ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆಯಾಗಿದೆ.
ದೇಶದ ಅತ್ಯುತ್ತಮ ಮೂರು ಪೊಲೀಸ್ ಠಾಣೆಯಲ್ಲಿ ಕವಿತಾಳ ಆಯ್ಕೆಯಾಗಿರೋದಕ್ಕೆ ಇಲ್ಲಿಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಕವಿತಾಳ ಪೊಲೀಸ್ ಠಾಣೆ ಜನಸ್ನೇಹಿ, ಸಿಬ್ಬಂದಿ ಸ್ನೇಹಿಯಾಗಿದೆ. ದೇಶದ 78 ಪೊಲೀಸ್ ಠಾಣೆಗಳನ್ನ ಪರಿಶೀಲನೆ ನಡೆಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಜನ ಸಂಪರ್ಕ, ಪೊಲೀಸ್ ಠಾಣಾ ಕಟ್ಟಡದ ಸುವ್ಯವಸ್ಥೆ, ಸಿಬ್ಬಂದಿ ಶಿಸ್ತು ಮತ್ತು ಕಾರ್ಯದಕ್ಷತೆ, ಕಡತಗಳ ವಿಲೇವಾರಿ, ಮೂಲಭೂತ ಸೌಕರ್ಯಗಳು ಸೇರಿದಂತೆ ವಿವಿಧ ಮಾನದಂಡಗಳ ಆಧಾರದ ಮೇಲೆ ಆಯ್ಕೆ ಮಾಡಿದೆ.
ಇದಕ್ಕೂ ಮುನ್ನ 2021ರ ಸಾಲಿನಲ್ಲಿ ಮಾನ್ವಿ ಪೊಲೀಸ್ ಠಾಣೆ ಟಾಪ್-5ನೇ ಸ್ಥಾನ ಪಡೆದಿತ್ತು. ಈಗ ಕವಿತಾಳ ಠಾಣೆ ಟಾಪ್-3ನೇ ಸ್ಥಾನ ಪಡೆದಿದೆ
ನವೆಂಬರ್ 28 ರಂದು ಛತ್ತೀಸ್ಗಢದ ರಾಯಪುರದಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಭಾಗಿಯಾಗಲು ಕೇಂದ್ರ ಸಚಿವಾಲಯ ಪತ್ರ ರವಾನಿಸಿದೆ. ರಾಯಚೂರು ಎಸ್ಪಿ ಅವರಿಗೆ ಪತ್ರ ಕಳುಹಿಸಲಾಗಿದೆ. ಅತ್ಯುತ್ತಮ ಪೊಲೀಸ್ ಠಾಣೆಗೆ ಕವಿತಾಳ ಆಯ್ಕೆಗೊಂಡಿದಕ್ಕೆ ಎಸ್ಪಿ ಎಂ.ಪುಟ್ಟಮಾದಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರ್ಯಾಂಕ್ ಹಿನ್ನೆಲೆ ಕವಿತಾಳ ಠಾಣೆಗೆ ಕೇಂದ್ರ ಸರ್ಕಾರದಿಂದ ವಿಶೇಷ ಸೌಲಭ್ಯಗಳು ದೊರೆಯಲಿವೆ. ಪೀಠೋಪಕರಣ, ಲ್ಯಾಪ್ಟಾಪ್ ಸೇರಿದಂತೆ ಕೇಂದ್ರದಿಂದ ವಿಶೇಷ ಸೌಲಭ್ಯಗಳು ಸಿಗಲಿವೆ. ಜಿಲ್ಲೆಯ ಬಳಗಾನೂರು ಹಾಗೂ ಕವಿತಾಳ ಪೊಲೀಸ್ ಠಾಣೆಗಳು ಈ ಸ್ಪರ್ಧೆಯಲ್ಲಿದ್ದವು. ಅಂತಿಮವಾಗಿ ಕವಿತಾಳ ಪೊಲೀಸ್ ಠಾಣೆ ದೇಶದ ಟಾಪ್-3 ಠಾಣೆಯ ಪಟ್ಟಿಗೆ ಸೇರಿದೆ.
ನ.28ರಂದು ಐಐಎಂ ರಾಯಪುರ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಿಂದ ಕವಿತಾಳ ಠಾಣೆ ಪಿಎಸ್ಐ ಗುರುಚಂದ್ರ ಯಾದವ್ ಟ್ರೋಫಿ ಸ್ವೀಕರಿಸಲಿದ್ದಾರೆ.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…