Categories: ರಾಜ್ಯ

ದೇಶದಲ್ಲೇ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ

ದೇಶದಲ್ಲೇ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿ ಇದ್ದರೂ ಸಹ ರಾಜ್ಯ ಜಿಎಸ್​ಟಿ ಸಂಗ್ರಹದಲ್ಲಿ ಕುಂಠಿತಗೊಂಡಿರುವುದು ವಿಪರ್ಯಾಸ.

ಒಟ್ಟು ಕೇಂದ್ರ ಹಾಗೂ ರಾಜ್ಯ ಜಿಎಸ್​ಟಿ ತೆರಿಗೆ ಸಂಗ್ರಹದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದರೂ, ಈ ಸಾಲಿನಲ್ಲಿ ನವೆಂಬರ್​​ ವರೆಗೆ ಸಂಗ್ರಹಿಸಿದ ರಾಜ್ಯ ಜಿಎಸ್​ಟಿ ಕಳೆದ ವರ್ಷಕ್ಕೆ ಹೋಲಿಸಿದರೆ ಕುಸಿತ ಕಂಡಿದೆ.

ನಿರೀಕ್ಷೆಗೂ ಮೀರಿ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇತ್ತ ರಾಜ್ಯದ ಬೊಕ್ಕಸ ತುಂಬಿಸುವಲ್ಲಿ ಜಿಎಸ್​ಟಿ ಹಾಗೂ ತೈಲ ಮೇಲಿನ ಕರ್ನಾಟಕ ಮಾರಾಟ ತೆರಿಗೆ ಗಣನೀಯ ಪಾಲು ಹೊಂದಿದೆ.

ರಾಜ್ಯ ಸರ್ಕಾರ ಈ ಬಾರಿ ನಿರೀಕ್ಷೆಗಿಂತ ಹೆಚ್ಚಿಗೆ ಆದಾಯ ಸಂಗ್ರಹ ಮಾಡುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದ ಎಲ್ಲಾ ಪ್ರಮುಖ ತೆರಿಗೆ ಮೂಲಗಳಿಂದ ನವೆಂಬರ್ ವರೆಗೆ ಭರ್ಜರಿ ಆದಾಯ ಸಂಗ್ರಹವಾಗಿದೆ.

ನವೆಂಬರ್ ತಿಂಗಳವರೆಗೆ ಕರ್ನಾಟಕ ಬರೋಬ್ಬರಿ 80,269 ಕೋಟಿ ರೂ. ಜಿಎಸ್ ಟಿ ಸಂಗ್ರಹಿಸಿ ಅಗ್ರಪಟ್ಟ ಅಲಂಕರಿಸಿತ್ತು. ಕಳೆದ ವರ್ಷ ಕರ್ನಾಟಕ ನವೆಂಬರ್ ವರೆಗೆ 60,068 ಕೋಟಿ ರೂ. ಒಟ್ಟು ಜಿಎಸ್ ಟಿ ಸಂಗ್ರಹಿಸಿತ್ತು. ಮಹಾರಾಷ್ಟ್ರ ಬಿಟ್ಟರೆ ಬಳಿಕದ ಸ್ಥಾನ ಕರ್ನಾಟಕಕ್ಕೆ ಸಲ್ಲುತ್ತದೆ. ಅದರಲ್ಲೂ ಜಿಎಸ್​ಟಿ ಸಂಗ್ರಹದ ಬೆಳವಣಿಗೆ ದರ 34% ಇದೆ. ಇದು ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಅತಿ ಹೆಚ್ಚು ಬೆಳವಣಿಗೆ ದರವಾಗಿದೆ.

ವಾಣಿಜ್ಯ ಇಲಾಖೆ ನೀಡಿದ ಅಂಕಿಅಂಶದಂತೆ ಕಳೆದ ವರ್ಷ ನವೆಂಬರ್ ವರೆಗೆ ರಾಜ್ಯ ಸರ್ಕಾರ 54,517.94 ಕೋಟಿ ರೂ. ರಾಜ್ಯ ಜಿಎಸ್ ಟಿ ಸಂಗ್ರಹಿಸಿತ್ತು. ಆದರೆ, ಅದೇ ಈ ವರ್ಷ ನವೆಂಬರ್ ವರೆಗೆ 50,600.70 ಕೋಟಿ ರೂ. ರಾಜ್ಯ ಜಿಎಸ್ ಟಿ ಸಂಗ್ರಹಿಸಲಾಗಿದೆ.

ಈ ಬಾರಿ 3,917.24 ಕೋಟಿ ರೂ.ರಷ್ಟು ಸಂಗ್ರಹ ಕುಸಿತವಾಗಿದೆ. ಮುಂದಿನ ನಾಲ್ಕು ತಿಂಗಳಲ್ಲಿ ರಾಜ್ಯ ಜಿಎಸ್ ಟಿ ಸಂಗ್ರಹ ಕಳೆದ ಬಾರಿಗಿಂತಲೂ ಅಧಿಕವಾಗಲಿದೆ ಎಂಬುದು ವಾಣಿಜ್ಯ ಇಲಾಖೆ ಅಧಿಕಾರಿಗಳ ವಿಶ್ವಾಸ.

ತೈಲ ಮೇಲಿನ ಮಾರಾಟ ತೆರಿಗೆ ಸಂಗ್ರಹದಲ್ಲೂ ಕುಸಿತ :ಇತ್ತ ತೈಲ ಮೇಲಿನ ಮಾರಾಟ ತೆರಿಗೆ ಸಂಗ್ರಹದಲ್ಲೂ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನವೆಂಬರ್ ವರೆಗೆ ಕುಸಿತ ಕಂಡಿದೆ. 2021-22ರಲ್ಲಿ ನವೆಂಬರ್ ವರೆಗೆ ಕರ್ನಾಟಕ‌ ಮಾರಾಟ ತೆರಿಗೆ 13,386.69 ಕೋಟಿ ರೂ.ಸಂಗ್ರಹವಾಗಿತ್ತು. ಈ ಬಾರಿ ನವೆಂಬರ್ ವರೆಗೆ ಕರ್ನಾಟಕ ಮಾರಟ ತೆರಿಗೆ ರೂಪದಲ್ಲಿ 12,524.47 ಕೋಟಿ ರೂ. ಸಂಗ್ರಹವಾಗಿದೆ. ಆ ಮೂಲಕ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನವೆಂಬರ್ ವರೆಗಿನ ಸಂಗ್ರಹದಲ್ಲಿ 862.22 ಕೋಟಿ ರೂ.ನಷ್ಟು ಕುಂಠಿತ ಕಂಡಿದೆ.

ಟಾಪ್ 5 ಜಿಎಸ್ ಟಿ ಸಂಗ್ರಹ ರಾಜ್ಯ (ನವೆಂಬರ್ ವರೆಗೆ):
ಮಹಾರಾಷ್ಟ್ರ:
2021-22: 1,37,969 ಕೋಟಿ
2022-23: 1,77,192 ಕೋಟಿ
ಬೆಳವಣಿಗೆ ದರ: 28%

ಕರ್ನಾಟಕ
2021-22: 60,068 ಕೋಟಿ
2022-23: 80,269 ಕೋಟಿ
ಬೆಳವಣಿಗೆ ದರ: 34%

ಗುಜರಾತ್:
2021-22: 63,173 ಕೋಟಿ
2022-23: 75,481 ಕೋಟಿ
ಬೆಳವಣಿಗೆ ದರ: 19%

ತಮಿಳುನಾಡು:
2021-22: 55,462 ಕೋಟಿ
2022-23: 69,224 ಕೋಟಿ
ಬೆಳವಣಿಗೆ ದರ: 25%

ಉತ್ತರ ಪ್ರದೇಶ:
2021-22: 47,713 ಕೋಟಿ
2022-23: 57,991 ಕೋಟಿ
ಬೆಳವಣಿಗೆ ದರ: 22%

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

6 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

6 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

19 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

19 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

22 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago