ದೇಶದ ಅಭಿವೃದ್ಧಿಯಲ್ಲಿ ಯುವಕರ ಕೊಡುಗೆ ಅತ್ಯಂತ ಅಪಾರ- ಜಿ.ಟಿ ಗಿರೀಶ್

ದೊಡ್ಡಬಳ್ಳಾಪುರ: ಒಂದು ದೇಶದ ಅಭಿವೃದ್ಧಿಯಲ್ಲಿ ಯುವಕರ ಕೊಡುಗೆ ಅತ್ಯಂತ ಅಪಾರ ಹಾಗೂ ಮಹತ್ವದ್ದಾಗಿದೆ ಎಂದು ಲಯನ್ಸ್ ಕ್ಲಬ್ 317 ಜಿಲ್ಲಾ ಘಟಕದ ಸಂಯೋಜಕ ಜಿ.ಟಿ ಗಿರೀಶ್ ಹೇಳಿದರು.

ದೇವರಾಜ್ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು
ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಜನ ಸಂಖ್ಯೆಯಲ್ಲಿ ಬಹುಪಾಲು ಯುವಕರಾಗಿದ್ದರೆ. ಇಂದು ಭಾರತದ ಅಭಿವೃದ್ಧಿಗೆ ಇಲ್ಲಿನ ಯುವಕರು ಪ್ರಮುಖ ಕಾರಣ. ಇಂದಿನ ಯುವಕರೇ ನಾಳಿನ ನಾಯಕರು. ಹಾಗಾಗಿ ಯುವಕರು ತಮ್ಮ ಸುತ್ತಮುತ್ತಲಿನ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಜ್ಞಾನವನ್ನು ಹೊಂದಿರಬೇಕು ಎಂದರು.

ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಆರ್. ಎಲ್ ಜಾಲಪ್ಪ ಕ್ಯಾಂಪಸ್ ನ ಅಧ್ಯಕ್ಷರಾದ ಜೆ. ಆರ್ ರಾಕೇಶ್ ಮಾತನಾಡಿ, ಡಿಜಿಟಲ್ ಯುಗವನ್ನು ದಾಟಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಯುಗದತ್ತ ಸಾಗಿರುವ ಯುವಕರಿಗೆ ಯಶಸ್ಸಿನತ್ತ ಸಾಗಲು ಉತ್ತಮ ಅವಕಾಶಗಳು ಇವೆ. ಯುವಕರ ಉತ್ತಮ ಕೆಲಸ ಕಾರ್ಯಗಳಿಂದ ದೇಶವು ಪ್ರಗತಿಯತ್ತ ಸಾಗುತ್ತದೆ. ಯುವಕರು ಮಾಡುವ ಅತ್ಯುತ್ತಮ ಕೆಲಸ, ಕಾರ್ಯಗಳು, ಅವರ ಆವಿಷ್ಕಾರಗಳು ದೇಶ ವಿದೇಶವನ್ನು ತಲುಪಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್ ನಾಗರಾಜ್, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಚಿಕ್ಕಣ್ಣ, ಉಪಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ನಾಗರಾಜು, ಖಜಾಂಚಿ ರವಿಕುಮಾರ್, ಕಾಲೇಜಿನ ಮ್ಯಾನೇಜರ್ ಶ್ರೀನಿವಾಸ್, ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಪ್ರಾಧ್ಯಾಪಕರಾದ ಶ್ವೇತಾ, ಮಧುಶ್ರೀ, ಬಾಬುಸಾಬಿ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

4 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

4 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

4 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

5 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

8 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

11 hours ago