ದೇಶದಲ್ಲೇ ಅತಿದೊಡ್ಡ ಮೊಬೈಲ್ ದರೋಡೆ ಕೇಸ್: ನಟೋರಿಯಸ್ ಮೊಬೈಲ್ ಕಳ್ಳರ ಬಂಧನ: ಕಂಟೈನರ್ ಡೋರ್ ಕೊರೆದು ಕೋಟಿ ಕೋಟಿ ಮೌಲ್ಯದ ಮೊಬೈಲ್ ಕಳವು

ಒಂದಲ್ಲ ಎರಡಲ್ಲ ಅವು ಸರಿಸುಮಾರು 5 ಕೋಟಿ ಮೌಲ್ಯದ ಮೊಬೈಲ್‌ಗಳು, ಉತ್ತರ ಪ್ರದೇಶದಿಂದ ಬೆಂಗಳೂರಿಗೆ ರವಾನೆ ಮಾಡ್ತಿದ್ದ ಟ್ರಕ್‌ನಲ್ಲಿ ರಂದ್ರ ಕೊರೆದು ಸಿನಿಮೀಯ ಶೈಲಿಯಲ್ಲಿ ಮೊಬೈಲ್‌ಗಳನ್ನ ಕಳವು ಮಾಡಲಾಗಿತ್ತು. ಪೊಲೀಸರಿಗೆ ಚಾಲೆಂಜಿಂಗ್ ಆಗಿದ್ದ ಪ್ರಕರಣವನ್ನ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ದೇಶದಲ್ಲೇ ಕರ್ನಾಟಕ ಪೊಲೀಸರ ಕಾರ್ಯವೈಖರಿ ಮಾದರಿಯಾಗಿದೆ.

ಹೌದು. 2024ರ ನವೆಂಬರ್‌ 23ರಂದು ಟ್ರಕ್‌ವೊಂದು ರಾಷ್ಟ್ರೀಯ ಹೆದ್ದಾರಿ-44ರ ಮೂಲಕ ಉತ್ತರಪ್ರದೇಶದ ನೋಯ್ಡಾದಿಂದ ಬೆಂಗಳೂರಿಗೆ ಬರೋಬ್ಬರಿ 6,640 ಮೊಬೈಲ್‌ಗಳನ್ನ ಹೊತ್ತು ಸಾಗಿತ್ತು. ಬೆಂಗಳೂರು ತಲುಪಲು ಇನ್ನೂ 50 ಕಿಮೀ ಮಾತ್ರ ಬಾಕಿಯಿತ್ತು. ಆದ್ರೆ ದಿನ ಕಳೆದರೂ ಬೆಂಗಳೂರು ತಲುಪಲೇ ಇಲ್ಲ. ಹೀಗಾಗಿ ಕಂಪನಿಯವರು ಜಿಪಿಎಸ್ ಆಧರಿಸಿ ಚೆಕ್ ಮಾಡಿದ್ರೆ ಅದು ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ರೆಡ್ಡಿಗೊಲ್ಲವಾರಹಳ್ಳಿ ಬಳಿ ಡಾಬಾವೊಂದರ ಬಳಿ ನಿಲ್ಲಿಸಲಾಗಿತ್ತು. ಹೋಗಿ ನೋಡಿದ್ರೆ ಟ್ರಕ್ ಇದೆ, ಚಾಲಕ ಇರಲಿಲ್ಲ.

ನಂತರ ಟ್ರಕ್‌ನಲ್ಲಿ ಸರಕು ನೋಡಲು ಹೋದಾಗ ಚಾಲಕನ ಕ್ಯಾಬಿನ್‌ನಿಂದಲೇ ರಂದ್ರ ಕೊರೆದು ಮೊಬೈಲ್‌ಗಳನ್ನ ದೋಚಿ ಮತ್ತೊಂದು ಟ್ರಕ್‌ಗೆ ತುಂಬಿಸಿರುವುದು ಬೆಳಕಿಗೆ ಬಂದಿತು. 6,640 ಮೊಬೈಲ್ ಗಳ ಪೈಕಿ 5,140 ಮೊಬೈಲ್ ಗಳನ್ನ ಕಳವು ಮಾಡಲಾಗಿತ್ತು. ಉಳಿದ ಮೊಬೈಲ್ ಗಳು ಹಾಗೆ ಟ್ರಕ್ ನಲ್ಲಿ ಉಳಿದಿದ್ದವು.

ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೇರೇಸಂದ್ರ ಹಾಗೂ ಸೆನ್ ಪೊಲೀಸರು ಹರಿಯಾಣ, ರಾಜಸ್ಥಾನ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿದ್ದರು. ಇದೀಗ 7 ಮಂದಿ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಟ್ರಕ್ ಚಾಲಕ ರಾಹುಲ್, ಇಮ್ರಾನ್, ಮೊಹಮ್ಮದ್ ಮುಸ್ತಫಾ, ಅನೂಪ್ ರಾಯ್, ಅಭಿಜಿತ್ ಪೌಲ್, ಸಕೃಲ್ಲಾ ಹಾಗೂ ಯೂಸುಫ್ ಖಾನ್ ಬಂಧಿತ ಆರೋಪಿಗಳು. ಬಂಧಿತರಿಂದ ಮೊಬೈಲ್ ಸಾಗಾಟ ಮಾಡಲು ಬಳಸಿದ್ದ ಟ್ರಕ್ ಸೇರಿ ಕಳವು ಮಾಡಿದ್ದ 5,140 ಮೊಬೈಲ್‌ಗಳ ಪೈಕಿ 56 ಮೊಬೈಲ್‌ಗಳನ್ನ ಜಪ್ತಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಸಮೀಪ ಮೊಬೈಲ್‌ ದೋಚಿದ್ದ ಕಳ್ಳರು ಬೇರೊಂದು ಟ್ರಕ್‌ಗೆ ತುಂಬಿಕೊಂಡು ದೆಹಲಿಯಲ್ಲಿ ಮಾರಾಟ ಮಾಡಿದ್ದರು. ಸರಿಸುಮಾರು ನಾಲ್ಕೂವರೆ ಕೋಟಿ ಮೌಲ್ಯದ ಮೊಬೈಲ್‌ಗಳನ್ನ ಕಳ್ಳರು ಕೇವಲ 90 ಲಕ್ಷ ರೂಪಾಯಿಗೆ ಕಾಳಸಂತೆಯಲ್ಲಿ ಮಾರಾಟ ಮಾಡಿದ್ದರು. ಅಲ್ಲಿಂದ ಮೊಬೈಲ್‌ಗಳು ದೇಶದ ನಾನಾ ರಾಜ್ಯಗಳಿಗೆ ಸಪ್ಲೈ ಆಗಿವೆ ಅನ್ನೋದು ತನಿಖೆ ವೇಳೆ ತಿಳಿದುಬಂದಿದೆ. ಹೀಗಾಗಿ ಮೊಬೈಲ್‌ ಮಾರಿ ಆರೋಪಿಗಳ ಖಾತೆಯಲ್ಲಿದ್ದ ಉಳಿದಿದ್ದ 20 ಲಕ್ಷ ರೂ. ನಗದನ್ನು ಸೀಜ್‌ ಮಾಡಿಕೊಳ್ಳಲಾಗಿದೆ.

ಆರೋಪಿಗಳು ಪ್ರತಿ ರಾಜ್ಯಗಳಲ್ಲಿ 300 ರಿಂದ 400 ಮೊಬೈಲ್​ಗಳನ್ನು ಮಾರಾಟ ಮಾಡಿದ್ದು, IMEI ನಂಬರ್​ ಆಧಾರದ ಮೇಲೆ ಮೊಬೈಲ್​ಗಳನ್ನ ಬ್ಲಾಕ್ ಮಾಡಲಾಗುತ್ತಿದೆ.

ಅಲ್ಲದೇ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳು 2 ವರ್ಷಗಳ ಹಿಂದೆ ಬಂಗಾಳದಲ್ಲಿ ನಡೆದಿರೋ 9 ಕೋಟಿಯ ಐಫೋನ್ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಚಿಕ್ಕಬಳ್ಳಾಪುರ ಪೊಲೀಸರಿಂದ ಪ. ಬಂಗಾಳ ಪೊಲೀಸರು ಬಾಡಿ ವಾರೆಂಟ್ ಮೇಲೆ ಪಡೆದುಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

10 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

10 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

12 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

12 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

19 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago