ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಬಿ. ಮುನೇಗೌಡ ಅವರು ವಿಶೇಷ ಪೂಜೆ ಸಲ್ಲಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಎಸ್.ಎಸ್. ಘಾಟಿ ಸುಬ್ರಹ್ಮಣ್ಯ ದೇವಾಲಯ ಸಮೀಪದ ದೇವರ ಬೆಟ್ಟ ಶ್ರೀ ವಿಶ್ವ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು ನಡೆದ ಪೂಜಾ ಕಾರ್ಯಕ್ರಮದಲ್ಲಿ ದೇವೇಗೌಡರ ಆರೋಗ್ಯ, ಆಯುಷ್ಯ ಹಾಗೂ ರಾಜ್ಯದ ಜನರ ಸುಖಶಾಂತಿಗಾಗಿ ಪ್ರಾರ್ಥಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಬಿ. ಮುನೇಗೌಡ ಅವರು, ದೇಶದ ರಾಜಕೀಯ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನೀಡಿರುವ ಕೊಡುಗೆ ಅಪಾರವಾಗಿದ್ದು, ರೈತರು ಹಾಗೂ ಸಾಮಾನ್ಯ ಜನರ ಪರವಾಗಿ ಅವರು ಸದಾ ಧ್ವನಿಯಾಗಿದ್ದಾರೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಅನೇಕ ಸಮಯ ಸಂದರ್ಭಗಳಲ್ಲಿ ಸಲಹೆಗಳನ್ನು ನೀಡುತ್ತಾ ಬಂದಿದ್ದಾರೆ. ದೇವೇಗೌಡರ ಅನುಭವವನ್ನು ಆಡಳಿತದಲ್ಲಿ ಸಾಕಷ್ಟು ಬಳಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಯ ದೃಷ್ಟಿಯಿಂದ ಎಚ್.ಡಿ ದೇವೇಗೌಡರಿಗೆ ಬಿಜೆಪಿ ವರಿಷ್ಠರು ರಾಜ್ಯಸಭೆಗೆ ಮತ್ತೊಮ್ಮೆ ಅವಕಾಶ ಮಾಡಿಕೊಡಬೇಕು. ಈ ಮೂಲಕ ಎನ್.ಡಿ.ಎ ಮೈತ್ರಿಗೆ ಬಲ ತುಂಬಬೇಕು ಎಂದು ಹೇಳಿದರು.
ದೇವೇಗೌಡರ ಸೇವೆ ದೇಶಕ್ಕೆ ಮತ್ತಷ್ಟು ಸಿಗಬೇಕಾದರೆ ಅವರಿಗೆ ರಾಜ್ಯಸಭೆಗೆ ಆಯ್ಕೆಯಾಗಬೇಕು. ಇದಕ್ಕೆ ರಾಜ್ಯ ಮತ್ತು ಕೇಂದ್ರದ ಬಿಜೆಪಿ ನಾಯಕರು ಒಮ್ಮತದಿಂದ ತೀರ್ಮಾನ ಮಾಡಬೇಕು. ಇಡೀ ಪ್ರಪಂಚದಲ್ಲೇ ಗ್ರಾಮ ಪಂಚಾಯತಿ ಸದಸ್ಯನಿಂದ ದೇಶದ ಪ್ರಧಾನಿ ಮಂತ್ರಿಯಾಗಿ ಜನರ ಸೇವೆ ಮಾಡಿದವರು ಎಚ್.ಡಿ ದೇವೇಗೌಡ ಮಾತ್ರ. ರಾಜ್ಯ ಸೇರಿದಂತೆ ದೇಶಾದ್ಯಂತ ನೀರಾವರಿ ಯೋಜನೆಗಳ ಜಾರಿ ಮಾಡುವ ಮೂಲಕ ರೈತಾಪಿ ವರ್ಗಕ್ಕೆ ಹೆಚ್ಚಿನ ಸೌಲಭ್ಯ ನೀಡಿದ್ದಾರೆ ಎಂದರು.
ಇಳಿವಯಸ್ಸಿನಲ್ಲೂ ಜನರ ನಾಡಮಿಡಿತ ಅರಿತು ಜನಪರ ಕೆಲಸಗಳನ್ನು ಮಾಡುತ್ತಿದ್ದಾರೆ. ರಾಜ್ಯಸಭೆಯಲ್ಲಿ ರಾಜ್ಯದ ಪರವಾಗಿ ಅನೇಕ ವಿಷಯಗಳನ್ನು ಚರ್ಚೆ ಮಾಡಿ ರಾಜ್ಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ ದೇವೇಗೌಡರ ಹೆಸರಿನಲ್ಲಿ ವಿಶ್ವಕಲ್ಯಾಣ ವೆಂಕಟೇಶ್ವರ ಸ್ವಾಮಿಯ ದೇಗುಲದ ಜೀರ್ಣೋದ್ದಾರಕ್ಕೆ ಬೇಕಾಗುವ ಕಲ್ಲುಗಳ ಸೇವೆ ಮಾಡಲಾಗುವುದು ಎಂದು ಅರ್ಚಕರಿಗೆ ಭರವಸೆ ನೀಡಿದರು.
ಈ ಸಂದರ್ಭಸಲ್ಲಿ ಮುಖಂಡರಾದ ಪದ್ಮಾವತಿ, ಅಂಜನ್, ಅರ್ಚಕರಾದ ಶ್ರೀಧರ್ ಶರ್ಮಾ ಗುರೂಜಿ ಮತ್ತಿತ್ತರರು ಇದ್ದರು.
ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಚರ ಸಾಂಸ್ಕೃತಿ ಕಲಾ ಸಂಘದ ವತಿಯಿಂದ ಸಂಘದ ಕಾರ್ಯದರ್ಶಿ ಮುನಿರತ್ನಮ್ಮ, ಜಾನಪದ ಕಲಾವಿದರಾದ ಜೂಗಾನಹಳ್ಳಿ ವೆಂಕಟೇಶ್ , ಲಕ್ಷ್ಮಿನಾರಾಯಣ್ Y T, ಶಾಂತಮ್ಮ, ಕೇಶವಮೂರ್ತಿ ಓಬಮ್ಮ, ಸರೋಜಮ್ಮ ಇತರೆ ಕಲಾವಿದರಿಂದ ಸುಗಮ ಸಂಗೀತ, ಜಾನಪದ ಹಾಡುಗಾರಿಕೆ, ಸೊಬಾನಪದ, ಶ್ರೀಶನಿದೇವರ ಗೀತೆಗಳು, ಮಂಗಳವಾದ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…