ದೇಶದಲ್ಲೇ ಒಟ್ಟು ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿ ಇದ್ದರೂ ಸಹ ರಾಜ್ಯ ಜಿಎಸ್ಟಿ ಸಂಗ್ರಹದಲ್ಲಿ ಕುಂಠಿತಗೊಂಡಿರುವುದು ವಿಪರ್ಯಾಸ.
ಒಟ್ಟು ಕೇಂದ್ರ ಹಾಗೂ ರಾಜ್ಯ ಜಿಎಸ್ಟಿ ತೆರಿಗೆ ಸಂಗ್ರಹದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದರೂ, ಈ ಸಾಲಿನಲ್ಲಿ ನವೆಂಬರ್ ವರೆಗೆ ಸಂಗ್ರಹಿಸಿದ ರಾಜ್ಯ ಜಿಎಸ್ಟಿ ಕಳೆದ ವರ್ಷಕ್ಕೆ ಹೋಲಿಸಿದರೆ ಕುಸಿತ ಕಂಡಿದೆ.
ನಿರೀಕ್ಷೆಗೂ ಮೀರಿ ಒಟ್ಟು ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇತ್ತ ರಾಜ್ಯದ ಬೊಕ್ಕಸ ತುಂಬಿಸುವಲ್ಲಿ ಜಿಎಸ್ಟಿ ಹಾಗೂ ತೈಲ ಮೇಲಿನ ಕರ್ನಾಟಕ ಮಾರಾಟ ತೆರಿಗೆ ಗಣನೀಯ ಪಾಲು ಹೊಂದಿದೆ.
ರಾಜ್ಯ ಸರ್ಕಾರ ಈ ಬಾರಿ ನಿರೀಕ್ಷೆಗಿಂತ ಹೆಚ್ಚಿಗೆ ಆದಾಯ ಸಂಗ್ರಹ ಮಾಡುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದ ಎಲ್ಲಾ ಪ್ರಮುಖ ತೆರಿಗೆ ಮೂಲಗಳಿಂದ ನವೆಂಬರ್ ವರೆಗೆ ಭರ್ಜರಿ ಆದಾಯ ಸಂಗ್ರಹವಾಗಿದೆ.
ನವೆಂಬರ್ ತಿಂಗಳವರೆಗೆ ಕರ್ನಾಟಕ ಬರೋಬ್ಬರಿ 80,269 ಕೋಟಿ ರೂ. ಜಿಎಸ್ ಟಿ ಸಂಗ್ರಹಿಸಿ ಅಗ್ರಪಟ್ಟ ಅಲಂಕರಿಸಿತ್ತು. ಕಳೆದ ವರ್ಷ ಕರ್ನಾಟಕ ನವೆಂಬರ್ ವರೆಗೆ 60,068 ಕೋಟಿ ರೂ. ಒಟ್ಟು ಜಿಎಸ್ ಟಿ ಸಂಗ್ರಹಿಸಿತ್ತು. ಮಹಾರಾಷ್ಟ್ರ ಬಿಟ್ಟರೆ ಬಳಿಕದ ಸ್ಥಾನ ಕರ್ನಾಟಕಕ್ಕೆ ಸಲ್ಲುತ್ತದೆ. ಅದರಲ್ಲೂ ಜಿಎಸ್ಟಿ ಸಂಗ್ರಹದ ಬೆಳವಣಿಗೆ ದರ 34% ಇದೆ. ಇದು ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಅತಿ ಹೆಚ್ಚು ಬೆಳವಣಿಗೆ ದರವಾಗಿದೆ.
ವಾಣಿಜ್ಯ ಇಲಾಖೆ ನೀಡಿದ ಅಂಕಿಅಂಶದಂತೆ ಕಳೆದ ವರ್ಷ ನವೆಂಬರ್ ವರೆಗೆ ರಾಜ್ಯ ಸರ್ಕಾರ 54,517.94 ಕೋಟಿ ರೂ. ರಾಜ್ಯ ಜಿಎಸ್ ಟಿ ಸಂಗ್ರಹಿಸಿತ್ತು. ಆದರೆ, ಅದೇ ಈ ವರ್ಷ ನವೆಂಬರ್ ವರೆಗೆ 50,600.70 ಕೋಟಿ ರೂ. ರಾಜ್ಯ ಜಿಎಸ್ ಟಿ ಸಂಗ್ರಹಿಸಲಾಗಿದೆ.
ಈ ಬಾರಿ 3,917.24 ಕೋಟಿ ರೂ.ರಷ್ಟು ಸಂಗ್ರಹ ಕುಸಿತವಾಗಿದೆ. ಮುಂದಿನ ನಾಲ್ಕು ತಿಂಗಳಲ್ಲಿ ರಾಜ್ಯ ಜಿಎಸ್ ಟಿ ಸಂಗ್ರಹ ಕಳೆದ ಬಾರಿಗಿಂತಲೂ ಅಧಿಕವಾಗಲಿದೆ ಎಂಬುದು ವಾಣಿಜ್ಯ ಇಲಾಖೆ ಅಧಿಕಾರಿಗಳ ವಿಶ್ವಾಸ.
ತೈಲ ಮೇಲಿನ ಮಾರಾಟ ತೆರಿಗೆ ಸಂಗ್ರಹದಲ್ಲೂ ಕುಸಿತ :ಇತ್ತ ತೈಲ ಮೇಲಿನ ಮಾರಾಟ ತೆರಿಗೆ ಸಂಗ್ರಹದಲ್ಲೂ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನವೆಂಬರ್ ವರೆಗೆ ಕುಸಿತ ಕಂಡಿದೆ. 2021-22ರಲ್ಲಿ ನವೆಂಬರ್ ವರೆಗೆ ಕರ್ನಾಟಕ ಮಾರಾಟ ತೆರಿಗೆ 13,386.69 ಕೋಟಿ ರೂ.ಸಂಗ್ರಹವಾಗಿತ್ತು. ಈ ಬಾರಿ ನವೆಂಬರ್ ವರೆಗೆ ಕರ್ನಾಟಕ ಮಾರಟ ತೆರಿಗೆ ರೂಪದಲ್ಲಿ 12,524.47 ಕೋಟಿ ರೂ. ಸಂಗ್ರಹವಾಗಿದೆ. ಆ ಮೂಲಕ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನವೆಂಬರ್ ವರೆಗಿನ ಸಂಗ್ರಹದಲ್ಲಿ 862.22 ಕೋಟಿ ರೂ.ನಷ್ಟು ಕುಂಠಿತ ಕಂಡಿದೆ.
ಟಾಪ್ 5 ಜಿಎಸ್ ಟಿ ಸಂಗ್ರಹ ರಾಜ್ಯ (ನವೆಂಬರ್ ವರೆಗೆ):
ಮಹಾರಾಷ್ಟ್ರ:
2021-22: 1,37,969 ಕೋಟಿ
2022-23: 1,77,192 ಕೋಟಿ
ಬೆಳವಣಿಗೆ ದರ: 28%
ಕರ್ನಾಟಕ
2021-22: 60,068 ಕೋಟಿ
2022-23: 80,269 ಕೋಟಿ
ಬೆಳವಣಿಗೆ ದರ: 34%
ಗುಜರಾತ್:
2021-22: 63,173 ಕೋಟಿ
2022-23: 75,481 ಕೋಟಿ
ಬೆಳವಣಿಗೆ ದರ: 19%
ತಮಿಳುನಾಡು:
2021-22: 55,462 ಕೋಟಿ
2022-23: 69,224 ಕೋಟಿ
ಬೆಳವಣಿಗೆ ದರ: 25%
ಉತ್ತರ ಪ್ರದೇಶ:
2021-22: 47,713 ಕೋಟಿ
2022-23: 57,991 ಕೋಟಿ
ಬೆಳವಣಿಗೆ ದರ: 22%
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…