ದೇಶಕ್ಕೆ ಬೇಕಿರುವುದು ತಾತ್ಕಾಲಿಕ ಗ್ಯಾರಂಟಿ ಅಲ್ಲ, ಶಾಶ್ವತ ಗ್ಯಾರಂಟಿ- ಚಿಕ್ಕಬಳ್ಳಾಪುರ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌

ದೇಶಕ್ಕೆ ತಾತ್ಕಾಲಿಕ ಗ್ಯಾರಂಟಿಗಳು ಬೇಕಿಲ್ಲ. ಶಾಶ್ವತವಾದ ಹಾಗೂ ಬದುಕು ಕಟ್ಟಿಕೊಡುವ ಗ್ಯಾರಂಟಿಗಳು ಬೇಕಾಗಿದೆ ಎಂದು ಚಿಕ್ಕಬಳ್ಳಾಪುರ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.

ಯಲಹಂಕದಲ್ಲಿ ನಡೆದ ಬಿಜೆಪಿ ಬೂತ್‌ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರೊಂದಿಗೆ ಪಾಲ್ಗೊಂಡು ಅವರು ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರದಲ್ಲೇ ಈಗ 40% ಭ್ರಷ್ಟಾಚಾರ ನಡೆಯುತ್ತಿದೆ. ಇದನ್ನು ಜನರಿಗೆ ಮನವರಿಕೆ ಮಾಡಬೇಕಿದೆ. ಮೋದಿ ಸರ್ಕಾರ ಯೋಜನೆ ನೀಡುತ್ತಿದ್ದರೆ, ಕಾಂಗ್ರೆಸ್‌ ಅದನ್ನು ಕಿತ್ತುಕೊಳ್ಳುತ್ತಿದೆ. ಕಿಸಾನ್‌ ಸಮ್ಮಾನ್‌, ರೈತ ವಿದ್ಯಾನಿಧಿ, ಹಾಲು ಪ್ರೋತ್ಸಾಹಧನ ಎಲ್ಲವನ್ನೂ ಕಿತ್ತುಕೊಳ್ಳಲಾಗಿದೆ. ಆಯುಷ್ಮಾನ್‌ ಭಾರತ್‌, ಆವಾಸ್‌ ಮೊದಲಾದ ಗ್ಯಾರಂಟಿಗಳನ್ನು ಮೋದಿ ನೀಡಿದ್ದಾರೆ. ಈ ದೇಶದ ಜನರಿಗೆ ಬೇಕಿರುವುದು ಬದುಕು ಕಟ್ಟಿಕೊಡುವ ಗ್ಯಾರಂಟಿಯಾಗಿದ್ದು, ಅದನ್ನು ಪ್ರಧಾನಿ ನರೇಂದ್ರ ಮೋದಿ ನೀಡುತ್ತಿದ್ದಾರೆ ಎಂದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ ದೊಡ್ಡದು. ಯಲಹಂಕ ನನ್ನ ತಾಯಿಯ ಜನ್ಮಸ್ಥಳವಾಗಿದ್ದು, ಯಲಹಂಕದ ಜೊತೆ ನನಗೆ ಭಾವನಾತ್ಮಕ ಸಂಬಂಧ ಇದೆ ಎಂದರು.

ಈ ಚುನಾವಣೆ 140 ಕೋಟಿ ಭಾರತೀಯರನ್ನು ರಕ್ಷಣೆ ಮಾಡುವ ಚುನಾವಣೆ. ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟವಾಗಿದೆ. ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಕೇಳಿಬಂದಿದೆ. ಇವರ ಬಗ್ಗೆ ಕಾಂಗ್ರೆಸ್‌ ಸರ್ಕಾರ ಮೃದು ಧೋರಣೆ ತಾಳಿದೆ. ಇಂತಹ ಸ್ಥಿತಿಯಲ್ಲಿ ನಮಗೆ ನರೇಂದ್ರ ಮೋದಿ ನಾಯಕತ್ವ ಬೇಕಿದೆ. ಗುಜರಾತ್‌ನಲ್ಲಿ ಮುಖ್ಯಮಂತ್ರಿಯಾಗಿ ನಂತರ ಪ್ರಧಾನಿಯಾಗಲು ಹೊರಟಾಗ ಅವರು ಚಾ ಮಾರಾಟ ಮಾಡುವವರು ಎಂದು ಕಾಂಗ್ರೆಸ್‌ ಟೀಕೆ ಮಾಡಿತ್ತು. ಆಗ *ಚಾಯ್‌ ಪೇ ಚರ್ಚಾ* ಮಾಡಿ ನಮ್ಮ ಕಾರ್ಯಕರ್ತರು ಕಾಂಗ್ರೆಸ್‌ನ ಬಾಯಿ ಮುಚ್ಚಿಸಿದ್ದರು ಎಂದು ನೆನಪಿಸಿಕೊಂಡರು.

ಪ್ರಧಾನಿ ಮೋದಿ ಅವರು ನಾನೇನ್ ದೇಶವನ್ನು ರಕ್ಷಿಸುವ ಚೌಕಿದಾರ ಎಂದು ಹೇಳಿಕೊಂಡರೆ ಕಾಂಗ್ರೆಸ್ ಪಕ್ಷದವರು ಚೌಕಿದಾರ್ ಚೋರ್ ಎಂದರು. ನಂತರ ಜನರು ‘ನಾನೂ ಚೌಕಿದಾರ’ ಎಂದು ಕಾಂಗ್ರೆಸ್‌ಗೆ ಬುದ್ಧಿ ಕಲಿಸಿದ್ದರು. ಈಗ ಮೋದಿಗೆ ಪರಿವಾರ ಇಲ್ಲ ಎಂದರೆ ಎಲ್ಲ ಕಾರ್ಯಕರ್ತರು ನಾವೇ ಅವರ ಕುಟುಂಬ ಎಂದು ಹೆಮ್ಮೆಯಿಂದ ಹೇಳುತ್ತಿದ್ದೇವೆ. ಈ ಚುನಾವಣೆಯಲ್ಲಿ ಬಿಜೆಪಿ *ಕಾರ್ಯಕರ್ತರೇ ಸೇನಾಧಿಪತಿಗಳಾಗಿದ್ದಾರೆ.* 400 ರ ಗುರಿಯನ್ನು ಮುಟ್ಟಲು ಕಾರ್ಯಕರ್ತರು ಕೆಲಸ ಮಾಡಬೇಕಿದೆ. ಆ 400 ರಲ್ಲಿ ನಾನೂ ಒಬ್ಬನಾಗಿದ್ದೇನೆ. ಈ 400 ರಲ್ಲಿ ನಮ್ಮ ರಾಜ್ಯದ ಸಂಸದರು ಇರಬೇಕು ಎಂಬುದನ್ನು ಜನರಿಗೆ ತಿಳಿಸಬೇಕು ಎಂದರು.

*ಅಭಿವೃದ್ಧಿ ಇಲ್ಲ, ನೀರಿಲ್ಲ*

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಕುಡಿಯುವ ನೀರನ್ನು ಅವರ ಇಂಡಿ ಕೂಟದ ಪಾಲುದಾರರಾದ ತಮಿಳುನಾಡು ಸರ್ಕಾರಕ್ಕೆ ಬಿಟ್ಟಿದ್ದಾರೆ. ಕೋವಿಡ್‌ ಸಮಯದಲ್ಲಿ ಮೇಕೆದಾಟು ಪಾದಯಾತ್ರೆ ಮಾಡಿ ಈಗ ಆ ಯೋಜನೆಯ ಬಗ್ಗೆ ಮಾತಾಡುತ್ತಿಲ್ಲ, ಎಂದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago