ದೊಡ್ಡಬಳ್ಳಾಪುರ: ಒಂದು ದೇಶದ ಅಭಿವೃದ್ಧಿಯಲ್ಲಿ ಯುವಕರ ಕೊಡುಗೆ ಅತ್ಯಂತ ಅಪಾರ ಹಾಗೂ ಮಹತ್ವದ್ದಾಗಿದೆ ಎಂದು ಲಯನ್ಸ್ ಕ್ಲಬ್ 317 ಜಿಲ್ಲಾ ಘಟಕದ ಸಂಯೋಜಕ ಜಿ.ಟಿ ಗಿರೀಶ್ ಹೇಳಿದರು.
ದೇವರಾಜ್ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು
ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಜನ ಸಂಖ್ಯೆಯಲ್ಲಿ ಬಹುಪಾಲು ಯುವಕರಾಗಿದ್ದರೆ. ಇಂದು ಭಾರತದ ಅಭಿವೃದ್ಧಿಗೆ ಇಲ್ಲಿನ ಯುವಕರು ಪ್ರಮುಖ ಕಾರಣ. ಇಂದಿನ ಯುವಕರೇ ನಾಳಿನ ನಾಯಕರು. ಹಾಗಾಗಿ ಯುವಕರು ತಮ್ಮ ಸುತ್ತಮುತ್ತಲಿನ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಜ್ಞಾನವನ್ನು ಹೊಂದಿರಬೇಕು ಎಂದರು.
ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಆರ್. ಎಲ್ ಜಾಲಪ್ಪ ಕ್ಯಾಂಪಸ್ ನ ಅಧ್ಯಕ್ಷರಾದ ಜೆ. ಆರ್ ರಾಕೇಶ್ ಮಾತನಾಡಿ, ಡಿಜಿಟಲ್ ಯುಗವನ್ನು ದಾಟಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಯುಗದತ್ತ ಸಾಗಿರುವ ಯುವಕರಿಗೆ ಯಶಸ್ಸಿನತ್ತ ಸಾಗಲು ಉತ್ತಮ ಅವಕಾಶಗಳು ಇವೆ. ಯುವಕರ ಉತ್ತಮ ಕೆಲಸ ಕಾರ್ಯಗಳಿಂದ ದೇಶವು ಪ್ರಗತಿಯತ್ತ ಸಾಗುತ್ತದೆ. ಯುವಕರು ಮಾಡುವ ಅತ್ಯುತ್ತಮ ಕೆಲಸ, ಕಾರ್ಯಗಳು, ಅವರ ಆವಿಷ್ಕಾರಗಳು ದೇಶ ವಿದೇಶವನ್ನು ತಲುಪಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್ ನಾಗರಾಜ್, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಚಿಕ್ಕಣ್ಣ, ಉಪಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ನಾಗರಾಜು, ಖಜಾಂಚಿ ರವಿಕುಮಾರ್, ಕಾಲೇಜಿನ ಮ್ಯಾನೇಜರ್ ಶ್ರೀನಿವಾಸ್, ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಪ್ರಾಧ್ಯಾಪಕರಾದ ಶ್ವೇತಾ, ಮಧುಶ್ರೀ, ಬಾಬುಸಾಬಿ ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…