Categories: ರಾಯಚೂರು

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆಯಾಗಿದೆ.

ದೇಶದ ಅತ್ಯುತ್ತಮ ಮೂರು ಪೊಲೀಸ್ ಠಾಣೆಯಲ್ಲಿ ಕವಿತಾಳ ಆಯ್ಕೆಯಾಗಿರೋದಕ್ಕೆ ಇಲ್ಲಿಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಕವಿತಾಳ ಪೊಲೀಸ್ ಠಾಣೆ ಜನಸ್ನೇಹಿ, ಸಿಬ್ಬಂದಿ ಸ್ನೇಹಿಯಾಗಿದೆ. ದೇಶದ 78 ಪೊಲೀಸ್ ಠಾಣೆಗಳನ್ನ ಪರಿಶೀಲನೆ ನಡೆಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜನ ಸಂಪರ್ಕ, ಪೊಲೀಸ್ ಠಾಣಾ ಕಟ್ಟಡದ ಸುವ್ಯವಸ್ಥೆ, ಸಿಬ್ಬಂದಿ ಶಿಸ್ತು ಮತ್ತು ಕಾರ್ಯದಕ್ಷತೆ, ಕಡತಗಳ ವಿಲೇವಾರಿ, ಮೂಲಭೂತ ಸೌಕರ್ಯಗಳು ಸೇರಿದಂತೆ ವಿವಿಧ ಮಾನದಂಡಗಳ ಆಧಾರದ ಮೇಲೆ ಆಯ್ಕೆ ಮಾಡಿದೆ.

ಇದಕ್ಕೂ ಮುನ್ನ 2021ರ ಸಾಲಿನಲ್ಲಿ ಮಾನ್ವಿ ಪೊಲೀಸ್ ಠಾಣೆ ಟಾಪ್-5ನೇ ಸ್ಥಾನ ಪಡೆದಿತ್ತು. ಈಗ ಕವಿತಾಳ ಠಾಣೆ ಟಾಪ್-3ನೇ ಸ್ಥಾನ ಪಡೆದಿದೆ

ನವೆಂಬರ್ 28 ರಂದು ಛತ್ತೀಸ್ಗಢದ ರಾಯಪುರದಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಭಾಗಿಯಾಗಲು ಕೇಂದ್ರ ಸಚಿವಾಲಯ ಪತ್ರ ರವಾನಿಸಿದೆ. ರಾಯಚೂರು ಎಸ್‌ಪಿ ಅವರಿಗೆ ಪತ್ರ ಕಳುಹಿಸಲಾಗಿದೆ. ಅತ್ಯುತ್ತಮ ಪೊಲೀಸ್ ಠಾಣೆಗೆ ಕವಿತಾಳ ಆಯ್ಕೆಗೊಂಡಿದಕ್ಕೆ ಎಸ್‌ಪಿ ಎಂ.ಪುಟ್ಟಮಾದಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರ‍್ಯಾಂಕ್ ಹಿನ್ನೆಲೆ ಕವಿತಾಳ ಠಾಣೆಗೆ ಕೇಂದ್ರ ಸರ್ಕಾರದಿಂದ ವಿಶೇಷ ಸೌಲಭ್ಯಗಳು ದೊರೆಯಲಿವೆ. ಪೀಠೋಪಕರಣ, ಲ್ಯಾಪ್‌ಟಾಪ್ ಸೇರಿದಂತೆ ಕೇಂದ್ರದಿಂದ ವಿಶೇಷ ಸೌಲಭ್ಯಗಳು ಸಿಗಲಿವೆ. ಜಿಲ್ಲೆಯ ಬಳಗಾನೂರು ಹಾಗೂ ಕವಿತಾಳ ಪೊಲೀಸ್ ಠಾಣೆಗಳು ಈ ಸ್ಪರ್ಧೆಯಲ್ಲಿದ್ದವು. ಅಂತಿಮವಾಗಿ ಕವಿತಾಳ ಪೊಲೀಸ್ ಠಾಣೆ ದೇಶದ ಟಾಪ್-3 ಠಾಣೆಯ ಪಟ್ಟಿಗೆ ಸೇರಿದೆ.

ನ.28ರಂದು ಐಐಎಂ ರಾಯಪುರ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಿಂದ ಕವಿತಾಳ ಠಾಣೆ ಪಿಎಸ್‌ಐ ಗುರುಚಂದ್ರ ಯಾದವ್ ಟ್ರೋಫಿ ಸ್ವೀಕರಿಸಲಿದ್ದಾರೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

18 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago