ದೇಶಕ್ಕೆ ಬೇಕಿರುವುದು ತಾತ್ಕಾಲಿಕ ಗ್ಯಾರಂಟಿ ಅಲ್ಲ, ಶಾಶ್ವತ ಗ್ಯಾರಂಟಿ- ಚಿಕ್ಕಬಳ್ಳಾಪುರ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌

ದೇಶಕ್ಕೆ ತಾತ್ಕಾಲಿಕ ಗ್ಯಾರಂಟಿಗಳು ಬೇಕಿಲ್ಲ. ಶಾಶ್ವತವಾದ ಹಾಗೂ ಬದುಕು ಕಟ್ಟಿಕೊಡುವ ಗ್ಯಾರಂಟಿಗಳು ಬೇಕಾಗಿದೆ ಎಂದು ಚಿಕ್ಕಬಳ್ಳಾಪುರ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.

ಯಲಹಂಕದಲ್ಲಿ ನಡೆದ ಬಿಜೆಪಿ ಬೂತ್‌ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರೊಂದಿಗೆ ಪಾಲ್ಗೊಂಡು ಅವರು ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರದಲ್ಲೇ ಈಗ 40% ಭ್ರಷ್ಟಾಚಾರ ನಡೆಯುತ್ತಿದೆ. ಇದನ್ನು ಜನರಿಗೆ ಮನವರಿಕೆ ಮಾಡಬೇಕಿದೆ. ಮೋದಿ ಸರ್ಕಾರ ಯೋಜನೆ ನೀಡುತ್ತಿದ್ದರೆ, ಕಾಂಗ್ರೆಸ್‌ ಅದನ್ನು ಕಿತ್ತುಕೊಳ್ಳುತ್ತಿದೆ. ಕಿಸಾನ್‌ ಸಮ್ಮಾನ್‌, ರೈತ ವಿದ್ಯಾನಿಧಿ, ಹಾಲು ಪ್ರೋತ್ಸಾಹಧನ ಎಲ್ಲವನ್ನೂ ಕಿತ್ತುಕೊಳ್ಳಲಾಗಿದೆ. ಆಯುಷ್ಮಾನ್‌ ಭಾರತ್‌, ಆವಾಸ್‌ ಮೊದಲಾದ ಗ್ಯಾರಂಟಿಗಳನ್ನು ಮೋದಿ ನೀಡಿದ್ದಾರೆ. ಈ ದೇಶದ ಜನರಿಗೆ ಬೇಕಿರುವುದು ಬದುಕು ಕಟ್ಟಿಕೊಡುವ ಗ್ಯಾರಂಟಿಯಾಗಿದ್ದು, ಅದನ್ನು ಪ್ರಧಾನಿ ನರೇಂದ್ರ ಮೋದಿ ನೀಡುತ್ತಿದ್ದಾರೆ ಎಂದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಸಂಖ್ಯೆ ದೊಡ್ಡದು. ಯಲಹಂಕ ನನ್ನ ತಾಯಿಯ ಜನ್ಮಸ್ಥಳವಾಗಿದ್ದು, ಯಲಹಂಕದ ಜೊತೆ ನನಗೆ ಭಾವನಾತ್ಮಕ ಸಂಬಂಧ ಇದೆ ಎಂದರು.

ಈ ಚುನಾವಣೆ 140 ಕೋಟಿ ಭಾರತೀಯರನ್ನು ರಕ್ಷಣೆ ಮಾಡುವ ಚುನಾವಣೆ. ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟವಾಗಿದೆ. ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಕೇಳಿಬಂದಿದೆ. ಇವರ ಬಗ್ಗೆ ಕಾಂಗ್ರೆಸ್‌ ಸರ್ಕಾರ ಮೃದು ಧೋರಣೆ ತಾಳಿದೆ. ಇಂತಹ ಸ್ಥಿತಿಯಲ್ಲಿ ನಮಗೆ ನರೇಂದ್ರ ಮೋದಿ ನಾಯಕತ್ವ ಬೇಕಿದೆ. ಗುಜರಾತ್‌ನಲ್ಲಿ ಮುಖ್ಯಮಂತ್ರಿಯಾಗಿ ನಂತರ ಪ್ರಧಾನಿಯಾಗಲು ಹೊರಟಾಗ ಅವರು ಚಾ ಮಾರಾಟ ಮಾಡುವವರು ಎಂದು ಕಾಂಗ್ರೆಸ್‌ ಟೀಕೆ ಮಾಡಿತ್ತು. ಆಗ *ಚಾಯ್‌ ಪೇ ಚರ್ಚಾ* ಮಾಡಿ ನಮ್ಮ ಕಾರ್ಯಕರ್ತರು ಕಾಂಗ್ರೆಸ್‌ನ ಬಾಯಿ ಮುಚ್ಚಿಸಿದ್ದರು ಎಂದು ನೆನಪಿಸಿಕೊಂಡರು.

ಪ್ರಧಾನಿ ಮೋದಿ ಅವರು ನಾನೇನ್ ದೇಶವನ್ನು ರಕ್ಷಿಸುವ ಚೌಕಿದಾರ ಎಂದು ಹೇಳಿಕೊಂಡರೆ ಕಾಂಗ್ರೆಸ್ ಪಕ್ಷದವರು ಚೌಕಿದಾರ್ ಚೋರ್ ಎಂದರು. ನಂತರ ಜನರು ‘ನಾನೂ ಚೌಕಿದಾರ’ ಎಂದು ಕಾಂಗ್ರೆಸ್‌ಗೆ ಬುದ್ಧಿ ಕಲಿಸಿದ್ದರು. ಈಗ ಮೋದಿಗೆ ಪರಿವಾರ ಇಲ್ಲ ಎಂದರೆ ಎಲ್ಲ ಕಾರ್ಯಕರ್ತರು ನಾವೇ ಅವರ ಕುಟುಂಬ ಎಂದು ಹೆಮ್ಮೆಯಿಂದ ಹೇಳುತ್ತಿದ್ದೇವೆ. ಈ ಚುನಾವಣೆಯಲ್ಲಿ ಬಿಜೆಪಿ *ಕಾರ್ಯಕರ್ತರೇ ಸೇನಾಧಿಪತಿಗಳಾಗಿದ್ದಾರೆ.* 400 ರ ಗುರಿಯನ್ನು ಮುಟ್ಟಲು ಕಾರ್ಯಕರ್ತರು ಕೆಲಸ ಮಾಡಬೇಕಿದೆ. ಆ 400 ರಲ್ಲಿ ನಾನೂ ಒಬ್ಬನಾಗಿದ್ದೇನೆ. ಈ 400 ರಲ್ಲಿ ನಮ್ಮ ರಾಜ್ಯದ ಸಂಸದರು ಇರಬೇಕು ಎಂಬುದನ್ನು ಜನರಿಗೆ ತಿಳಿಸಬೇಕು ಎಂದರು.

*ಅಭಿವೃದ್ಧಿ ಇಲ್ಲ, ನೀರಿಲ್ಲ*

ಬೆಂಗಳೂರಿನಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಕುಡಿಯುವ ನೀರನ್ನು ಅವರ ಇಂಡಿ ಕೂಟದ ಪಾಲುದಾರರಾದ ತಮಿಳುನಾಡು ಸರ್ಕಾರಕ್ಕೆ ಬಿಟ್ಟಿದ್ದಾರೆ. ಕೋವಿಡ್‌ ಸಮಯದಲ್ಲಿ ಮೇಕೆದಾಟು ಪಾದಯಾತ್ರೆ ಮಾಡಿ ಈಗ ಆ ಯೋಜನೆಯ ಬಗ್ಗೆ ಮಾತಾಡುತ್ತಿಲ್ಲ, ಎಂದರು.

Ramesh Babu

Journalist

Recent Posts

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

5 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

6 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

10 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

14 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

18 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago