ಡಾ.ಬಿ.ಆರ್.ಅಂಬೇಡ್ಕರ್ ಅವರು ಸರ್ವ ಸಮ್ಮತವಾದ ಪ್ರಪಂಚದಲ್ಲೇ ಅತ್ಯುತ್ತಮವಾದ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಜೀವಪರ ಸಂವಿಧಾನವನ್ನು ರಚಿಸಿಕೊಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕನ್ನಡ ಪಕ್ಷದ ಮುಖಂಡ ಸಂಜೀವ ನಾಯಕ್ ಹೇಳಿದರು.
ನಗರದ ಅರಳು ಮಲ್ಲಿಗೆ ಬಾಗಿಲು ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಆವರಣದಲ್ಲಿ ಜನಪರ ಸಂಘಟನೆಗಳ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಿಐಟಿಯು ಮುಖಂಡ ಪಿ.ಎ.ವೆಂಕಟೇಶ್ ಮಾತನಾಡಿ, ಮುಸ್ಲಿಮರಿಗೆ ಕುರಾನ್, ಕ್ರಿಶ್ಚಿಯನ್ನರಿಗೆ ಬೈಬಲ್, ಹಿಂದುಗಳಿಗೆ ರಾಮಾಯಣ-ಮಹಾಭಾರತ ಶ್ರೇಷ್ಠಗ್ರಂಥವಾದರೆ ಇಡೀ ಭಾರತೀಯರಿಗೆ ನಮ್ಮ ಹೆಮ್ಮೆಯ ಸಂವಿಧಾನ ಶ್ರೇಷ್ಠವಾದ ಗ್ರಂಥ, ಸಂವಿಧಾನವೂ ಯಾವುದೇ ವ್ಯಕ್ತಿಯನ್ನು ಧರ್ಮ, ಜಾತಿ, ಭಾಷೆ, ಆಧಾರದ ಮೇಲೆ ತಾರತಮ್ಯ ತೋರುವುದಿಲ್ಲ, ಲಿಂಗ ಅಸಮಾನತೆಯನ್ನು ಸಹಿಸುವುದಿಲ್ಲ. ಇಂತಹ ಜೀವಪರ ಮೌಲ್ಯಗಳನ್ನು ಭಾರತೀಯರಾದ ನಾವೆಲ್ಲರೂ ಪಾಲಿಸುವುದರಿಂದ ದೇಶದ ಸಮಗ್ರತೆ ಮತ್ತು ಐಕ್ಯತೆ ಗಟ್ಟಿಗೊಳ್ಳುತ್ತದೆ, ಅಸಮಾನತೆ ತೊರೆದು ಸರ್ವರೂ ಸ್ವಾಭಿಮಾನದಿಂದ ಬದುಕುವಂತಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ.ಅಂಜನೇಯ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ರಾಜುಸಣ್ಣಕ್ಕಿ, ತಾಲ್ಲೂಕು ಕನ್ನಡ ಪಕ್ಷದ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಮುನಿಪಾಪಯ್ಯ, ಶಿವರಾಜ್ ಕುಮಾರ್ ಕನ್ನಡ ಸೇನಾ ಸಮಿತಿಯ ಅಧ್ಯಕ್ಷ ಚೌಡರಾಜ್, ಕನ್ನಡಪರ ಸಂಘಟನೆಯ ಮುಖಂಡರಾದ ಮಂಜುನಾಥ್, ಮುಖ್ಯೋಪಾಧ್ಯಾಯರಾದ ಮಂಜುಳ ನಾಯ್ಕ್, ಶಿಕ್ಷಕರಾದ ಜಯಕುಮಾರ್, ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…