Categories: ರಾಯಚೂರು

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆಯಾಗಿದೆ.

ದೇಶದ ಅತ್ಯುತ್ತಮ ಮೂರು ಪೊಲೀಸ್ ಠಾಣೆಯಲ್ಲಿ ಕವಿತಾಳ ಆಯ್ಕೆಯಾಗಿರೋದಕ್ಕೆ ಇಲ್ಲಿಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಕವಿತಾಳ ಪೊಲೀಸ್ ಠಾಣೆ ಜನಸ್ನೇಹಿ, ಸಿಬ್ಬಂದಿ ಸ್ನೇಹಿಯಾಗಿದೆ. ದೇಶದ 78 ಪೊಲೀಸ್ ಠಾಣೆಗಳನ್ನ ಪರಿಶೀಲನೆ ನಡೆಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜನ ಸಂಪರ್ಕ, ಪೊಲೀಸ್ ಠಾಣಾ ಕಟ್ಟಡದ ಸುವ್ಯವಸ್ಥೆ, ಸಿಬ್ಬಂದಿ ಶಿಸ್ತು ಮತ್ತು ಕಾರ್ಯದಕ್ಷತೆ, ಕಡತಗಳ ವಿಲೇವಾರಿ, ಮೂಲಭೂತ ಸೌಕರ್ಯಗಳು ಸೇರಿದಂತೆ ವಿವಿಧ ಮಾನದಂಡಗಳ ಆಧಾರದ ಮೇಲೆ ಆಯ್ಕೆ ಮಾಡಿದೆ.

ಇದಕ್ಕೂ ಮುನ್ನ 2021ರ ಸಾಲಿನಲ್ಲಿ ಮಾನ್ವಿ ಪೊಲೀಸ್ ಠಾಣೆ ಟಾಪ್-5ನೇ ಸ್ಥಾನ ಪಡೆದಿತ್ತು. ಈಗ ಕವಿತಾಳ ಠಾಣೆ ಟಾಪ್-3ನೇ ಸ್ಥಾನ ಪಡೆದಿದೆ

ನವೆಂಬರ್ 28 ರಂದು ಛತ್ತೀಸ್ಗಢದ ರಾಯಪುರದಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಭಾಗಿಯಾಗಲು ಕೇಂದ್ರ ಸಚಿವಾಲಯ ಪತ್ರ ರವಾನಿಸಿದೆ. ರಾಯಚೂರು ಎಸ್‌ಪಿ ಅವರಿಗೆ ಪತ್ರ ಕಳುಹಿಸಲಾಗಿದೆ. ಅತ್ಯುತ್ತಮ ಪೊಲೀಸ್ ಠಾಣೆಗೆ ಕವಿತಾಳ ಆಯ್ಕೆಗೊಂಡಿದಕ್ಕೆ ಎಸ್‌ಪಿ ಎಂ.ಪುಟ್ಟಮಾದಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರ‍್ಯಾಂಕ್ ಹಿನ್ನೆಲೆ ಕವಿತಾಳ ಠಾಣೆಗೆ ಕೇಂದ್ರ ಸರ್ಕಾರದಿಂದ ವಿಶೇಷ ಸೌಲಭ್ಯಗಳು ದೊರೆಯಲಿವೆ. ಪೀಠೋಪಕರಣ, ಲ್ಯಾಪ್‌ಟಾಪ್ ಸೇರಿದಂತೆ ಕೇಂದ್ರದಿಂದ ವಿಶೇಷ ಸೌಲಭ್ಯಗಳು ಸಿಗಲಿವೆ. ಜಿಲ್ಲೆಯ ಬಳಗಾನೂರು ಹಾಗೂ ಕವಿತಾಳ ಪೊಲೀಸ್ ಠಾಣೆಗಳು ಈ ಸ್ಪರ್ಧೆಯಲ್ಲಿದ್ದವು. ಅಂತಿಮವಾಗಿ ಕವಿತಾಳ ಪೊಲೀಸ್ ಠಾಣೆ ದೇಶದ ಟಾಪ್-3 ಠಾಣೆಯ ಪಟ್ಟಿಗೆ ಸೇರಿದೆ.

ನ.28ರಂದು ಐಐಎಂ ರಾಯಪುರ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಿಂದ ಕವಿತಾಳ ಠಾಣೆ ಪಿಎಸ್‌ಐ ಗುರುಚಂದ್ರ ಯಾದವ್ ಟ್ರೋಫಿ ಸ್ವೀಕರಿಸಲಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

20 minutes ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

17 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago