ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು ಕಾಯಕ ಪದ್ಧತಿಯನ್ನು ಹೇಳಿದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಶೂದ್ರ ಮತ್ತು ಮಹಿಳೆಯರನ್ನು ಶತ- ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು. ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆಯನ್ನು ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು. 9,60,000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು. ಶಿಕ್ಷಣದಿಂದ ಅಸಮಾನತೆ ದೂರ ಮಾಡಬಹುದು ಎಂದು ಹೇಳಿದರು.
ಸಹಾಯ ಧನ ಪಡೆಯುತ್ತಿರುವ ಇವರೆಲ್ಲರೂ ಅಸಂಘಟಿತ ಕಾರ್ಮಿಕರ ಮಕ್ಕಳು. ಶೇ 83 ರಷ್ಟು ಕಾರ್ಮಿಕರು ಇವತ್ತಿಗೂ ಅಸಂಘಟಿತರಾಗಿದ್ದಾರೆ. ದೇಶದಲ್ಲಿ ರೈತ ಸಮುದಾಯವನ್ನು ಬಿಟ್ಟರೆ ಎರಡನೇ ಅತೀ ದೊಡ್ಡ ಸಮುದಾಯ ಕಾರ್ಮಿಕ ಸಮುದಾಯ. ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪಟ್ಟಭದ್ರರನ್ನು ನಾವು ದೂರ ಇಡಬೇಕು. ಈ ಪಟ್ಟ ಭದ್ರರು ಸಾಮಾಜಿಕ ನ್ಯಾಯದ ವಿರೋಧಿಗಳು. ಈ ವಿಭಜಕರು ಶೂದ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆ ಬರುವುದನ್ನು ವಿರೋಧಿಸುತ್ತಾರೆ. ಆದ್ದರಿಂದ ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವವರನ್ನು ನಾವು ವಿರೋಧಿಸಬೇಕು ಎಂದರು.
ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಿಂದ ನಾವು ಎಲ್ಲಾ ಜಾತಿ-ಧರ್ಮದವರಿಗೆ ಅನುಕೂಲ ಆಗುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…