ದೇಶದಲ್ಲೇ ಅತಿದೊಡ್ಡ ಮೊಬೈಲ್ ದರೋಡೆ ಕೇಸ್: ನಟೋರಿಯಸ್ ಮೊಬೈಲ್ ಕಳ್ಳರ ಬಂಧನ: ಕಂಟೈನರ್ ಡೋರ್ ಕೊರೆದು ಕೋಟಿ ಕೋಟಿ ಮೌಲ್ಯದ ಮೊಬೈಲ್ ಕಳವು

ಒಂದಲ್ಲ ಎರಡಲ್ಲ ಅವು ಸರಿಸುಮಾರು 5 ಕೋಟಿ ಮೌಲ್ಯದ ಮೊಬೈಲ್‌ಗಳು, ಉತ್ತರ ಪ್ರದೇಶದಿಂದ ಬೆಂಗಳೂರಿಗೆ ರವಾನೆ ಮಾಡ್ತಿದ್ದ ಟ್ರಕ್‌ನಲ್ಲಿ ರಂದ್ರ ಕೊರೆದು ಸಿನಿಮೀಯ ಶೈಲಿಯಲ್ಲಿ ಮೊಬೈಲ್‌ಗಳನ್ನ ಕಳವು ಮಾಡಲಾಗಿತ್ತು. ಪೊಲೀಸರಿಗೆ ಚಾಲೆಂಜಿಂಗ್ ಆಗಿದ್ದ ಪ್ರಕರಣವನ್ನ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ದೇಶದಲ್ಲೇ ಕರ್ನಾಟಕ ಪೊಲೀಸರ ಕಾರ್ಯವೈಖರಿ ಮಾದರಿಯಾಗಿದೆ.

ಹೌದು. 2024ರ ನವೆಂಬರ್‌ 23ರಂದು ಟ್ರಕ್‌ವೊಂದು ರಾಷ್ಟ್ರೀಯ ಹೆದ್ದಾರಿ-44ರ ಮೂಲಕ ಉತ್ತರಪ್ರದೇಶದ ನೋಯ್ಡಾದಿಂದ ಬೆಂಗಳೂರಿಗೆ ಬರೋಬ್ಬರಿ 6,640 ಮೊಬೈಲ್‌ಗಳನ್ನ ಹೊತ್ತು ಸಾಗಿತ್ತು. ಬೆಂಗಳೂರು ತಲುಪಲು ಇನ್ನೂ 50 ಕಿಮೀ ಮಾತ್ರ ಬಾಕಿಯಿತ್ತು. ಆದ್ರೆ ದಿನ ಕಳೆದರೂ ಬೆಂಗಳೂರು ತಲುಪಲೇ ಇಲ್ಲ. ಹೀಗಾಗಿ ಕಂಪನಿಯವರು ಜಿಪಿಎಸ್ ಆಧರಿಸಿ ಚೆಕ್ ಮಾಡಿದ್ರೆ ಅದು ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ರೆಡ್ಡಿಗೊಲ್ಲವಾರಹಳ್ಳಿ ಬಳಿ ಡಾಬಾವೊಂದರ ಬಳಿ ನಿಲ್ಲಿಸಲಾಗಿತ್ತು. ಹೋಗಿ ನೋಡಿದ್ರೆ ಟ್ರಕ್ ಇದೆ, ಚಾಲಕ ಇರಲಿಲ್ಲ.

ನಂತರ ಟ್ರಕ್‌ನಲ್ಲಿ ಸರಕು ನೋಡಲು ಹೋದಾಗ ಚಾಲಕನ ಕ್ಯಾಬಿನ್‌ನಿಂದಲೇ ರಂದ್ರ ಕೊರೆದು ಮೊಬೈಲ್‌ಗಳನ್ನ ದೋಚಿ ಮತ್ತೊಂದು ಟ್ರಕ್‌ಗೆ ತುಂಬಿಸಿರುವುದು ಬೆಳಕಿಗೆ ಬಂದಿತು. 6,640 ಮೊಬೈಲ್ ಗಳ ಪೈಕಿ 5,140 ಮೊಬೈಲ್ ಗಳನ್ನ ಕಳವು ಮಾಡಲಾಗಿತ್ತು. ಉಳಿದ ಮೊಬೈಲ್ ಗಳು ಹಾಗೆ ಟ್ರಕ್ ನಲ್ಲಿ ಉಳಿದಿದ್ದವು.

ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೇರೇಸಂದ್ರ ಹಾಗೂ ಸೆನ್ ಪೊಲೀಸರು ಹರಿಯಾಣ, ರಾಜಸ್ಥಾನ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿದ್ದರು. ಇದೀಗ 7 ಮಂದಿ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಟ್ರಕ್ ಚಾಲಕ ರಾಹುಲ್, ಇಮ್ರಾನ್, ಮೊಹಮ್ಮದ್ ಮುಸ್ತಫಾ, ಅನೂಪ್ ರಾಯ್, ಅಭಿಜಿತ್ ಪೌಲ್, ಸಕೃಲ್ಲಾ ಹಾಗೂ ಯೂಸುಫ್ ಖಾನ್ ಬಂಧಿತ ಆರೋಪಿಗಳು. ಬಂಧಿತರಿಂದ ಮೊಬೈಲ್ ಸಾಗಾಟ ಮಾಡಲು ಬಳಸಿದ್ದ ಟ್ರಕ್ ಸೇರಿ ಕಳವು ಮಾಡಿದ್ದ 5,140 ಮೊಬೈಲ್‌ಗಳ ಪೈಕಿ 56 ಮೊಬೈಲ್‌ಗಳನ್ನ ಜಪ್ತಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಸಮೀಪ ಮೊಬೈಲ್‌ ದೋಚಿದ್ದ ಕಳ್ಳರು ಬೇರೊಂದು ಟ್ರಕ್‌ಗೆ ತುಂಬಿಕೊಂಡು ದೆಹಲಿಯಲ್ಲಿ ಮಾರಾಟ ಮಾಡಿದ್ದರು. ಸರಿಸುಮಾರು ನಾಲ್ಕೂವರೆ ಕೋಟಿ ಮೌಲ್ಯದ ಮೊಬೈಲ್‌ಗಳನ್ನ ಕಳ್ಳರು ಕೇವಲ 90 ಲಕ್ಷ ರೂಪಾಯಿಗೆ ಕಾಳಸಂತೆಯಲ್ಲಿ ಮಾರಾಟ ಮಾಡಿದ್ದರು. ಅಲ್ಲಿಂದ ಮೊಬೈಲ್‌ಗಳು ದೇಶದ ನಾನಾ ರಾಜ್ಯಗಳಿಗೆ ಸಪ್ಲೈ ಆಗಿವೆ ಅನ್ನೋದು ತನಿಖೆ ವೇಳೆ ತಿಳಿದುಬಂದಿದೆ. ಹೀಗಾಗಿ ಮೊಬೈಲ್‌ ಮಾರಿ ಆರೋಪಿಗಳ ಖಾತೆಯಲ್ಲಿದ್ದ ಉಳಿದಿದ್ದ 20 ಲಕ್ಷ ರೂ. ನಗದನ್ನು ಸೀಜ್‌ ಮಾಡಿಕೊಳ್ಳಲಾಗಿದೆ.

ಆರೋಪಿಗಳು ಪ್ರತಿ ರಾಜ್ಯಗಳಲ್ಲಿ 300 ರಿಂದ 400 ಮೊಬೈಲ್​ಗಳನ್ನು ಮಾರಾಟ ಮಾಡಿದ್ದು, IMEI ನಂಬರ್​ ಆಧಾರದ ಮೇಲೆ ಮೊಬೈಲ್​ಗಳನ್ನ ಬ್ಲಾಕ್ ಮಾಡಲಾಗುತ್ತಿದೆ.

ಅಲ್ಲದೇ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳು 2 ವರ್ಷಗಳ ಹಿಂದೆ ಬಂಗಾಳದಲ್ಲಿ ನಡೆದಿರೋ 9 ಕೋಟಿಯ ಐಫೋನ್ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಚಿಕ್ಕಬಳ್ಳಾಪುರ ಪೊಲೀಸರಿಂದ ಪ. ಬಂಗಾಳ ಪೊಲೀಸರು ಬಾಡಿ ವಾರೆಂಟ್ ಮೇಲೆ ಪಡೆದುಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

1 hour ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

2 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

3 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

7 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

14 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago