ದೇಶಕ್ಕೆ, ರಾಜ್ಯಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ನ ಸೇವೆ ಅಪಾರ- ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರಾಧಿಕಾರದ ಸದಸ್ಯ ಆರ್.ವಿ.ಮಹೇಶ್

ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತರಾಗಿ ಆಯ್ಕೆಗೊಂಡ ಅಭ್ಯರ್ಥಿಗಳು ಇಂದು ತಾಲೂಕಿನ ಪುಣ್ಯ ಕ್ಷೇತ್ರ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ವೇಳೆ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರಾಧಿಕಾರದ ವತಿಯಿಂದ ಕ್ಷೇತ್ರದ ವಿಶೇಷತೆ, ದೇವರ ಮಹಿಮೆ ಬಗ್ಗೆ ಮಾಹಿತಿ ನೀಡಲಾಯಿತು.

ಭಾರತ ಸೇವಾದಳದ ತಾಲೂಕು ಘಟಕದ ಅಧ್ಯಕ್ಷ ಹಾಗೂ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರಾಧಿಕಾರದ ಸದಸ್ಯ ಆರ.ವಿ.ಮಹೇಶ್ ಮಾತನಾಡಿ, ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಸುಮಾರು 55 ಮಂದಿ ಸ್ಕೌಟ್ಸ್ ಮತ್ತು ಗೈಡ್ಸ್ ನ ಮುಖ್ಯ ಆಯುಕ್ತರಾಗಿ ಆಯ್ಕೆಗೊಂಡು ತಾಲೂಕಿನ ಅನಿಬೆಸೆಂಟ್ ಪಾರ್ಕ್ ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಅವರಿಗೆ ಇಂದು ಪ್ರಾಧಿಕಾರದ ವತಿಯಿಂದ ಘಾಟಿ ದೇವಸ್ಥಾನಕ್ಕೆ ಆಹ್ವಾನಿಸಿ ದೇವರ ದರ್ಶನ ಮಾಡಿಸಲಾಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ದೇಶಕ್ಕೆ, ರಾಜ್ಯಕ್ಕೆ ತನ್ನದೇ ಆದ ಸೇವೆಯನ್ನು ಮಾಡುತ್ತಿದೆ ಎಂದರು.

ಈ ಸಂದರ್ಭದಲ್ಲಿ ಘಾಟಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಹೇಮಲತಾ ರಮೇಶ್, ಪ್ರಧಾನ ಅರ್ಚಕ ಸುಬ್ರಮಣಿ, ಭೂ ಮಂಜುರಾತಿ ಸದಸ್ಯ ಗಂಗಸಂದ್ರ ಶ್ರೀಧರ್, ಯುವ ಕಾಂಗ್ರೆಸ್ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್.ವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ

ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…

58 minutes ago

ಬೈಕ್‌–ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ತ್ರಿಬಲ್‌ ರೈಡಿಂಗ್‌ನಲ್ಲಿ ತೆರಳುತ್ತಿದ್ದ ಬೈಕ್‌ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…

3 hours ago

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

15 hours ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

1 day ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

1 day ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

1 day ago