ದೇಶದ ಅಭಿವೃದ್ಧಿಯಲ್ಲಿ ಯುವಕರ ಕೊಡುಗೆ ಅತ್ಯಂತ ಅಪಾರ- ಜಿ.ಟಿ ಗಿರೀಶ್

ದೊಡ್ಡಬಳ್ಳಾಪುರ: ಒಂದು ದೇಶದ ಅಭಿವೃದ್ಧಿಯಲ್ಲಿ ಯುವಕರ ಕೊಡುಗೆ ಅತ್ಯಂತ ಅಪಾರ ಹಾಗೂ ಮಹತ್ವದ್ದಾಗಿದೆ ಎಂದು ಲಯನ್ಸ್ ಕ್ಲಬ್ 317 ಜಿಲ್ಲಾ ಘಟಕದ ಸಂಯೋಜಕ ಜಿ.ಟಿ ಗಿರೀಶ್ ಹೇಳಿದರು.

ದೇವರಾಜ್ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು
ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಜನ ಸಂಖ್ಯೆಯಲ್ಲಿ ಬಹುಪಾಲು ಯುವಕರಾಗಿದ್ದರೆ. ಇಂದು ಭಾರತದ ಅಭಿವೃದ್ಧಿಗೆ ಇಲ್ಲಿನ ಯುವಕರು ಪ್ರಮುಖ ಕಾರಣ. ಇಂದಿನ ಯುವಕರೇ ನಾಳಿನ ನಾಯಕರು. ಹಾಗಾಗಿ ಯುವಕರು ತಮ್ಮ ಸುತ್ತಮುತ್ತಲಿನ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಜ್ಞಾನವನ್ನು ಹೊಂದಿರಬೇಕು ಎಂದರು.

ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಆರ್. ಎಲ್ ಜಾಲಪ್ಪ ಕ್ಯಾಂಪಸ್ ನ ಅಧ್ಯಕ್ಷರಾದ ಜೆ. ಆರ್ ರಾಕೇಶ್ ಮಾತನಾಡಿ, ಡಿಜಿಟಲ್ ಯುಗವನ್ನು ದಾಟಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಯುಗದತ್ತ ಸಾಗಿರುವ ಯುವಕರಿಗೆ ಯಶಸ್ಸಿನತ್ತ ಸಾಗಲು ಉತ್ತಮ ಅವಕಾಶಗಳು ಇವೆ. ಯುವಕರ ಉತ್ತಮ ಕೆಲಸ ಕಾರ್ಯಗಳಿಂದ ದೇಶವು ಪ್ರಗತಿಯತ್ತ ಸಾಗುತ್ತದೆ. ಯುವಕರು ಮಾಡುವ ಅತ್ಯುತ್ತಮ ಕೆಲಸ, ಕಾರ್ಯಗಳು, ಅವರ ಆವಿಷ್ಕಾರಗಳು ದೇಶ ವಿದೇಶವನ್ನು ತಲುಪಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್ ನಾಗರಾಜ್, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಚಿಕ್ಕಣ್ಣ, ಉಪಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ನಾಗರಾಜು, ಖಜಾಂಚಿ ರವಿಕುಮಾರ್, ಕಾಲೇಜಿನ ಮ್ಯಾನೇಜರ್ ಶ್ರೀನಿವಾಸ್, ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಪ್ರಾಧ್ಯಾಪಕರಾದ ಶ್ವೇತಾ, ಮಧುಶ್ರೀ, ಬಾಬುಸಾಬಿ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 hour ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

4 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

5 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

8 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

8 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

8 hours ago