ದೇಶಕ್ಕೆ ಬೇಕಿರುವುದು ತಾತ್ಕಾಲಿಕ ಗ್ಯಾರಂಟಿ ಅಲ್ಲ, ಶಾಶ್ವತ ಗ್ಯಾರಂಟಿ- ಚಿಕ್ಕಬಳ್ಳಾಪುರ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌

ದೇಶಕ್ಕೆ ತಾತ್ಕಾಲಿಕ ಗ್ಯಾರಂಟಿಗಳು ಬೇಕಿಲ್ಲ. ಶಾಶ್ವತವಾದ ಹಾಗೂ ಬದುಕು ಕಟ್ಟಿಕೊಡುವ ಗ್ಯಾರಂಟಿಗಳು ಬೇಕಾಗಿದೆ ಎಂದು ಚಿಕ್ಕಬಳ್ಳಾಪುರ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.

ಯಲಹಂಕದಲ್ಲಿ ನಡೆದ ಬಿಜೆಪಿ ಬೂತ್‌ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರೊಂದಿಗೆ ಪಾಲ್ಗೊಂಡು ಅವರು ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರದಲ್ಲೇ ಈಗ 40% ಭ್ರಷ್ಟಾಚಾರ ನಡೆಯುತ್ತಿದೆ. ಇದನ್ನು ಜನರಿಗೆ ಮನವರಿಕೆ ಮಾಡಬೇಕಿದೆ. ಮೋದಿ ಸರ್ಕಾರ ಯೋಜನೆ ನೀಡುತ್ತಿದ್ದರೆ, ಕಾಂಗ್ರೆಸ್‌ ಅದನ್ನು ಕಿತ್ತುಕೊಳ್ಳುತ್ತಿದೆ. ಕಿಸಾನ್‌ ಸಮ್ಮಾನ್‌, ರೈತ ವಿದ್ಯಾನಿಧಿ, ಹಾಲು ಪ್ರೋತ್ಸಾಹಧನ ಎಲ್ಲವನ್ನೂ ಕಿತ್ತುಕೊಳ್ಳಲಾಗಿದೆ. ಆಯುಷ್ಮಾನ್‌ ಭಾರತ್‌, ಆವಾಸ್‌ ಮೊದಲಾದ ಗ್ಯಾರಂಟಿಗಳನ್ನು ಮೋದಿ ನೀಡಿದ್ದಾರೆ. ಈ ದೇಶದ ಜನರಿಗೆ ಬೇಕಿರುವುದು ಬದುಕು ಕಟ್ಟಿಕೊಡುವ ಗ್ಯಾರಂಟಿಯಾಗಿದ್ದು, ಅದನ್ನು ಪ್ರಧಾನಿ ನರೇಂದ್ರ ಮೋದಿ ನೀಡುತ್ತಿದ್ದಾರೆ ಎಂದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ ದೊಡ್ಡದು. ಯಲಹಂಕ ನನ್ನ ತಾಯಿಯ ಜನ್ಮಸ್ಥಳವಾಗಿದ್ದು, ಯಲಹಂಕದ ಜೊತೆ ನನಗೆ ಭಾವನಾತ್ಮಕ ಸಂಬಂಧ ಇದೆ ಎಂದರು.

ಈ ಚುನಾವಣೆ 140 ಕೋಟಿ ಭಾರತೀಯರನ್ನು ರಕ್ಷಣೆ ಮಾಡುವ ಚುನಾವಣೆ. ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟವಾಗಿದೆ. ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಕೇಳಿಬಂದಿದೆ. ಇವರ ಬಗ್ಗೆ ಕಾಂಗ್ರೆಸ್‌ ಸರ್ಕಾರ ಮೃದು ಧೋರಣೆ ತಾಳಿದೆ. ಇಂತಹ ಸ್ಥಿತಿಯಲ್ಲಿ ನಮಗೆ ನರೇಂದ್ರ ಮೋದಿ ನಾಯಕತ್ವ ಬೇಕಿದೆ. ಗುಜರಾತ್‌ನಲ್ಲಿ ಮುಖ್ಯಮಂತ್ರಿಯಾಗಿ ನಂತರ ಪ್ರಧಾನಿಯಾಗಲು ಹೊರಟಾಗ ಅವರು ಚಾ ಮಾರಾಟ ಮಾಡುವವರು ಎಂದು ಕಾಂಗ್ರೆಸ್‌ ಟೀಕೆ ಮಾಡಿತ್ತು. ಆಗ *ಚಾಯ್‌ ಪೇ ಚರ್ಚಾ* ಮಾಡಿ ನಮ್ಮ ಕಾರ್ಯಕರ್ತರು ಕಾಂಗ್ರೆಸ್‌ನ ಬಾಯಿ ಮುಚ್ಚಿಸಿದ್ದರು ಎಂದು ನೆನಪಿಸಿಕೊಂಡರು.

ಪ್ರಧಾನಿ ಮೋದಿ ಅವರು ನಾನೇನ್ ದೇಶವನ್ನು ರಕ್ಷಿಸುವ ಚೌಕಿದಾರ ಎಂದು ಹೇಳಿಕೊಂಡರೆ ಕಾಂಗ್ರೆಸ್ ಪಕ್ಷದವರು ಚೌಕಿದಾರ್ ಚೋರ್ ಎಂದರು. ನಂತರ ಜನರು ‘ನಾನೂ ಚೌಕಿದಾರ’ ಎಂದು ಕಾಂಗ್ರೆಸ್‌ಗೆ ಬುದ್ಧಿ ಕಲಿಸಿದ್ದರು. ಈಗ ಮೋದಿಗೆ ಪರಿವಾರ ಇಲ್ಲ ಎಂದರೆ ಎಲ್ಲ ಕಾರ್ಯಕರ್ತರು ನಾವೇ ಅವರ ಕುಟುಂಬ ಎಂದು ಹೆಮ್ಮೆಯಿಂದ ಹೇಳುತ್ತಿದ್ದೇವೆ. ಈ ಚುನಾವಣೆಯಲ್ಲಿ ಬಿಜೆಪಿ *ಕಾರ್ಯಕರ್ತರೇ ಸೇನಾಧಿಪತಿಗಳಾಗಿದ್ದಾರೆ.* 400 ರ ಗುರಿಯನ್ನು ಮುಟ್ಟಲು ಕಾರ್ಯಕರ್ತರು ಕೆಲಸ ಮಾಡಬೇಕಿದೆ. ಆ 400 ರಲ್ಲಿ ನಾನೂ ಒಬ್ಬನಾಗಿದ್ದೇನೆ. ಈ 400 ರಲ್ಲಿ ನಮ್ಮ ರಾಜ್ಯದ ಸಂಸದರು ಇರಬೇಕು ಎಂಬುದನ್ನು ಜನರಿಗೆ ತಿಳಿಸಬೇಕು ಎಂದರು.

*ಅಭಿವೃದ್ಧಿ ಇಲ್ಲ, ನೀರಿಲ್ಲ*

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಕುಡಿಯುವ ನೀರನ್ನು ಅವರ ಇಂಡಿ ಕೂಟದ ಪಾಲುದಾರರಾದ ತಮಿಳುನಾಡು ಸರ್ಕಾರಕ್ಕೆ ಬಿಟ್ಟಿದ್ದಾರೆ. ಕೋವಿಡ್‌ ಸಮಯದಲ್ಲಿ ಮೇಕೆದಾಟು ಪಾದಯಾತ್ರೆ ಮಾಡಿ ಈಗ ಆ ಯೋಜನೆಯ ಬಗ್ಗೆ ಮಾತಾಡುತ್ತಿಲ್ಲ, ಎಂದರು.

Ramesh Babu

Journalist

Recent Posts

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

3 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

6 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

8 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

12 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

14 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago