ದೇಶಕ್ಕೆ ಬೇಕಿರುವುದು ತಾತ್ಕಾಲಿಕ ಗ್ಯಾರಂಟಿ ಅಲ್ಲ, ಶಾಶ್ವತ ಗ್ಯಾರಂಟಿ- ಚಿಕ್ಕಬಳ್ಳಾಪುರ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌

ದೇಶಕ್ಕೆ ತಾತ್ಕಾಲಿಕ ಗ್ಯಾರಂಟಿಗಳು ಬೇಕಿಲ್ಲ. ಶಾಶ್ವತವಾದ ಹಾಗೂ ಬದುಕು ಕಟ್ಟಿಕೊಡುವ ಗ್ಯಾರಂಟಿಗಳು ಬೇಕಾಗಿದೆ ಎಂದು ಚಿಕ್ಕಬಳ್ಳಾಪುರ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.

ಯಲಹಂಕದಲ್ಲಿ ನಡೆದ ಬಿಜೆಪಿ ಬೂತ್‌ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರೊಂದಿಗೆ ಪಾಲ್ಗೊಂಡು ಅವರು ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರದಲ್ಲೇ ಈಗ 40% ಭ್ರಷ್ಟಾಚಾರ ನಡೆಯುತ್ತಿದೆ. ಇದನ್ನು ಜನರಿಗೆ ಮನವರಿಕೆ ಮಾಡಬೇಕಿದೆ. ಮೋದಿ ಸರ್ಕಾರ ಯೋಜನೆ ನೀಡುತ್ತಿದ್ದರೆ, ಕಾಂಗ್ರೆಸ್‌ ಅದನ್ನು ಕಿತ್ತುಕೊಳ್ಳುತ್ತಿದೆ. ಕಿಸಾನ್‌ ಸಮ್ಮಾನ್‌, ರೈತ ವಿದ್ಯಾನಿಧಿ, ಹಾಲು ಪ್ರೋತ್ಸಾಹಧನ ಎಲ್ಲವನ್ನೂ ಕಿತ್ತುಕೊಳ್ಳಲಾಗಿದೆ. ಆಯುಷ್ಮಾನ್‌ ಭಾರತ್‌, ಆವಾಸ್‌ ಮೊದಲಾದ ಗ್ಯಾರಂಟಿಗಳನ್ನು ಮೋದಿ ನೀಡಿದ್ದಾರೆ. ಈ ದೇಶದ ಜನರಿಗೆ ಬೇಕಿರುವುದು ಬದುಕು ಕಟ್ಟಿಕೊಡುವ ಗ್ಯಾರಂಟಿಯಾಗಿದ್ದು, ಅದನ್ನು ಪ್ರಧಾನಿ ನರೇಂದ್ರ ಮೋದಿ ನೀಡುತ್ತಿದ್ದಾರೆ ಎಂದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ ದೊಡ್ಡದು. ಯಲಹಂಕ ನನ್ನ ತಾಯಿಯ ಜನ್ಮಸ್ಥಳವಾಗಿದ್ದು, ಯಲಹಂಕದ ಜೊತೆ ನನಗೆ ಭಾವನಾತ್ಮಕ ಸಂಬಂಧ ಇದೆ ಎಂದರು.

ಈ ಚುನಾವಣೆ 140 ಕೋಟಿ ಭಾರತೀಯರನ್ನು ರಕ್ಷಣೆ ಮಾಡುವ ಚುನಾವಣೆ. ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟವಾಗಿದೆ. ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಕೇಳಿಬಂದಿದೆ. ಇವರ ಬಗ್ಗೆ ಕಾಂಗ್ರೆಸ್‌ ಸರ್ಕಾರ ಮೃದು ಧೋರಣೆ ತಾಳಿದೆ. ಇಂತಹ ಸ್ಥಿತಿಯಲ್ಲಿ ನಮಗೆ ನರೇಂದ್ರ ಮೋದಿ ನಾಯಕತ್ವ ಬೇಕಿದೆ. ಗುಜರಾತ್‌ನಲ್ಲಿ ಮುಖ್ಯಮಂತ್ರಿಯಾಗಿ ನಂತರ ಪ್ರಧಾನಿಯಾಗಲು ಹೊರಟಾಗ ಅವರು ಚಾ ಮಾರಾಟ ಮಾಡುವವರು ಎಂದು ಕಾಂಗ್ರೆಸ್‌ ಟೀಕೆ ಮಾಡಿತ್ತು. ಆಗ *ಚಾಯ್‌ ಪೇ ಚರ್ಚಾ* ಮಾಡಿ ನಮ್ಮ ಕಾರ್ಯಕರ್ತರು ಕಾಂಗ್ರೆಸ್‌ನ ಬಾಯಿ ಮುಚ್ಚಿಸಿದ್ದರು ಎಂದು ನೆನಪಿಸಿಕೊಂಡರು.

ಪ್ರಧಾನಿ ಮೋದಿ ಅವರು ನಾನೇನ್ ದೇಶವನ್ನು ರಕ್ಷಿಸುವ ಚೌಕಿದಾರ ಎಂದು ಹೇಳಿಕೊಂಡರೆ ಕಾಂಗ್ರೆಸ್ ಪಕ್ಷದವರು ಚೌಕಿದಾರ್ ಚೋರ್ ಎಂದರು. ನಂತರ ಜನರು ‘ನಾನೂ ಚೌಕಿದಾರ’ ಎಂದು ಕಾಂಗ್ರೆಸ್‌ಗೆ ಬುದ್ಧಿ ಕಲಿಸಿದ್ದರು. ಈಗ ಮೋದಿಗೆ ಪರಿವಾರ ಇಲ್ಲ ಎಂದರೆ ಎಲ್ಲ ಕಾರ್ಯಕರ್ತರು ನಾವೇ ಅವರ ಕುಟುಂಬ ಎಂದು ಹೆಮ್ಮೆಯಿಂದ ಹೇಳುತ್ತಿದ್ದೇವೆ. ಈ ಚುನಾವಣೆಯಲ್ಲಿ ಬಿಜೆಪಿ *ಕಾರ್ಯಕರ್ತರೇ ಸೇನಾಧಿಪತಿಗಳಾಗಿದ್ದಾರೆ.* 400 ರ ಗುರಿಯನ್ನು ಮುಟ್ಟಲು ಕಾರ್ಯಕರ್ತರು ಕೆಲಸ ಮಾಡಬೇಕಿದೆ. ಆ 400 ರಲ್ಲಿ ನಾನೂ ಒಬ್ಬನಾಗಿದ್ದೇನೆ. ಈ 400 ರಲ್ಲಿ ನಮ್ಮ ರಾಜ್ಯದ ಸಂಸದರು ಇರಬೇಕು ಎಂಬುದನ್ನು ಜನರಿಗೆ ತಿಳಿಸಬೇಕು ಎಂದರು.

*ಅಭಿವೃದ್ಧಿ ಇಲ್ಲ, ನೀರಿಲ್ಲ*

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಕುಡಿಯುವ ನೀರನ್ನು ಅವರ ಇಂಡಿ ಕೂಟದ ಪಾಲುದಾರರಾದ ತಮಿಳುನಾಡು ಸರ್ಕಾರಕ್ಕೆ ಬಿಟ್ಟಿದ್ದಾರೆ. ಕೋವಿಡ್‌ ಸಮಯದಲ್ಲಿ ಮೇಕೆದಾಟು ಪಾದಯಾತ್ರೆ ಮಾಡಿ ಈಗ ಆ ಯೋಜನೆಯ ಬಗ್ಗೆ ಮಾತಾಡುತ್ತಿಲ್ಲ, ಎಂದರು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

4 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

5 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

5 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

5 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

8 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

12 hours ago