Categories: ರಾಜ್ಯ

ದೇಶದಲ್ಲೇ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ

ದೇಶದಲ್ಲೇ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿ ಇದ್ದರೂ ಸಹ ರಾಜ್ಯ ಜಿಎಸ್​ಟಿ ಸಂಗ್ರಹದಲ್ಲಿ ಕುಂಠಿತಗೊಂಡಿರುವುದು ವಿಪರ್ಯಾಸ.

ಒಟ್ಟು ಕೇಂದ್ರ ಹಾಗೂ ರಾಜ್ಯ ಜಿಎಸ್​ಟಿ ತೆರಿಗೆ ಸಂಗ್ರಹದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದರೂ, ಈ ಸಾಲಿನಲ್ಲಿ ನವೆಂಬರ್​​ ವರೆಗೆ ಸಂಗ್ರಹಿಸಿದ ರಾಜ್ಯ ಜಿಎಸ್​ಟಿ ಕಳೆದ ವರ್ಷಕ್ಕೆ ಹೋಲಿಸಿದರೆ ಕುಸಿತ ಕಂಡಿದೆ.

ನಿರೀಕ್ಷೆಗೂ ಮೀರಿ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇತ್ತ ರಾಜ್ಯದ ಬೊಕ್ಕಸ ತುಂಬಿಸುವಲ್ಲಿ ಜಿಎಸ್​ಟಿ ಹಾಗೂ ತೈಲ ಮೇಲಿನ ಕರ್ನಾಟಕ ಮಾರಾಟ ತೆರಿಗೆ ಗಣನೀಯ ಪಾಲು ಹೊಂದಿದೆ.

ರಾಜ್ಯ ಸರ್ಕಾರ ಈ ಬಾರಿ ನಿರೀಕ್ಷೆಗಿಂತ ಹೆಚ್ಚಿಗೆ ಆದಾಯ ಸಂಗ್ರಹ ಮಾಡುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದ ಎಲ್ಲಾ ಪ್ರಮುಖ ತೆರಿಗೆ ಮೂಲಗಳಿಂದ ನವೆಂಬರ್ ವರೆಗೆ ಭರ್ಜರಿ ಆದಾಯ ಸಂಗ್ರಹವಾಗಿದೆ.

ನವೆಂಬರ್ ತಿಂಗಳವರೆಗೆ ಕರ್ನಾಟಕ ಬರೋಬ್ಬರಿ 80,269 ಕೋಟಿ ರೂ. ಜಿಎಸ್ ಟಿ ಸಂಗ್ರಹಿಸಿ ಅಗ್ರಪಟ್ಟ ಅಲಂಕರಿಸಿತ್ತು. ಕಳೆದ ವರ್ಷ ಕರ್ನಾಟಕ ನವೆಂಬರ್ ವರೆಗೆ 60,068 ಕೋಟಿ ರೂ. ಒಟ್ಟು ಜಿಎಸ್ ಟಿ ಸಂಗ್ರಹಿಸಿತ್ತು. ಮಹಾರಾಷ್ಟ್ರ ಬಿಟ್ಟರೆ ಬಳಿಕದ ಸ್ಥಾನ ಕರ್ನಾಟಕಕ್ಕೆ ಸಲ್ಲುತ್ತದೆ. ಅದರಲ್ಲೂ ಜಿಎಸ್​ಟಿ ಸಂಗ್ರಹದ ಬೆಳವಣಿಗೆ ದರ 34% ಇದೆ. ಇದು ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಅತಿ ಹೆಚ್ಚು ಬೆಳವಣಿಗೆ ದರವಾಗಿದೆ.

ವಾಣಿಜ್ಯ ಇಲಾಖೆ ನೀಡಿದ ಅಂಕಿಅಂಶದಂತೆ ಕಳೆದ ವರ್ಷ ನವೆಂಬರ್ ವರೆಗೆ ರಾಜ್ಯ ಸರ್ಕಾರ 54,517.94 ಕೋಟಿ ರೂ. ರಾಜ್ಯ ಜಿಎಸ್ ಟಿ ಸಂಗ್ರಹಿಸಿತ್ತು. ಆದರೆ, ಅದೇ ಈ ವರ್ಷ ನವೆಂಬರ್ ವರೆಗೆ 50,600.70 ಕೋಟಿ ರೂ. ರಾಜ್ಯ ಜಿಎಸ್ ಟಿ ಸಂಗ್ರಹಿಸಲಾಗಿದೆ.

ಈ ಬಾರಿ 3,917.24 ಕೋಟಿ ರೂ.ರಷ್ಟು ಸಂಗ್ರಹ ಕುಸಿತವಾಗಿದೆ. ಮುಂದಿನ ನಾಲ್ಕು ತಿಂಗಳಲ್ಲಿ ರಾಜ್ಯ ಜಿಎಸ್ ಟಿ ಸಂಗ್ರಹ ಕಳೆದ ಬಾರಿಗಿಂತಲೂ ಅಧಿಕವಾಗಲಿದೆ ಎಂಬುದು ವಾಣಿಜ್ಯ ಇಲಾಖೆ ಅಧಿಕಾರಿಗಳ ವಿಶ್ವಾಸ.

ತೈಲ ಮೇಲಿನ ಮಾರಾಟ ತೆರಿಗೆ ಸಂಗ್ರಹದಲ್ಲೂ ಕುಸಿತ :ಇತ್ತ ತೈಲ ಮೇಲಿನ ಮಾರಾಟ ತೆರಿಗೆ ಸಂಗ್ರಹದಲ್ಲೂ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನವೆಂಬರ್ ವರೆಗೆ ಕುಸಿತ ಕಂಡಿದೆ. 2021-22ರಲ್ಲಿ ನವೆಂಬರ್ ವರೆಗೆ ಕರ್ನಾಟಕ‌ ಮಾರಾಟ ತೆರಿಗೆ 13,386.69 ಕೋಟಿ ರೂ.ಸಂಗ್ರಹವಾಗಿತ್ತು. ಈ ಬಾರಿ ನವೆಂಬರ್ ವರೆಗೆ ಕರ್ನಾಟಕ ಮಾರಟ ತೆರಿಗೆ ರೂಪದಲ್ಲಿ 12,524.47 ಕೋಟಿ ರೂ. ಸಂಗ್ರಹವಾಗಿದೆ. ಆ ಮೂಲಕ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನವೆಂಬರ್ ವರೆಗಿನ ಸಂಗ್ರಹದಲ್ಲಿ 862.22 ಕೋಟಿ ರೂ.ನಷ್ಟು ಕುಂಠಿತ ಕಂಡಿದೆ.

ಟಾಪ್ 5 ಜಿಎಸ್ ಟಿ ಸಂಗ್ರಹ ರಾಜ್ಯ (ನವೆಂಬರ್ ವರೆಗೆ):
ಮಹಾರಾಷ್ಟ್ರ:
2021-22: 1,37,969 ಕೋಟಿ
2022-23: 1,77,192 ಕೋಟಿ
ಬೆಳವಣಿಗೆ ದರ: 28%

ಕರ್ನಾಟಕ
2021-22: 60,068 ಕೋಟಿ
2022-23: 80,269 ಕೋಟಿ
ಬೆಳವಣಿಗೆ ದರ: 34%

ಗುಜರಾತ್:
2021-22: 63,173 ಕೋಟಿ
2022-23: 75,481 ಕೋಟಿ
ಬೆಳವಣಿಗೆ ದರ: 19%

ತಮಿಳುನಾಡು:
2021-22: 55,462 ಕೋಟಿ
2022-23: 69,224 ಕೋಟಿ
ಬೆಳವಣಿಗೆ ದರ: 25%

ಉತ್ತರ ಪ್ರದೇಶ:
2021-22: 47,713 ಕೋಟಿ
2022-23: 57,991 ಕೋಟಿ
ಬೆಳವಣಿಗೆ ದರ: 22%

Ramesh Babu

Journalist

Recent Posts

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

2 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

16 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

17 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

17 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

18 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

21 hours ago