ಪಕ್ಷದ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಮುನಿಪಾಪಯ್ಯ, ಶಿವರಾಜ್ ಕುಮಾರ್ ಕನ್ನಡ ಸೇನಾ ಸಮಿತಿಯ ಅಧ್ಯಕ್ಷ ಚೌಡರಾಜ್, ಕನ್ನಡಪರ ಸಂಘಟನೆಯ ಮುಖಂಡರಾದ ಮಂಜುನಾಥ್, ಮುಖ್ಯೋಪಾಧ್ಯಾಯರಾದ ಮಂಜುಳ ನಾಯ್ಕ್, ಶಿಕ್ಷಕರಾದ ಜಯಕುಮಾರ್, ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…