ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು ಕಾಯಕ ಪದ್ಧತಿಯನ್ನು ಹೇಳಿದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಶೂದ್ರ ಮತ್ತು ಮಹಿಳೆಯರನ್ನು ಶತ- ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು. ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆಯನ್ನು ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು. 9,60,000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು. ಶಿಕ್ಷಣದಿಂದ ಅಸಮಾನತೆ ದೂರ ಮಾಡಬಹುದು ಎಂದು ಹೇಳಿದರು.
ಸಹಾಯ ಧನ ಪಡೆಯುತ್ತಿರುವ ಇವರೆಲ್ಲರೂ ಅಸಂಘಟಿತ ಕಾರ್ಮಿಕರ ಮಕ್ಕಳು. ಶೇ 83 ರಷ್ಟು ಕಾರ್ಮಿಕರು ಇವತ್ತಿಗೂ ಅಸಂಘಟಿತರಾಗಿದ್ದಾರೆ. ದೇಶದಲ್ಲಿ ರೈತ ಸಮುದಾಯವನ್ನು ಬಿಟ್ಟರೆ ಎರಡನೇ ಅತೀ ದೊಡ್ಡ ಸಮುದಾಯ ಕಾರ್ಮಿಕ ಸಮುದಾಯ. ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪಟ್ಟಭದ್ರರನ್ನು ನಾವು ದೂರ ಇಡಬೇಕು. ಈ ಪಟ್ಟ ಭದ್ರರು ಸಾಮಾಜಿಕ ನ್ಯಾಯದ ವಿರೋಧಿಗಳು. ಈ ವಿಭಜಕರು ಶೂದ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆ ಬರುವುದನ್ನು ವಿರೋಧಿಸುತ್ತಾರೆ. ಆದ್ದರಿಂದ ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವವರನ್ನು ನಾವು ವಿರೋಧಿಸಬೇಕು ಎಂದರು.
ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಿಂದ ನಾವು ಎಲ್ಲಾ ಜಾತಿ-ಧರ್ಮದವರಿಗೆ ಅನುಕೂಲ ಆಗುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…