Categories: ರಾಯಚೂರು

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆಯಾಗಿದೆ.

ದೇಶದ ಅತ್ಯುತ್ತಮ ಮೂರು ಪೊಲೀಸ್ ಠಾಣೆಯಲ್ಲಿ ಕವಿತಾಳ ಆಯ್ಕೆಯಾಗಿರೋದಕ್ಕೆ ಇಲ್ಲಿಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಕವಿತಾಳ ಪೊಲೀಸ್ ಠಾಣೆ ಜನಸ್ನೇಹಿ, ಸಿಬ್ಬಂದಿ ಸ್ನೇಹಿಯಾಗಿದೆ. ದೇಶದ 78 ಪೊಲೀಸ್ ಠಾಣೆಗಳನ್ನ ಪರಿಶೀಲನೆ ನಡೆಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜನ ಸಂಪರ್ಕ, ಪೊಲೀಸ್ ಠಾಣಾ ಕಟ್ಟಡದ ಸುವ್ಯವಸ್ಥೆ, ಸಿಬ್ಬಂದಿ ಶಿಸ್ತು ಮತ್ತು ಕಾರ್ಯದಕ್ಷತೆ, ಕಡತಗಳ ವಿಲೇವಾರಿ, ಮೂಲಭೂತ ಸೌಕರ್ಯಗಳು ಸೇರಿದಂತೆ ವಿವಿಧ ಮಾನದಂಡಗಳ ಆಧಾರದ ಮೇಲೆ ಆಯ್ಕೆ ಮಾಡಿದೆ.

ಇದಕ್ಕೂ ಮುನ್ನ 2021ರ ಸಾಲಿನಲ್ಲಿ ಮಾನ್ವಿ ಪೊಲೀಸ್ ಠಾಣೆ ಟಾಪ್-5ನೇ ಸ್ಥಾನ ಪಡೆದಿತ್ತು. ಈಗ ಕವಿತಾಳ ಠಾಣೆ ಟಾಪ್-3ನೇ ಸ್ಥಾನ ಪಡೆದಿದೆ

ನವೆಂಬರ್ 28 ರಂದು ಛತ್ತೀಸ್ಗಢದ ರಾಯಪುರದಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಭಾಗಿಯಾಗಲು ಕೇಂದ್ರ ಸಚಿವಾಲಯ ಪತ್ರ ರವಾನಿಸಿದೆ. ರಾಯಚೂರು ಎಸ್‌ಪಿ ಅವರಿಗೆ ಪತ್ರ ಕಳುಹಿಸಲಾಗಿದೆ. ಅತ್ಯುತ್ತಮ ಪೊಲೀಸ್ ಠಾಣೆಗೆ ಕವಿತಾಳ ಆಯ್ಕೆಗೊಂಡಿದಕ್ಕೆ ಎಸ್‌ಪಿ ಎಂ.ಪುಟ್ಟಮಾದಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರ‍್ಯಾಂಕ್ ಹಿನ್ನೆಲೆ ಕವಿತಾಳ ಠಾಣೆಗೆ ಕೇಂದ್ರ ಸರ್ಕಾರದಿಂದ ವಿಶೇಷ ಸೌಲಭ್ಯಗಳು ದೊರೆಯಲಿವೆ. ಪೀಠೋಪಕರಣ, ಲ್ಯಾಪ್‌ಟಾಪ್ ಸೇರಿದಂತೆ ಕೇಂದ್ರದಿಂದ ವಿಶೇಷ ಸೌಲಭ್ಯಗಳು ಸಿಗಲಿವೆ. ಜಿಲ್ಲೆಯ ಬಳಗಾನೂರು ಹಾಗೂ ಕವಿತಾಳ ಪೊಲೀಸ್ ಠಾಣೆಗಳು ಈ ಸ್ಪರ್ಧೆಯಲ್ಲಿದ್ದವು. ಅಂತಿಮವಾಗಿ ಕವಿತಾಳ ಪೊಲೀಸ್ ಠಾಣೆ ದೇಶದ ಟಾಪ್-3 ಠಾಣೆಯ ಪಟ್ಟಿಗೆ ಸೇರಿದೆ.

ನ.28ರಂದು ಐಐಎಂ ರಾಯಪುರ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಿಂದ ಕವಿತಾಳ ಠಾಣೆ ಪಿಎಸ್‌ಐ ಗುರುಚಂದ್ರ ಯಾದವ್ ಟ್ರೋಫಿ ಸ್ವೀಕರಿಸಲಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

3 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

16 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

17 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

18 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

20 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago