ದೇಶದಲ್ಲೇ ಅತಿದೊಡ್ಡ ಮೊಬೈಲ್ ದರೋಡೆ ಕೇಸ್: ನಟೋರಿಯಸ್ ಮೊಬೈಲ್ ಕಳ್ಳರ ಬಂಧನ: ಕಂಟೈನರ್ ಡೋರ್ ಕೊರೆದು ಕೋಟಿ ಕೋಟಿ ಮೌಲ್ಯದ ಮೊಬೈಲ್ ಕಳವು

ಒಂದಲ್ಲ ಎರಡಲ್ಲ ಅವು ಸರಿಸುಮಾರು 5 ಕೋಟಿ ಮೌಲ್ಯದ ಮೊಬೈಲ್‌ಗಳು, ಉತ್ತರ ಪ್ರದೇಶದಿಂದ ಬೆಂಗಳೂರಿಗೆ ರವಾನೆ ಮಾಡ್ತಿದ್ದ ಟ್ರಕ್‌ನಲ್ಲಿ ರಂದ್ರ ಕೊರೆದು ಸಿನಿಮೀಯ ಶೈಲಿಯಲ್ಲಿ ಮೊಬೈಲ್‌ಗಳನ್ನ ಕಳವು ಮಾಡಲಾಗಿತ್ತು. ಪೊಲೀಸರಿಗೆ ಚಾಲೆಂಜಿಂಗ್ ಆಗಿದ್ದ ಪ್ರಕರಣವನ್ನ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ದೇಶದಲ್ಲೇ ಕರ್ನಾಟಕ ಪೊಲೀಸರ ಕಾರ್ಯವೈಖರಿ ಮಾದರಿಯಾಗಿದೆ.

ಹೌದು. 2024ರ ನವೆಂಬರ್‌ 23ರಂದು ಟ್ರಕ್‌ವೊಂದು ರಾಷ್ಟ್ರೀಯ ಹೆದ್ದಾರಿ-44ರ ಮೂಲಕ ಉತ್ತರಪ್ರದೇಶದ ನೋಯ್ಡಾದಿಂದ ಬೆಂಗಳೂರಿಗೆ ಬರೋಬ್ಬರಿ 6,640 ಮೊಬೈಲ್‌ಗಳನ್ನ ಹೊತ್ತು ಸಾಗಿತ್ತು. ಬೆಂಗಳೂರು ತಲುಪಲು ಇನ್ನೂ 50 ಕಿಮೀ ಮಾತ್ರ ಬಾಕಿಯಿತ್ತು. ಆದ್ರೆ ದಿನ ಕಳೆದರೂ ಬೆಂಗಳೂರು ತಲುಪಲೇ ಇಲ್ಲ. ಹೀಗಾಗಿ ಕಂಪನಿಯವರು ಜಿಪಿಎಸ್ ಆಧರಿಸಿ ಚೆಕ್ ಮಾಡಿದ್ರೆ ಅದು ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ರೆಡ್ಡಿಗೊಲ್ಲವಾರಹಳ್ಳಿ ಬಳಿ ಡಾಬಾವೊಂದರ ಬಳಿ ನಿಲ್ಲಿಸಲಾಗಿತ್ತು. ಹೋಗಿ ನೋಡಿದ್ರೆ ಟ್ರಕ್ ಇದೆ, ಚಾಲಕ ಇರಲಿಲ್ಲ.

ನಂತರ ಟ್ರಕ್‌ನಲ್ಲಿ ಸರಕು ನೋಡಲು ಹೋದಾಗ ಚಾಲಕನ ಕ್ಯಾಬಿನ್‌ನಿಂದಲೇ ರಂದ್ರ ಕೊರೆದು ಮೊಬೈಲ್‌ಗಳನ್ನ ದೋಚಿ ಮತ್ತೊಂದು ಟ್ರಕ್‌ಗೆ ತುಂಬಿಸಿರುವುದು ಬೆಳಕಿಗೆ ಬಂದಿತು. 6,640 ಮೊಬೈಲ್ ಗಳ ಪೈಕಿ 5,140 ಮೊಬೈಲ್ ಗಳನ್ನ ಕಳವು ಮಾಡಲಾಗಿತ್ತು. ಉಳಿದ ಮೊಬೈಲ್ ಗಳು ಹಾಗೆ ಟ್ರಕ್ ನಲ್ಲಿ ಉಳಿದಿದ್ದವು.

ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೇರೇಸಂದ್ರ ಹಾಗೂ ಸೆನ್ ಪೊಲೀಸರು ಹರಿಯಾಣ, ರಾಜಸ್ಥಾನ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿದ್ದರು. ಇದೀಗ 7 ಮಂದಿ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಟ್ರಕ್ ಚಾಲಕ ರಾಹುಲ್, ಇಮ್ರಾನ್, ಮೊಹಮ್ಮದ್ ಮುಸ್ತಫಾ, ಅನೂಪ್ ರಾಯ್, ಅಭಿಜಿತ್ ಪೌಲ್, ಸಕೃಲ್ಲಾ ಹಾಗೂ ಯೂಸುಫ್ ಖಾನ್ ಬಂಧಿತ ಆರೋಪಿಗಳು. ಬಂಧಿತರಿಂದ ಮೊಬೈಲ್ ಸಾಗಾಟ ಮಾಡಲು ಬಳಸಿದ್ದ ಟ್ರಕ್ ಸೇರಿ ಕಳವು ಮಾಡಿದ್ದ 5,140 ಮೊಬೈಲ್‌ಗಳ ಪೈಕಿ 56 ಮೊಬೈಲ್‌ಗಳನ್ನ ಜಪ್ತಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಸಮೀಪ ಮೊಬೈಲ್‌ ದೋಚಿದ್ದ ಕಳ್ಳರು ಬೇರೊಂದು ಟ್ರಕ್‌ಗೆ ತುಂಬಿಕೊಂಡು ದೆಹಲಿಯಲ್ಲಿ ಮಾರಾಟ ಮಾಡಿದ್ದರು. ಸರಿಸುಮಾರು ನಾಲ್ಕೂವರೆ ಕೋಟಿ ಮೌಲ್ಯದ ಮೊಬೈಲ್‌ಗಳನ್ನ ಕಳ್ಳರು ಕೇವಲ 90 ಲಕ್ಷ ರೂಪಾಯಿಗೆ ಕಾಳಸಂತೆಯಲ್ಲಿ ಮಾರಾಟ ಮಾಡಿದ್ದರು. ಅಲ್ಲಿಂದ ಮೊಬೈಲ್‌ಗಳು ದೇಶದ ನಾನಾ ರಾಜ್ಯಗಳಿಗೆ ಸಪ್ಲೈ ಆಗಿವೆ ಅನ್ನೋದು ತನಿಖೆ ವೇಳೆ ತಿಳಿದುಬಂದಿದೆ. ಹೀಗಾಗಿ ಮೊಬೈಲ್‌ ಮಾರಿ ಆರೋಪಿಗಳ ಖಾತೆಯಲ್ಲಿದ್ದ ಉಳಿದಿದ್ದ 20 ಲಕ್ಷ ರೂ. ನಗದನ್ನು ಸೀಜ್‌ ಮಾಡಿಕೊಳ್ಳಲಾಗಿದೆ.

ಆರೋಪಿಗಳು ಪ್ರತಿ ರಾಜ್ಯಗಳಲ್ಲಿ 300 ರಿಂದ 400 ಮೊಬೈಲ್​ಗಳನ್ನು ಮಾರಾಟ ಮಾಡಿದ್ದು, IMEI ನಂಬರ್​ ಆಧಾರದ ಮೇಲೆ ಮೊಬೈಲ್​ಗಳನ್ನ ಬ್ಲಾಕ್ ಮಾಡಲಾಗುತ್ತಿದೆ.

ಅಲ್ಲದೇ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳು 2 ವರ್ಷಗಳ ಹಿಂದೆ ಬಂಗಾಳದಲ್ಲಿ ನಡೆದಿರೋ 9 ಕೋಟಿಯ ಐಫೋನ್ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಚಿಕ್ಕಬಳ್ಳಾಪುರ ಪೊಲೀಸರಿಂದ ಪ. ಬಂಗಾಳ ಪೊಲೀಸರು ಬಾಡಿ ವಾರೆಂಟ್ ಮೇಲೆ ಪಡೆದುಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

6 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

9 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

12 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

13 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

15 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

15 hours ago