Categories: ರಾಜ್ಯ

ದೇಶದಲ್ಲೇ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ

ದೇಶದಲ್ಲೇ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿ ಇದ್ದರೂ ಸಹ ರಾಜ್ಯ ಜಿಎಸ್​ಟಿ ಸಂಗ್ರಹದಲ್ಲಿ ಕುಂಠಿತಗೊಂಡಿರುವುದು ವಿಪರ್ಯಾಸ.

ಒಟ್ಟು ಕೇಂದ್ರ ಹಾಗೂ ರಾಜ್ಯ ಜಿಎಸ್​ಟಿ ತೆರಿಗೆ ಸಂಗ್ರಹದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದರೂ, ಈ ಸಾಲಿನಲ್ಲಿ ನವೆಂಬರ್​​ ವರೆಗೆ ಸಂಗ್ರಹಿಸಿದ ರಾಜ್ಯ ಜಿಎಸ್​ಟಿ ಕಳೆದ ವರ್ಷಕ್ಕೆ ಹೋಲಿಸಿದರೆ ಕುಸಿತ ಕಂಡಿದೆ.

ನಿರೀಕ್ಷೆಗೂ ಮೀರಿ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇತ್ತ ರಾಜ್ಯದ ಬೊಕ್ಕಸ ತುಂಬಿಸುವಲ್ಲಿ ಜಿಎಸ್​ಟಿ ಹಾಗೂ ತೈಲ ಮೇಲಿನ ಕರ್ನಾಟಕ ಮಾರಾಟ ತೆರಿಗೆ ಗಣನೀಯ ಪಾಲು ಹೊಂದಿದೆ.

ರಾಜ್ಯ ಸರ್ಕಾರ ಈ ಬಾರಿ ನಿರೀಕ್ಷೆಗಿಂತ ಹೆಚ್ಚಿಗೆ ಆದಾಯ ಸಂಗ್ರಹ ಮಾಡುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದ ಎಲ್ಲಾ ಪ್ರಮುಖ ತೆರಿಗೆ ಮೂಲಗಳಿಂದ ನವೆಂಬರ್ ವರೆಗೆ ಭರ್ಜರಿ ಆದಾಯ ಸಂಗ್ರಹವಾಗಿದೆ.

ನವೆಂಬರ್ ತಿಂಗಳವರೆಗೆ ಕರ್ನಾಟಕ ಬರೋಬ್ಬರಿ 80,269 ಕೋಟಿ ರೂ. ಜಿಎಸ್ ಟಿ ಸಂಗ್ರಹಿಸಿ ಅಗ್ರಪಟ್ಟ ಅಲಂಕರಿಸಿತ್ತು. ಕಳೆದ ವರ್ಷ ಕರ್ನಾಟಕ ನವೆಂಬರ್ ವರೆಗೆ 60,068 ಕೋಟಿ ರೂ. ಒಟ್ಟು ಜಿಎಸ್ ಟಿ ಸಂಗ್ರಹಿಸಿತ್ತು. ಮಹಾರಾಷ್ಟ್ರ ಬಿಟ್ಟರೆ ಬಳಿಕದ ಸ್ಥಾನ ಕರ್ನಾಟಕಕ್ಕೆ ಸಲ್ಲುತ್ತದೆ. ಅದರಲ್ಲೂ ಜಿಎಸ್​ಟಿ ಸಂಗ್ರಹದ ಬೆಳವಣಿಗೆ ದರ 34% ಇದೆ. ಇದು ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಅತಿ ಹೆಚ್ಚು ಬೆಳವಣಿಗೆ ದರವಾಗಿದೆ.

ವಾಣಿಜ್ಯ ಇಲಾಖೆ ನೀಡಿದ ಅಂಕಿಅಂಶದಂತೆ ಕಳೆದ ವರ್ಷ ನವೆಂಬರ್ ವರೆಗೆ ರಾಜ್ಯ ಸರ್ಕಾರ 54,517.94 ಕೋಟಿ ರೂ. ರಾಜ್ಯ ಜಿಎಸ್ ಟಿ ಸಂಗ್ರಹಿಸಿತ್ತು. ಆದರೆ, ಅದೇ ಈ ವರ್ಷ ನವೆಂಬರ್ ವರೆಗೆ 50,600.70 ಕೋಟಿ ರೂ. ರಾಜ್ಯ ಜಿಎಸ್ ಟಿ ಸಂಗ್ರಹಿಸಲಾಗಿದೆ.

ಈ ಬಾರಿ 3,917.24 ಕೋಟಿ ರೂ.ರಷ್ಟು ಸಂಗ್ರಹ ಕುಸಿತವಾಗಿದೆ. ಮುಂದಿನ ನಾಲ್ಕು ತಿಂಗಳಲ್ಲಿ ರಾಜ್ಯ ಜಿಎಸ್ ಟಿ ಸಂಗ್ರಹ ಕಳೆದ ಬಾರಿಗಿಂತಲೂ ಅಧಿಕವಾಗಲಿದೆ ಎಂಬುದು ವಾಣಿಜ್ಯ ಇಲಾಖೆ ಅಧಿಕಾರಿಗಳ ವಿಶ್ವಾಸ.

ತೈಲ ಮೇಲಿನ ಮಾರಾಟ ತೆರಿಗೆ ಸಂಗ್ರಹದಲ್ಲೂ ಕುಸಿತ :ಇತ್ತ ತೈಲ ಮೇಲಿನ ಮಾರಾಟ ತೆರಿಗೆ ಸಂಗ್ರಹದಲ್ಲೂ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನವೆಂಬರ್ ವರೆಗೆ ಕುಸಿತ ಕಂಡಿದೆ. 2021-22ರಲ್ಲಿ ನವೆಂಬರ್ ವರೆಗೆ ಕರ್ನಾಟಕ‌ ಮಾರಾಟ ತೆರಿಗೆ 13,386.69 ಕೋಟಿ ರೂ.ಸಂಗ್ರಹವಾಗಿತ್ತು. ಈ ಬಾರಿ ನವೆಂಬರ್ ವರೆಗೆ ಕರ್ನಾಟಕ ಮಾರಟ ತೆರಿಗೆ ರೂಪದಲ್ಲಿ 12,524.47 ಕೋಟಿ ರೂ. ಸಂಗ್ರಹವಾಗಿದೆ. ಆ ಮೂಲಕ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನವೆಂಬರ್ ವರೆಗಿನ ಸಂಗ್ರಹದಲ್ಲಿ 862.22 ಕೋಟಿ ರೂ.ನಷ್ಟು ಕುಂಠಿತ ಕಂಡಿದೆ.

ಟಾಪ್ 5 ಜಿಎಸ್ ಟಿ ಸಂಗ್ರಹ ರಾಜ್ಯ (ನವೆಂಬರ್ ವರೆಗೆ):
ಮಹಾರಾಷ್ಟ್ರ:
2021-22: 1,37,969 ಕೋಟಿ
2022-23: 1,77,192 ಕೋಟಿ
ಬೆಳವಣಿಗೆ ದರ: 28%

ಕರ್ನಾಟಕ
2021-22: 60,068 ಕೋಟಿ
2022-23: 80,269 ಕೋಟಿ
ಬೆಳವಣಿಗೆ ದರ: 34%

ಗುಜರಾತ್:
2021-22: 63,173 ಕೋಟಿ
2022-23: 75,481 ಕೋಟಿ
ಬೆಳವಣಿಗೆ ದರ: 19%

ತಮಿಳುನಾಡು:
2021-22: 55,462 ಕೋಟಿ
2022-23: 69,224 ಕೋಟಿ
ಬೆಳವಣಿಗೆ ದರ: 25%

ಉತ್ತರ ಪ್ರದೇಶ:
2021-22: 47,713 ಕೋಟಿ
2022-23: 57,991 ಕೋಟಿ
ಬೆಳವಣಿಗೆ ದರ: 22%

Ramesh Babu

Journalist

Recent Posts

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

2 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

2 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

5 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

8 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

20 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

21 hours ago