ಒಂದಲ್ಲ ಎರಡಲ್ಲ ಅವು ಸರಿಸುಮಾರು 5 ಕೋಟಿ ಮೌಲ್ಯದ ಮೊಬೈಲ್ಗಳು, ಉತ್ತರ ಪ್ರದೇಶದಿಂದ ಬೆಂಗಳೂರಿಗೆ ರವಾನೆ ಮಾಡ್ತಿದ್ದ ಟ್ರಕ್ನಲ್ಲಿ ರಂದ್ರ ಕೊರೆದು ಸಿನಿಮೀಯ ಶೈಲಿಯಲ್ಲಿ ಮೊಬೈಲ್ಗಳನ್ನ ಕಳವು ಮಾಡಲಾಗಿತ್ತು. ಪೊಲೀಸರಿಗೆ ಚಾಲೆಂಜಿಂಗ್ ಆಗಿದ್ದ ಪ್ರಕರಣವನ್ನ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ದೇಶದಲ್ಲೇ ಕರ್ನಾಟಕ ಪೊಲೀಸರ ಕಾರ್ಯವೈಖರಿ ಮಾದರಿಯಾಗಿದೆ.
ಹೌದು. 2024ರ ನವೆಂಬರ್ 23ರಂದು ಟ್ರಕ್ವೊಂದು ರಾಷ್ಟ್ರೀಯ ಹೆದ್ದಾರಿ-44ರ ಮೂಲಕ ಉತ್ತರಪ್ರದೇಶದ ನೋಯ್ಡಾದಿಂದ ಬೆಂಗಳೂರಿಗೆ ಬರೋಬ್ಬರಿ 6,640 ಮೊಬೈಲ್ಗಳನ್ನ ಹೊತ್ತು ಸಾಗಿತ್ತು. ಬೆಂಗಳೂರು ತಲುಪಲು ಇನ್ನೂ 50 ಕಿಮೀ ಮಾತ್ರ ಬಾಕಿಯಿತ್ತು. ಆದ್ರೆ ದಿನ ಕಳೆದರೂ ಬೆಂಗಳೂರು ತಲುಪಲೇ ಇಲ್ಲ. ಹೀಗಾಗಿ ಕಂಪನಿಯವರು ಜಿಪಿಎಸ್ ಆಧರಿಸಿ ಚೆಕ್ ಮಾಡಿದ್ರೆ ಅದು ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ರೆಡ್ಡಿಗೊಲ್ಲವಾರಹಳ್ಳಿ ಬಳಿ ಡಾಬಾವೊಂದರ ಬಳಿ ನಿಲ್ಲಿಸಲಾಗಿತ್ತು. ಹೋಗಿ ನೋಡಿದ್ರೆ ಟ್ರಕ್ ಇದೆ, ಚಾಲಕ ಇರಲಿಲ್ಲ.
ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೇರೇಸಂದ್ರ ಹಾಗೂ ಸೆನ್ ಪೊಲೀಸರು ಹರಿಯಾಣ, ರಾಜಸ್ಥಾನ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿದ್ದರು. ಇದೀಗ 7 ಮಂದಿ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಟ್ರಕ್ ಚಾಲಕ ರಾಹುಲ್, ಇಮ್ರಾನ್, ಮೊಹಮ್ಮದ್ ಮುಸ್ತಫಾ, ಅನೂಪ್ ರಾಯ್, ಅಭಿಜಿತ್ ಪೌಲ್, ಸಕೃಲ್ಲಾ ಹಾಗೂ ಯೂಸುಫ್ ಖಾನ್ ಬಂಧಿತ ಆರೋಪಿಗಳು. ಬಂಧಿತರಿಂದ ಮೊಬೈಲ್ ಸಾಗಾಟ ಮಾಡಲು ಬಳಸಿದ್ದ ಟ್ರಕ್ ಸೇರಿ ಕಳವು ಮಾಡಿದ್ದ 5,140 ಮೊಬೈಲ್ಗಳ ಪೈಕಿ 56 ಮೊಬೈಲ್ಗಳನ್ನ ಜಪ್ತಿ ಮಾಡಿದ್ದಾರೆ.
ಆರೋಪಿಗಳು ಪ್ರತಿ ರಾಜ್ಯಗಳಲ್ಲಿ 300 ರಿಂದ 400 ಮೊಬೈಲ್ಗಳನ್ನು ಮಾರಾಟ ಮಾಡಿದ್ದು, IMEI ನಂಬರ್ ಆಧಾರದ ಮೇಲೆ ಮೊಬೈಲ್ಗಳನ್ನ ಬ್ಲಾಕ್ ಮಾಡಲಾಗುತ್ತಿದೆ.
ಅಲ್ಲದೇ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳು 2 ವರ್ಷಗಳ ಹಿಂದೆ ಬಂಗಾಳದಲ್ಲಿ ನಡೆದಿರೋ 9 ಕೋಟಿಯ ಐಫೋನ್ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಚಿಕ್ಕಬಳ್ಳಾಪುರ ಪೊಲೀಸರಿಂದ ಪ. ಬಂಗಾಳ ಪೊಲೀಸರು ಬಾಡಿ ವಾರೆಂಟ್ ಮೇಲೆ ಪಡೆದುಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…