ದೇಶಕ್ಕೆ ಜೀವಪರ ಸಂವಿಧಾನವನ್ನು ಕೊಟ್ಟ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್- ಕನ್ನಡ ಪಕ್ಷದ ಮುಖಂಡ ಸಂಜೀವ ನಾಯಕ್

ಡಾ.ಬಿ.ಆರ್.ಅಂಬೇಡ್ಕರ್ ಅವರು ಸರ್ವ ಸಮ್ಮತವಾದ ಪ್ರಪಂಚದಲ್ಲೇ ಅತ್ಯುತ್ತಮವಾದ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಜೀವಪರ ಸಂವಿಧಾನವನ್ನು ರಚಿಸಿಕೊಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕನ್ನಡ ಪಕ್ಷದ ಮುಖಂಡ ಸಂಜೀವ ನಾಯಕ್ ಹೇಳಿದರು.

ನಗರದ ಅರಳು ಮಲ್ಲಿಗೆ ಬಾಗಿಲು ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಆವರಣದಲ್ಲಿ ಜನಪರ ಸಂಘಟನೆಗಳ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಿಐಟಿಯು ಮುಖಂಡ ಪಿ.ಎ.ವೆಂಕಟೇಶ್ ಮಾತನಾಡಿ, ಮುಸ್ಲಿಮರಿಗೆ ಕುರಾನ್, ಕ್ರಿಶ್ಚಿಯನ್ನರಿಗೆ ಬೈಬಲ್, ಹಿಂದುಗಳಿಗೆ ರಾಮಾಯಣ-ಮಹಾಭಾರತ ಶ್ರೇಷ್ಠಗ್ರಂಥವಾದರೆ ಇಡೀ ಭಾರತೀಯರಿಗೆ ನಮ್ಮ ಹೆಮ್ಮೆಯ ಸಂವಿಧಾನ ಶ್ರೇಷ್ಠವಾದ ಗ್ರಂಥ, ಸಂವಿಧಾನವೂ ಯಾವುದೇ ವ್ಯಕ್ತಿಯನ್ನು ಧರ್ಮ, ಜಾತಿ, ಭಾಷೆ, ಆಧಾರದ ಮೇಲೆ ತಾರತಮ್ಯ ತೋರುವುದಿಲ್ಲ, ಲಿಂಗ ಅಸಮಾನತೆಯನ್ನು ಸಹಿಸುವುದಿಲ್ಲ. ಇಂತಹ ಜೀವಪರ ಮೌಲ್ಯಗಳನ್ನು ಭಾರತೀಯರಾದ ನಾವೆಲ್ಲರೂ ಪಾಲಿಸುವುದರಿಂದ ದೇಶದ ಸಮಗ್ರತೆ ಮತ್ತು ಐಕ್ಯತೆ ಗಟ್ಟಿಗೊಳ್ಳುತ್ತದೆ, ಅಸಮಾನತೆ ತೊರೆದು ಸರ್ವರೂ ಸ್ವಾಭಿಮಾನದಿಂದ ಬದುಕುವಂತಾಗುತ್ತದೆ ಎಂದರು.

ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಸುಮಾರು ಐದು ನೂರು ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯನ್ನು ಹಂಚಿ ಸಂವಿಧಾನದ ಆಶಯಗಳನ್ನು ಮಕ್ಕಳಿಗೆ ಬೋಧನೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ.ಅಂಜನೇಯ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ರಾಜುಸಣ್ಣಕ್ಕಿ, ತಾಲ್ಲೂಕು ಕನ್ನಡ ಪಕ್ಷದ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಮುನಿಪಾಪಯ್ಯ, ಶಿವರಾಜ್ ಕುಮಾರ್ ಕನ್ನಡ ಸೇನಾ ಸಮಿತಿಯ ಅಧ್ಯಕ್ಷ ಚೌಡರಾಜ್,  ಕನ್ನಡಪರ ಸಂಘಟನೆಯ ಮುಖಂಡರಾದ ಮಂಜುನಾಥ್, ಮುಖ್ಯೋಪಾಧ್ಯಾಯರಾದ ಮಂಜುಳ ನಾಯ್ಕ್, ಶಿಕ್ಷಕರಾದ ಜಯಕುಮಾರ್, ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

6 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

17 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

18 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

18 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

20 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

23 hours ago