ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಬಿ. ಮುನೇಗೌಡ ಅವರು ವಿಶೇಷ ಪೂಜೆ ಸಲ್ಲಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ಎಸ್.ಎಸ್. ಘಾಟಿ ಸುಬ್ರಹ್ಮಣ್ಯ ದೇವಾಲಯ ಸಮೀಪದ ದೇವರ ಬೆಟ್ಟ ಶ್ರೀ ವಿಶ್ವ ಶನೇಶ್ವರ ಸ್ವಾಮಿ‌ ದೇವಸ್ಥಾನದಲ್ಲಿ ಇಂದು ನಡೆದ ಪೂಜಾ ಕಾರ್ಯಕ್ರಮದಲ್ಲಿ ದೇವೇಗೌಡರ ಆರೋಗ್ಯ, ಆಯುಷ್ಯ ಹಾಗೂ ರಾಜ್ಯದ ಜನರ ಸುಖಶಾಂತಿಗಾಗಿ ಪ್ರಾರ್ಥಿಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಬಿ. ಮುನೇಗೌಡ ಅವರು, ದೇಶದ ರಾಜಕೀಯ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನೀಡಿರುವ ಕೊಡುಗೆ ಅಪಾರವಾಗಿದ್ದು, ರೈತರು ಹಾಗೂ ಸಾಮಾನ್ಯ ಜನರ ಪರವಾಗಿ ಅವರು ಸದಾ ಧ್ವನಿಯಾಗಿದ್ದಾರೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಅನೇಕ ಸಮಯ ಸಂದರ್ಭಗಳಲ್ಲಿ ಸಲಹೆಗಳನ್ನು ನೀಡುತ್ತಾ ಬಂದಿದ್ದಾರೆ. ದೇವೇಗೌಡರ ಅನುಭವವನ್ನು ಆಡಳಿತದಲ್ಲಿ ಸಾಕಷ್ಟು ಬಳಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಯ ದೃಷ್ಟಿಯಿಂದ ಎಚ್.ಡಿ ದೇವೇಗೌಡರಿಗೆ ಬಿಜೆಪಿ ವರಿಷ್ಠರು ರಾಜ್ಯಸಭೆಗೆ ಮತ್ತೊಮ್ಮೆ ಅವಕಾಶ ಮಾಡಿಕೊಡಬೇಕು. ಈ ಮೂಲಕ ಎನ್.ಡಿ.ಎ ಮೈತ್ರಿಗೆ ಬಲ ತುಂಬಬೇಕು ಎಂದು ಹೇಳಿದರು.

ದೇವೇಗೌಡರ ಸೇವೆ ದೇಶಕ್ಕೆ ಮತ್ತಷ್ಟು ಸಿಗಬೇಕಾದರೆ ಅವರಿಗೆ ರಾಜ್ಯಸಭೆಗೆ ಆಯ್ಕೆಯಾಗಬೇಕು. ಇದಕ್ಕೆ ರಾಜ್ಯ ಮತ್ತು ಕೇಂದ್ರದ ಬಿಜೆಪಿ ನಾಯಕರು ಒಮ್ಮತದಿಂದ ತೀರ್ಮಾನ ಮಾಡಬೇಕು. ಇಡೀ ಪ್ರಪಂಚದಲ್ಲೇ ಗ್ರಾಮ ಪಂಚಾಯತಿ ಸದಸ್ಯನಿಂದ ದೇಶದ ಪ್ರಧಾನಿ ಮಂತ್ರಿಯಾಗಿ ಜನರ ಸೇವೆ ಮಾಡಿದವರು ಎಚ್.ಡಿ ದೇವೇಗೌಡ ಮಾತ್ರ. ರಾಜ್ಯ ಸೇರಿದಂತೆ ದೇಶಾದ್ಯಂತ ನೀರಾವರಿ ಯೋಜನೆಗಳ ಜಾರಿ ಮಾಡುವ ಮೂಲಕ ರೈತಾಪಿ ವರ್ಗಕ್ಕೆ ಹೆಚ್ಚಿನ ಸೌಲಭ್ಯ ನೀಡಿದ್ದಾರೆ ಎಂದರು.

ಇಳಿವಯಸ್ಸಿನಲ್ಲೂ ಜನರ ನಾಡಮಿಡಿತ ಅರಿತು ಜನಪರ ಕೆಲಸಗಳನ್ನು ಮಾಡುತ್ತಿದ್ದಾರೆ. ರಾಜ್ಯಸಭೆಯಲ್ಲಿ ರಾಜ್ಯದ ಪರವಾಗಿ ಅನೇಕ ವಿಷಯಗಳನ್ನು ಚರ್ಚೆ ಮಾಡಿ ರಾಜ್ಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಇದೇ ವೇಳೆ ದೇವೇಗೌಡರ ಹೆಸರಿನಲ್ಲಿ ವಿಶ್ವಕಲ್ಯಾಣ ವೆಂಕಟೇಶ್ವರ ಸ್ವಾಮಿಯ ದೇಗುಲದ ಜೀರ್ಣೋದ್ದಾರಕ್ಕೆ ಬೇಕಾಗುವ ಕಲ್ಲುಗಳ ಸೇವೆ ಮಾಡಲಾಗುವುದು ಎಂದು ಅರ್ಚಕರಿಗೆ ಭರವಸೆ ನೀಡಿದರು.

ಈ ಸಂದರ್ಭಸಲ್ಲಿ ಮುಖಂಡರಾದ ಪದ್ಮಾವತಿ, ಅಂಜನ್, ಅರ್ಚಕರಾದ ಶ್ರೀಧರ್ ಶರ್ಮಾ ಗುರೂಜಿ ಮತ್ತಿತ್ತರರು ಇದ್ದರು.

ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಚರ ಸಾಂಸ್ಕೃತಿ ಕಲಾ ಸಂಘದ ವತಿಯಿಂದ ಸಂಘದ ಕಾರ್ಯದರ್ಶಿ ಮುನಿರತ್ನಮ್ಮ, ಜಾನಪದ ಕಲಾವಿದರಾದ ಜೂಗಾನಹಳ್ಳಿ ವೆಂಕಟೇಶ್ , ಲಕ್ಷ್ಮಿನಾರಾಯಣ್ Y T, ಶಾಂತಮ್ಮ, ಕೇಶವಮೂರ್ತಿ ಓಬಮ್ಮ, ಸರೋಜಮ್ಮ ಇತರೆ ಕಲಾವಿದರಿಂದ ಸುಗಮ ಸಂಗೀತ, ಜಾನಪದ ಹಾಡುಗಾರಿಕೆ, ಸೊಬಾನಪದ, ಶ್ರೀಶನಿದೇವರ ಗೀತೆಗಳು, ಮಂಗಳವಾದ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

47 minutes ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

2 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

10 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

20 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

21 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 day ago