ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು ಕಾಯಕ ಪದ್ಧತಿಯನ್ನು ಹೇಳಿದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಶೂದ್ರ ಮತ್ತು ಮಹಿಳೆಯರನ್ನು ಶತ- ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು. ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆಯನ್ನು ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು. 9,60,000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು. ಶಿಕ್ಷಣದಿಂದ ಅಸಮಾನತೆ ದೂರ ಮಾಡಬಹುದು ಎಂದು ಹೇಳಿದರು.
ಸಹಾಯ ಧನ ಪಡೆಯುತ್ತಿರುವ ಇವರೆಲ್ಲರೂ ಅಸಂಘಟಿತ ಕಾರ್ಮಿಕರ ಮಕ್ಕಳು. ಶೇ 83 ರಷ್ಟು ಕಾರ್ಮಿಕರು ಇವತ್ತಿಗೂ ಅಸಂಘಟಿತರಾಗಿದ್ದಾರೆ. ದೇಶದಲ್ಲಿ ರೈತ ಸಮುದಾಯವನ್ನು ಬಿಟ್ಟರೆ ಎರಡನೇ ಅತೀ ದೊಡ್ಡ ಸಮುದಾಯ ಕಾರ್ಮಿಕ ಸಮುದಾಯ. ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪಟ್ಟಭದ್ರರನ್ನು ನಾವು ದೂರ ಇಡಬೇಕು. ಈ ಪಟ್ಟ ಭದ್ರರು ಸಾಮಾಜಿಕ ನ್ಯಾಯದ ವಿರೋಧಿಗಳು. ಈ ವಿಭಜಕರು ಶೂದ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆ ಬರುವುದನ್ನು ವಿರೋಧಿಸುತ್ತಾರೆ. ಆದ್ದರಿಂದ ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವವರನ್ನು ನಾವು ವಿರೋಧಿಸಬೇಕು ಎಂದರು.
ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಿಂದ ನಾವು ಎಲ್ಲಾ ಜಾತಿ-ಧರ್ಮದವರಿಗೆ ಅನುಕೂಲ ಆಗುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…