ಡಾ.ಬಿ.ಆರ್.ಅಂಬೇಡ್ಕರ್ ಅವರು ಸರ್ವ ಸಮ್ಮತವಾದ ಪ್ರಪಂಚದಲ್ಲೇ ಅತ್ಯುತ್ತಮವಾದ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಜೀವಪರ ಸಂವಿಧಾನವನ್ನು ರಚಿಸಿಕೊಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕನ್ನಡ ಪಕ್ಷದ ಮುಖಂಡ ಸಂಜೀವ ನಾಯಕ್ ಹೇಳಿದರು.
ನಗರದ ಅರಳು ಮಲ್ಲಿಗೆ ಬಾಗಿಲು ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಆವರಣದಲ್ಲಿ ಜನಪರ ಸಂಘಟನೆಗಳ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಿಐಟಿಯು ಮುಖಂಡ ಪಿ.ಎ.ವೆಂಕಟೇಶ್ ಮಾತನಾಡಿ, ಮುಸ್ಲಿಮರಿಗೆ ಕುರಾನ್, ಕ್ರಿಶ್ಚಿಯನ್ನರಿಗೆ ಬೈಬಲ್, ಹಿಂದುಗಳಿಗೆ ರಾಮಾಯಣ-ಮಹಾಭಾರತ ಶ್ರೇಷ್ಠಗ್ರಂಥವಾದರೆ ಇಡೀ ಭಾರತೀಯರಿಗೆ ನಮ್ಮ ಹೆಮ್ಮೆಯ ಸಂವಿಧಾನ ಶ್ರೇಷ್ಠವಾದ ಗ್ರಂಥ, ಸಂವಿಧಾನವೂ ಯಾವುದೇ ವ್ಯಕ್ತಿಯನ್ನು ಧರ್ಮ, ಜಾತಿ, ಭಾಷೆ, ಆಧಾರದ ಮೇಲೆ ತಾರತಮ್ಯ ತೋರುವುದಿಲ್ಲ, ಲಿಂಗ ಅಸಮಾನತೆಯನ್ನು ಸಹಿಸುವುದಿಲ್ಲ. ಇಂತಹ ಜೀವಪರ ಮೌಲ್ಯಗಳನ್ನು ಭಾರತೀಯರಾದ ನಾವೆಲ್ಲರೂ ಪಾಲಿಸುವುದರಿಂದ ದೇಶದ ಸಮಗ್ರತೆ ಮತ್ತು ಐಕ್ಯತೆ ಗಟ್ಟಿಗೊಳ್ಳುತ್ತದೆ, ಅಸಮಾನತೆ ತೊರೆದು ಸರ್ವರೂ ಸ್ವಾಭಿಮಾನದಿಂದ ಬದುಕುವಂತಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ.ಅಂಜನೇಯ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ರಾಜುಸಣ್ಣಕ್ಕಿ, ತಾಲ್ಲೂಕು ಕನ್ನಡ ಪಕ್ಷದ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಮುನಿಪಾಪಯ್ಯ, ಶಿವರಾಜ್ ಕುಮಾರ್ ಕನ್ನಡ ಸೇನಾ ಸಮಿತಿಯ ಅಧ್ಯಕ್ಷ ಚೌಡರಾಜ್, ಕನ್ನಡಪರ ಸಂಘಟನೆಯ ಮುಖಂಡರಾದ ಮಂಜುನಾಥ್, ಮುಖ್ಯೋಪಾಧ್ಯಾಯರಾದ ಮಂಜುಳ ನಾಯ್ಕ್, ಶಿಕ್ಷಕರಾದ ಜಯಕುಮಾರ್, ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…