ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆಯಾಗಿದೆ.
ದೇಶದ ಅತ್ಯುತ್ತಮ ಮೂರು ಪೊಲೀಸ್ ಠಾಣೆಯಲ್ಲಿ ಕವಿತಾಳ ಆಯ್ಕೆಯಾಗಿರೋದಕ್ಕೆ ಇಲ್ಲಿಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಕವಿತಾಳ ಪೊಲೀಸ್ ಠಾಣೆ ಜನಸ್ನೇಹಿ, ಸಿಬ್ಬಂದಿ ಸ್ನೇಹಿಯಾಗಿದೆ. ದೇಶದ 78 ಪೊಲೀಸ್ ಠಾಣೆಗಳನ್ನ ಪರಿಶೀಲನೆ ನಡೆಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಜನ ಸಂಪರ್ಕ, ಪೊಲೀಸ್ ಠಾಣಾ ಕಟ್ಟಡದ ಸುವ್ಯವಸ್ಥೆ, ಸಿಬ್ಬಂದಿ ಶಿಸ್ತು ಮತ್ತು ಕಾರ್ಯದಕ್ಷತೆ, ಕಡತಗಳ ವಿಲೇವಾರಿ, ಮೂಲಭೂತ ಸೌಕರ್ಯಗಳು ಸೇರಿದಂತೆ ವಿವಿಧ ಮಾನದಂಡಗಳ ಆಧಾರದ ಮೇಲೆ ಆಯ್ಕೆ ಮಾಡಿದೆ.
ಇದಕ್ಕೂ ಮುನ್ನ 2021ರ ಸಾಲಿನಲ್ಲಿ ಮಾನ್ವಿ ಪೊಲೀಸ್ ಠಾಣೆ ಟಾಪ್-5ನೇ ಸ್ಥಾನ ಪಡೆದಿತ್ತು. ಈಗ ಕವಿತಾಳ ಠಾಣೆ ಟಾಪ್-3ನೇ ಸ್ಥಾನ ಪಡೆದಿದೆ
ನವೆಂಬರ್ 28 ರಂದು ಛತ್ತೀಸ್ಗಢದ ರಾಯಪುರದಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಭಾಗಿಯಾಗಲು ಕೇಂದ್ರ ಸಚಿವಾಲಯ ಪತ್ರ ರವಾನಿಸಿದೆ. ರಾಯಚೂರು ಎಸ್ಪಿ ಅವರಿಗೆ ಪತ್ರ ಕಳುಹಿಸಲಾಗಿದೆ. ಅತ್ಯುತ್ತಮ ಪೊಲೀಸ್ ಠಾಣೆಗೆ ಕವಿತಾಳ ಆಯ್ಕೆಗೊಂಡಿದಕ್ಕೆ ಎಸ್ಪಿ ಎಂ.ಪುಟ್ಟಮಾದಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರ್ಯಾಂಕ್ ಹಿನ್ನೆಲೆ ಕವಿತಾಳ ಠಾಣೆಗೆ ಕೇಂದ್ರ ಸರ್ಕಾರದಿಂದ ವಿಶೇಷ ಸೌಲಭ್ಯಗಳು ದೊರೆಯಲಿವೆ. ಪೀಠೋಪಕರಣ, ಲ್ಯಾಪ್ಟಾಪ್ ಸೇರಿದಂತೆ ಕೇಂದ್ರದಿಂದ ವಿಶೇಷ ಸೌಲಭ್ಯಗಳು ಸಿಗಲಿವೆ. ಜಿಲ್ಲೆಯ ಬಳಗಾನೂರು ಹಾಗೂ ಕವಿತಾಳ ಪೊಲೀಸ್ ಠಾಣೆಗಳು ಈ ಸ್ಪರ್ಧೆಯಲ್ಲಿದ್ದವು. ಅಂತಿಮವಾಗಿ ಕವಿತಾಳ ಪೊಲೀಸ್ ಠಾಣೆ ದೇಶದ ಟಾಪ್-3 ಠಾಣೆಯ ಪಟ್ಟಿಗೆ ಸೇರಿದೆ.
ನ.28ರಂದು ಐಐಎಂ ರಾಯಪುರ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಿಂದ ಕವಿತಾಳ ಠಾಣೆ ಪಿಎಸ್ಐ ಗುರುಚಂದ್ರ ಯಾದವ್ ಟ್ರೋಫಿ ಸ್ವೀಕರಿಸಲಿದ್ದಾರೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…