ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆಯಾಗಿದೆ.
ದೇಶದ ಅತ್ಯುತ್ತಮ ಮೂರು ಪೊಲೀಸ್ ಠಾಣೆಯಲ್ಲಿ ಕವಿತಾಳ ಆಯ್ಕೆಯಾಗಿರೋದಕ್ಕೆ ಇಲ್ಲಿಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಕವಿತಾಳ ಪೊಲೀಸ್ ಠಾಣೆ ಜನಸ್ನೇಹಿ, ಸಿಬ್ಬಂದಿ ಸ್ನೇಹಿಯಾಗಿದೆ. ದೇಶದ 78 ಪೊಲೀಸ್ ಠಾಣೆಗಳನ್ನ ಪರಿಶೀಲನೆ ನಡೆಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಜನ ಸಂಪರ್ಕ, ಪೊಲೀಸ್ ಠಾಣಾ ಕಟ್ಟಡದ ಸುವ್ಯವಸ್ಥೆ, ಸಿಬ್ಬಂದಿ ಶಿಸ್ತು ಮತ್ತು ಕಾರ್ಯದಕ್ಷತೆ, ಕಡತಗಳ ವಿಲೇವಾರಿ, ಮೂಲಭೂತ ಸೌಕರ್ಯಗಳು ಸೇರಿದಂತೆ ವಿವಿಧ ಮಾನದಂಡಗಳ ಆಧಾರದ ಮೇಲೆ ಆಯ್ಕೆ ಮಾಡಿದೆ.
ಇದಕ್ಕೂ ಮುನ್ನ 2021ರ ಸಾಲಿನಲ್ಲಿ ಮಾನ್ವಿ ಪೊಲೀಸ್ ಠಾಣೆ ಟಾಪ್-5ನೇ ಸ್ಥಾನ ಪಡೆದಿತ್ತು. ಈಗ ಕವಿತಾಳ ಠಾಣೆ ಟಾಪ್-3ನೇ ಸ್ಥಾನ ಪಡೆದಿದೆ
ನವೆಂಬರ್ 28 ರಂದು ಛತ್ತೀಸ್ಗಢದ ರಾಯಪುರದಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಭಾಗಿಯಾಗಲು ಕೇಂದ್ರ ಸಚಿವಾಲಯ ಪತ್ರ ರವಾನಿಸಿದೆ. ರಾಯಚೂರು ಎಸ್ಪಿ ಅವರಿಗೆ ಪತ್ರ ಕಳುಹಿಸಲಾಗಿದೆ. ಅತ್ಯುತ್ತಮ ಪೊಲೀಸ್ ಠಾಣೆಗೆ ಕವಿತಾಳ ಆಯ್ಕೆಗೊಂಡಿದಕ್ಕೆ ಎಸ್ಪಿ ಎಂ.ಪುಟ್ಟಮಾದಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರ್ಯಾಂಕ್ ಹಿನ್ನೆಲೆ ಕವಿತಾಳ ಠಾಣೆಗೆ ಕೇಂದ್ರ ಸರ್ಕಾರದಿಂದ ವಿಶೇಷ ಸೌಲಭ್ಯಗಳು ದೊರೆಯಲಿವೆ. ಪೀಠೋಪಕರಣ, ಲ್ಯಾಪ್ಟಾಪ್ ಸೇರಿದಂತೆ ಕೇಂದ್ರದಿಂದ ವಿಶೇಷ ಸೌಲಭ್ಯಗಳು ಸಿಗಲಿವೆ. ಜಿಲ್ಲೆಯ ಬಳಗಾನೂರು ಹಾಗೂ ಕವಿತಾಳ ಪೊಲೀಸ್ ಠಾಣೆಗಳು ಈ ಸ್ಪರ್ಧೆಯಲ್ಲಿದ್ದವು. ಅಂತಿಮವಾಗಿ ಕವಿತಾಳ ಪೊಲೀಸ್ ಠಾಣೆ ದೇಶದ ಟಾಪ್-3 ಠಾಣೆಯ ಪಟ್ಟಿಗೆ ಸೇರಿದೆ.
ನ.28ರಂದು ಐಐಎಂ ರಾಯಪುರ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಿಂದ ಕವಿತಾಳ ಠಾಣೆ ಪಿಎಸ್ಐ ಗುರುಚಂದ್ರ ಯಾದವ್ ಟ್ರೋಫಿ ಸ್ವೀಕರಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…