ದೊಡ್ಡಬಳ್ಳಾಪುರ: ಒಂದು ದೇಶದ ಅಭಿವೃದ್ಧಿಯಲ್ಲಿ ಯುವಕರ ಕೊಡುಗೆ ಅತ್ಯಂತ ಅಪಾರ ಹಾಗೂ ಮಹತ್ವದ್ದಾಗಿದೆ ಎಂದು ಲಯನ್ಸ್ ಕ್ಲಬ್ 317 ಜಿಲ್ಲಾ ಘಟಕದ ಸಂಯೋಜಕ ಜಿ.ಟಿ ಗಿರೀಶ್ ಹೇಳಿದರು.
ದೇವರಾಜ್ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು
ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಜನ ಸಂಖ್ಯೆಯಲ್ಲಿ ಬಹುಪಾಲು ಯುವಕರಾಗಿದ್ದರೆ. ಇಂದು ಭಾರತದ ಅಭಿವೃದ್ಧಿಗೆ ಇಲ್ಲಿನ ಯುವಕರು ಪ್ರಮುಖ ಕಾರಣ. ಇಂದಿನ ಯುವಕರೇ ನಾಳಿನ ನಾಯಕರು. ಹಾಗಾಗಿ ಯುವಕರು ತಮ್ಮ ಸುತ್ತಮುತ್ತಲಿನ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಜ್ಞಾನವನ್ನು ಹೊಂದಿರಬೇಕು ಎಂದರು.
ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಆರ್. ಎಲ್ ಜಾಲಪ್ಪ ಕ್ಯಾಂಪಸ್ ನ ಅಧ್ಯಕ್ಷರಾದ ಜೆ. ಆರ್ ರಾಕೇಶ್ ಮಾತನಾಡಿ, ಡಿಜಿಟಲ್ ಯುಗವನ್ನು ದಾಟಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಯುಗದತ್ತ ಸಾಗಿರುವ ಯುವಕರಿಗೆ ಯಶಸ್ಸಿನತ್ತ ಸಾಗಲು ಉತ್ತಮ ಅವಕಾಶಗಳು ಇವೆ. ಯುವಕರ ಉತ್ತಮ ಕೆಲಸ ಕಾರ್ಯಗಳಿಂದ ದೇಶವು ಪ್ರಗತಿಯತ್ತ ಸಾಗುತ್ತದೆ. ಯುವಕರು ಮಾಡುವ ಅತ್ಯುತ್ತಮ ಕೆಲಸ, ಕಾರ್ಯಗಳು, ಅವರ ಆವಿಷ್ಕಾರಗಳು ದೇಶ ವಿದೇಶವನ್ನು ತಲುಪಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್ ನಾಗರಾಜ್, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಚಿಕ್ಕಣ್ಣ, ಉಪಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ನಾಗರಾಜು, ಖಜಾಂಚಿ ರವಿಕುಮಾರ್, ಕಾಲೇಜಿನ ಮ್ಯಾನೇಜರ್ ಶ್ರೀನಿವಾಸ್, ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಪ್ರಾಧ್ಯಾಪಕರಾದ ಶ್ವೇತಾ, ಮಧುಶ್ರೀ, ಬಾಬುಸಾಬಿ ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…