Categories: ರಾಜ್ಯ

ದೇಶದಲ್ಲೇ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ

ದೇಶದಲ್ಲೇ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿ ಇದ್ದರೂ ಸಹ ರಾಜ್ಯ ಜಿಎಸ್​ಟಿ ಸಂಗ್ರಹದಲ್ಲಿ ಕುಂಠಿತಗೊಂಡಿರುವುದು ವಿಪರ್ಯಾಸ.

ಒಟ್ಟು ಕೇಂದ್ರ ಹಾಗೂ ರಾಜ್ಯ ಜಿಎಸ್​ಟಿ ತೆರಿಗೆ ಸಂಗ್ರಹದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದರೂ, ಈ ಸಾಲಿನಲ್ಲಿ ನವೆಂಬರ್​​ ವರೆಗೆ ಸಂಗ್ರಹಿಸಿದ ರಾಜ್ಯ ಜಿಎಸ್​ಟಿ ಕಳೆದ ವರ್ಷಕ್ಕೆ ಹೋಲಿಸಿದರೆ ಕುಸಿತ ಕಂಡಿದೆ.

ನಿರೀಕ್ಷೆಗೂ ಮೀರಿ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇತ್ತ ರಾಜ್ಯದ ಬೊಕ್ಕಸ ತುಂಬಿಸುವಲ್ಲಿ ಜಿಎಸ್​ಟಿ ಹಾಗೂ ತೈಲ ಮೇಲಿನ ಕರ್ನಾಟಕ ಮಾರಾಟ ತೆರಿಗೆ ಗಣನೀಯ ಪಾಲು ಹೊಂದಿದೆ.

ರಾಜ್ಯ ಸರ್ಕಾರ ಈ ಬಾರಿ ನಿರೀಕ್ಷೆಗಿಂತ ಹೆಚ್ಚಿಗೆ ಆದಾಯ ಸಂಗ್ರಹ ಮಾಡುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದ ಎಲ್ಲಾ ಪ್ರಮುಖ ತೆರಿಗೆ ಮೂಲಗಳಿಂದ ನವೆಂಬರ್ ವರೆಗೆ ಭರ್ಜರಿ ಆದಾಯ ಸಂಗ್ರಹವಾಗಿದೆ.

ನವೆಂಬರ್ ತಿಂಗಳವರೆಗೆ ಕರ್ನಾಟಕ ಬರೋಬ್ಬರಿ 80,269 ಕೋಟಿ ರೂ. ಜಿಎಸ್ ಟಿ ಸಂಗ್ರಹಿಸಿ ಅಗ್ರಪಟ್ಟ ಅಲಂಕರಿಸಿತ್ತು. ಕಳೆದ ವರ್ಷ ಕರ್ನಾಟಕ ನವೆಂಬರ್ ವರೆಗೆ 60,068 ಕೋಟಿ ರೂ. ಒಟ್ಟು ಜಿಎಸ್ ಟಿ ಸಂಗ್ರಹಿಸಿತ್ತು. ಮಹಾರಾಷ್ಟ್ರ ಬಿಟ್ಟರೆ ಬಳಿಕದ ಸ್ಥಾನ ಕರ್ನಾಟಕಕ್ಕೆ ಸಲ್ಲುತ್ತದೆ. ಅದರಲ್ಲೂ ಜಿಎಸ್​ಟಿ ಸಂಗ್ರಹದ ಬೆಳವಣಿಗೆ ದರ 34% ಇದೆ. ಇದು ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಅತಿ ಹೆಚ್ಚು ಬೆಳವಣಿಗೆ ದರವಾಗಿದೆ.

ವಾಣಿಜ್ಯ ಇಲಾಖೆ ನೀಡಿದ ಅಂಕಿಅಂಶದಂತೆ ಕಳೆದ ವರ್ಷ ನವೆಂಬರ್ ವರೆಗೆ ರಾಜ್ಯ ಸರ್ಕಾರ 54,517.94 ಕೋಟಿ ರೂ. ರಾಜ್ಯ ಜಿಎಸ್ ಟಿ ಸಂಗ್ರಹಿಸಿತ್ತು. ಆದರೆ, ಅದೇ ಈ ವರ್ಷ ನವೆಂಬರ್ ವರೆಗೆ 50,600.70 ಕೋಟಿ ರೂ. ರಾಜ್ಯ ಜಿಎಸ್ ಟಿ ಸಂಗ್ರಹಿಸಲಾಗಿದೆ.

ಈ ಬಾರಿ 3,917.24 ಕೋಟಿ ರೂ.ರಷ್ಟು ಸಂಗ್ರಹ ಕುಸಿತವಾಗಿದೆ. ಮುಂದಿನ ನಾಲ್ಕು ತಿಂಗಳಲ್ಲಿ ರಾಜ್ಯ ಜಿಎಸ್ ಟಿ ಸಂಗ್ರಹ ಕಳೆದ ಬಾರಿಗಿಂತಲೂ ಅಧಿಕವಾಗಲಿದೆ ಎಂಬುದು ವಾಣಿಜ್ಯ ಇಲಾಖೆ ಅಧಿಕಾರಿಗಳ ವಿಶ್ವಾಸ.

ತೈಲ ಮೇಲಿನ ಮಾರಾಟ ತೆರಿಗೆ ಸಂಗ್ರಹದಲ್ಲೂ ಕುಸಿತ :ಇತ್ತ ತೈಲ ಮೇಲಿನ ಮಾರಾಟ ತೆರಿಗೆ ಸಂಗ್ರಹದಲ್ಲೂ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನವೆಂಬರ್ ವರೆಗೆ ಕುಸಿತ ಕಂಡಿದೆ. 2021-22ರಲ್ಲಿ ನವೆಂಬರ್ ವರೆಗೆ ಕರ್ನಾಟಕ‌ ಮಾರಾಟ ತೆರಿಗೆ 13,386.69 ಕೋಟಿ ರೂ.ಸಂಗ್ರಹವಾಗಿತ್ತು. ಈ ಬಾರಿ ನವೆಂಬರ್ ವರೆಗೆ ಕರ್ನಾಟಕ ಮಾರಟ ತೆರಿಗೆ ರೂಪದಲ್ಲಿ 12,524.47 ಕೋಟಿ ರೂ. ಸಂಗ್ರಹವಾಗಿದೆ. ಆ ಮೂಲಕ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನವೆಂಬರ್ ವರೆಗಿನ ಸಂಗ್ರಹದಲ್ಲಿ 862.22 ಕೋಟಿ ರೂ.ನಷ್ಟು ಕುಂಠಿತ ಕಂಡಿದೆ.

ಟಾಪ್ 5 ಜಿಎಸ್ ಟಿ ಸಂಗ್ರಹ ರಾಜ್ಯ (ನವೆಂಬರ್ ವರೆಗೆ):
ಮಹಾರಾಷ್ಟ್ರ:
2021-22: 1,37,969 ಕೋಟಿ
2022-23: 1,77,192 ಕೋಟಿ
ಬೆಳವಣಿಗೆ ದರ: 28%

ಕರ್ನಾಟಕ
2021-22: 60,068 ಕೋಟಿ
2022-23: 80,269 ಕೋಟಿ
ಬೆಳವಣಿಗೆ ದರ: 34%

ಗುಜರಾತ್:
2021-22: 63,173 ಕೋಟಿ
2022-23: 75,481 ಕೋಟಿ
ಬೆಳವಣಿಗೆ ದರ: 19%

ತಮಿಳುನಾಡು:
2021-22: 55,462 ಕೋಟಿ
2022-23: 69,224 ಕೋಟಿ
ಬೆಳವಣಿಗೆ ದರ: 25%

ಉತ್ತರ ಪ್ರದೇಶ:
2021-22: 47,713 ಕೋಟಿ
2022-23: 57,991 ಕೋಟಿ
ಬೆಳವಣಿಗೆ ದರ: 22%

Ramesh Babu

Journalist

Recent Posts

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

3 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

13 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

14 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

17 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

19 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

22 hours ago