Categories: ರಾಯಚೂರು

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆಯಾಗಿದೆ.

ದೇಶದ ಅತ್ಯುತ್ತಮ ಮೂರು ಪೊಲೀಸ್ ಠಾಣೆಯಲ್ಲಿ ಕವಿತಾಳ ಆಯ್ಕೆಯಾಗಿರೋದಕ್ಕೆ ಇಲ್ಲಿಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಕವಿತಾಳ ಪೊಲೀಸ್ ಠಾಣೆ ಜನಸ್ನೇಹಿ, ಸಿಬ್ಬಂದಿ ಸ್ನೇಹಿಯಾಗಿದೆ. ದೇಶದ 78 ಪೊಲೀಸ್ ಠಾಣೆಗಳನ್ನ ಪರಿಶೀಲನೆ ನಡೆಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜನ ಸಂಪರ್ಕ, ಪೊಲೀಸ್ ಠಾಣಾ ಕಟ್ಟಡದ ಸುವ್ಯವಸ್ಥೆ, ಸಿಬ್ಬಂದಿ ಶಿಸ್ತು ಮತ್ತು ಕಾರ್ಯದಕ್ಷತೆ, ಕಡತಗಳ ವಿಲೇವಾರಿ, ಮೂಲಭೂತ ಸೌಕರ್ಯಗಳು ಸೇರಿದಂತೆ ವಿವಿಧ ಮಾನದಂಡಗಳ ಆಧಾರದ ಮೇಲೆ ಆಯ್ಕೆ ಮಾಡಿದೆ.

ಇದಕ್ಕೂ ಮುನ್ನ 2021ರ ಸಾಲಿನಲ್ಲಿ ಮಾನ್ವಿ ಪೊಲೀಸ್ ಠಾಣೆ ಟಾಪ್-5ನೇ ಸ್ಥಾನ ಪಡೆದಿತ್ತು. ಈಗ ಕವಿತಾಳ ಠಾಣೆ ಟಾಪ್-3ನೇ ಸ್ಥಾನ ಪಡೆದಿದೆ

ನವೆಂಬರ್ 28 ರಂದು ಛತ್ತೀಸ್ಗಢದ ರಾಯಪುರದಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಭಾಗಿಯಾಗಲು ಕೇಂದ್ರ ಸಚಿವಾಲಯ ಪತ್ರ ರವಾನಿಸಿದೆ. ರಾಯಚೂರು ಎಸ್‌ಪಿ ಅವರಿಗೆ ಪತ್ರ ಕಳುಹಿಸಲಾಗಿದೆ. ಅತ್ಯುತ್ತಮ ಪೊಲೀಸ್ ಠಾಣೆಗೆ ಕವಿತಾಳ ಆಯ್ಕೆಗೊಂಡಿದಕ್ಕೆ ಎಸ್‌ಪಿ ಎಂ.ಪುಟ್ಟಮಾದಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರ‍್ಯಾಂಕ್ ಹಿನ್ನೆಲೆ ಕವಿತಾಳ ಠಾಣೆಗೆ ಕೇಂದ್ರ ಸರ್ಕಾರದಿಂದ ವಿಶೇಷ ಸೌಲಭ್ಯಗಳು ದೊರೆಯಲಿವೆ. ಪೀಠೋಪಕರಣ, ಲ್ಯಾಪ್‌ಟಾಪ್ ಸೇರಿದಂತೆ ಕೇಂದ್ರದಿಂದ ವಿಶೇಷ ಸೌಲಭ್ಯಗಳು ಸಿಗಲಿವೆ. ಜಿಲ್ಲೆಯ ಬಳಗಾನೂರು ಹಾಗೂ ಕವಿತಾಳ ಪೊಲೀಸ್ ಠಾಣೆಗಳು ಈ ಸ್ಪರ್ಧೆಯಲ್ಲಿದ್ದವು. ಅಂತಿಮವಾಗಿ ಕವಿತಾಳ ಪೊಲೀಸ್ ಠಾಣೆ ದೇಶದ ಟಾಪ್-3 ಠಾಣೆಯ ಪಟ್ಟಿಗೆ ಸೇರಿದೆ.

ನ.28ರಂದು ಐಐಎಂ ರಾಯಪುರ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಿಂದ ಕವಿತಾಳ ಠಾಣೆ ಪಿಎಸ್‌ಐ ಗುರುಚಂದ್ರ ಯಾದವ್ ಟ್ರೋಫಿ ಸ್ವೀಕರಿಸಲಿದ್ದಾರೆ.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

14 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

15 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

18 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago