ದೇಶದಲ್ಲೇ ಅತಿದೊಡ್ಡ ಮೊಬೈಲ್ ದರೋಡೆ ಕೇಸ್: ನಟೋರಿಯಸ್ ಮೊಬೈಲ್ ಕಳ್ಳರ ಬಂಧನ: ಕಂಟೈನರ್ ಡೋರ್ ಕೊರೆದು ಕೋಟಿ ಕೋಟಿ ಮೌಲ್ಯದ ಮೊಬೈಲ್ ಕಳವು

ಒಂದಲ್ಲ ಎರಡಲ್ಲ ಅವು ಸರಿಸುಮಾರು 5 ಕೋಟಿ ಮೌಲ್ಯದ ಮೊಬೈಲ್‌ಗಳು, ಉತ್ತರ ಪ್ರದೇಶದಿಂದ ಬೆಂಗಳೂರಿಗೆ ರವಾನೆ ಮಾಡ್ತಿದ್ದ ಟ್ರಕ್‌ನಲ್ಲಿ ರಂದ್ರ ಕೊರೆದು ಸಿನಿಮೀಯ ಶೈಲಿಯಲ್ಲಿ ಮೊಬೈಲ್‌ಗಳನ್ನ ಕಳವು ಮಾಡಲಾಗಿತ್ತು. ಪೊಲೀಸರಿಗೆ ಚಾಲೆಂಜಿಂಗ್ ಆಗಿದ್ದ ಪ್ರಕರಣವನ್ನ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ದೇಶದಲ್ಲೇ ಕರ್ನಾಟಕ ಪೊಲೀಸರ ಕಾರ್ಯವೈಖರಿ ಮಾದರಿಯಾಗಿದೆ.

ಹೌದು. 2024ರ ನವೆಂಬರ್‌ 23ರಂದು ಟ್ರಕ್‌ವೊಂದು ರಾಷ್ಟ್ರೀಯ ಹೆದ್ದಾರಿ-44ರ ಮೂಲಕ ಉತ್ತರಪ್ರದೇಶದ ನೋಯ್ಡಾದಿಂದ ಬೆಂಗಳೂರಿಗೆ ಬರೋಬ್ಬರಿ 6,640 ಮೊಬೈಲ್‌ಗಳನ್ನ ಹೊತ್ತು ಸಾಗಿತ್ತು. ಬೆಂಗಳೂರು ತಲುಪಲು ಇನ್ನೂ 50 ಕಿಮೀ ಮಾತ್ರ ಬಾಕಿಯಿತ್ತು. ಆದ್ರೆ ದಿನ ಕಳೆದರೂ ಬೆಂಗಳೂರು ತಲುಪಲೇ ಇಲ್ಲ. ಹೀಗಾಗಿ ಕಂಪನಿಯವರು ಜಿಪಿಎಸ್ ಆಧರಿಸಿ ಚೆಕ್ ಮಾಡಿದ್ರೆ ಅದು ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ರೆಡ್ಡಿಗೊಲ್ಲವಾರಹಳ್ಳಿ ಬಳಿ ಡಾಬಾವೊಂದರ ಬಳಿ ನಿಲ್ಲಿಸಲಾಗಿತ್ತು. ಹೋಗಿ ನೋಡಿದ್ರೆ ಟ್ರಕ್ ಇದೆ, ಚಾಲಕ ಇರಲಿಲ್ಲ.

ನಂತರ ಟ್ರಕ್‌ನಲ್ಲಿ ಸರಕು ನೋಡಲು ಹೋದಾಗ ಚಾಲಕನ ಕ್ಯಾಬಿನ್‌ನಿಂದಲೇ ರಂದ್ರ ಕೊರೆದು ಮೊಬೈಲ್‌ಗಳನ್ನ ದೋಚಿ ಮತ್ತೊಂದು ಟ್ರಕ್‌ಗೆ ತುಂಬಿಸಿರುವುದು ಬೆಳಕಿಗೆ ಬಂದಿತು. 6,640 ಮೊಬೈಲ್ ಗಳ ಪೈಕಿ 5,140 ಮೊಬೈಲ್ ಗಳನ್ನ ಕಳವು ಮಾಡಲಾಗಿತ್ತು. ಉಳಿದ ಮೊಬೈಲ್ ಗಳು ಹಾಗೆ ಟ್ರಕ್ ನಲ್ಲಿ ಉಳಿದಿದ್ದವು.

ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೇರೇಸಂದ್ರ ಹಾಗೂ ಸೆನ್ ಪೊಲೀಸರು ಹರಿಯಾಣ, ರಾಜಸ್ಥಾನ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿದ್ದರು. ಇದೀಗ 7 ಮಂದಿ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಟ್ರಕ್ ಚಾಲಕ ರಾಹುಲ್, ಇಮ್ರಾನ್, ಮೊಹಮ್ಮದ್ ಮುಸ್ತಫಾ, ಅನೂಪ್ ರಾಯ್, ಅಭಿಜಿತ್ ಪೌಲ್, ಸಕೃಲ್ಲಾ ಹಾಗೂ ಯೂಸುಫ್ ಖಾನ್ ಬಂಧಿತ ಆರೋಪಿಗಳು. ಬಂಧಿತರಿಂದ ಮೊಬೈಲ್ ಸಾಗಾಟ ಮಾಡಲು ಬಳಸಿದ್ದ ಟ್ರಕ್ ಸೇರಿ ಕಳವು ಮಾಡಿದ್ದ 5,140 ಮೊಬೈಲ್‌ಗಳ ಪೈಕಿ 56 ಮೊಬೈಲ್‌ಗಳನ್ನ ಜಪ್ತಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಸಮೀಪ ಮೊಬೈಲ್‌ ದೋಚಿದ್ದ ಕಳ್ಳರು ಬೇರೊಂದು ಟ್ರಕ್‌ಗೆ ತುಂಬಿಕೊಂಡು ದೆಹಲಿಯಲ್ಲಿ ಮಾರಾಟ ಮಾಡಿದ್ದರು. ಸರಿಸುಮಾರು ನಾಲ್ಕೂವರೆ ಕೋಟಿ ಮೌಲ್ಯದ ಮೊಬೈಲ್‌ಗಳನ್ನ ಕಳ್ಳರು ಕೇವಲ 90 ಲಕ್ಷ ರೂಪಾಯಿಗೆ ಕಾಳಸಂತೆಯಲ್ಲಿ ಮಾರಾಟ ಮಾಡಿದ್ದರು. ಅಲ್ಲಿಂದ ಮೊಬೈಲ್‌ಗಳು ದೇಶದ ನಾನಾ ರಾಜ್ಯಗಳಿಗೆ ಸಪ್ಲೈ ಆಗಿವೆ ಅನ್ನೋದು ತನಿಖೆ ವೇಳೆ ತಿಳಿದುಬಂದಿದೆ. ಹೀಗಾಗಿ ಮೊಬೈಲ್‌ ಮಾರಿ ಆರೋಪಿಗಳ ಖಾತೆಯಲ್ಲಿದ್ದ ಉಳಿದಿದ್ದ 20 ಲಕ್ಷ ರೂ. ನಗದನ್ನು ಸೀಜ್‌ ಮಾಡಿಕೊಳ್ಳಲಾಗಿದೆ.

ಆರೋಪಿಗಳು ಪ್ರತಿ ರಾಜ್ಯಗಳಲ್ಲಿ 300 ರಿಂದ 400 ಮೊಬೈಲ್​ಗಳನ್ನು ಮಾರಾಟ ಮಾಡಿದ್ದು, IMEI ನಂಬರ್​ ಆಧಾರದ ಮೇಲೆ ಮೊಬೈಲ್​ಗಳನ್ನ ಬ್ಲಾಕ್ ಮಾಡಲಾಗುತ್ತಿದೆ.

ಅಲ್ಲದೇ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳು 2 ವರ್ಷಗಳ ಹಿಂದೆ ಬಂಗಾಳದಲ್ಲಿ ನಡೆದಿರೋ 9 ಕೋಟಿಯ ಐಫೋನ್ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಚಿಕ್ಕಬಳ್ಳಾಪುರ ಪೊಲೀಸರಿಂದ ಪ. ಬಂಗಾಳ ಪೊಲೀಸರು ಬಾಡಿ ವಾರೆಂಟ್ ಮೇಲೆ ಪಡೆದುಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Ramesh Babu

Journalist

Recent Posts

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

4 minutes ago

ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು…

ದೃಷ್ಟಿಕೋನ........ ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು, ಕನಸು ಕಾಣುತ್ತಲೇ ಇರುವ ಬಡ, ಮಧ್ಯಮ ವರ್ಗದವರು, ಅಧಿಕ ಪ್ರಸಂಗಿಗಳಂತೆ…

2 hours ago

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗ ತುಳಿದು ದೌರ್ಜನ್ಯ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವು: ವ್ಯಕ್ತಿ ಬಂಧನ

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…

13 hours ago

ಮೇ.5ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್‌ಗಳಲ್ಲಿ ವಿದ್ಯುತ್…

19 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

1 day ago