ದೇಶದ ಅಭಿವೃದ್ಧಿಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಕೊಡುಗೆ ಅಪಾರ- ಸರ್ಕಾರವು ಸ್ವಯಂ ಸೇವಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು-ಅಮಲಿ ಗೋಪಾಲ ನಾಯ್ಕ್

ದೇಶದ ಅಭಿವೃದ್ಧಿಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಕೊಡುಗೆ ಅಪಾರವಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಸಾವಿರಾರು ಸ್ವಯಂ ಸೇವಾ ಸಂಸ್ಥೆಗಳು ಲಕ್ಷಾಂತರ ಸಿಬ್ಬಂದಿ, ಕಾರ್ಯಕರ್ತರು ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಆದರೆ ಸ್ವಯ ಸೇವಕರಿಗೆ ಸಾಮಾಜಿಕ ಭದ್ರತೆ ಇಲ್ಲವಾಗಿದೆ, ಸರ್ಕಾರ ಅವರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕೆಂದು ಒತ್ತಡ ಹೇರಲು ಸ್ವಯಂ ಸೇವಾ ಸಂಘಗಳ ಕಾರ್ಯಕರ್ತರ ಸಮಾವೇಶ ನಡೆಸಲು ನಿರ್ದರಿಸಿದ್ದೇವೆ ಎಂದು ಫೆವಾರ್ಡ್-ಕ ಸಂಘಟನೆಯ ಖಜಾಂಚಿ ಅಮಲಿ ಗೋಪಾಲ ನಾಯ್ಕ್ ತಿಳಿಸಿದರು.

ನಗರದ ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆಯಲ್ಲಿ ಫೆವಾರ್ಡ್-ಕ ಸಂಘಟನೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸ್ವಯಂ ಸೇವಾ ಸಂಸ್ಥೆಗಳಲ್ಲಿ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಯಕರ್ತರು ಕನ್ನಡದ ನೆಲ, ಜಲ, ಭಾಷೆ, ಸಂಸ್ಕೃತಿಯ ಬಗ್ಗೆ ಸಂಚಕಾರ ಬಂದಾಗ ಬೀದಿಗಿಳಿದು ಹೋರಾಟ ಮಾಡುತ್ತಾರೆ.

ಭಾರತದ ಯಾವುದೇ ಮೂಲೆಯಲ್ಲಿ ನೈಸರ್ಗಿಕ ವಿಪತ್ತುಗಳಾದಾಗ ಪರಿಹಾರ ಕಾರ್ಯಕ್ರಮಗಳ ಮುಖಾಂತರ ಕೋಟ್ಯಾನುಕೋಟಿ ರೂಪಾಯಿ ಹಣ ಮತ್ತು ದವಸ-ದಾನ್ಯ ಸಂಗ್ರಹಿಸಿ ಪರಿಹಾರ ನಿಧಿಗಳಿಗೆ ದೇಣಿಗೆ ನೀಡುವುದರ ಜೊತೆಗೆ ಖುದ್ದು ಮುಂದೆ ನಿಂತು ಕಾರ್ಯನಿರ್ವಹಿಸುತ್ತಾರೆ. ಇಂತಹ ನಿಸ್ವಾರ್ಥ ಸೇವೆ ಸಲ್ಲಿಸುವ ಸ್ವಯಂ ಸೇವಾ ಕಾರ್ಯಕರ್ತರಿಗೆ ಸಾಮಾಜಿಕ ಭದ್ರತೆ ಇಲ್ಲ ಎಂದು ತಮ್ಮ ಅಸಮಧಾನ ಹೊರ ಹಾಕಿದರು.

ಸಂಘಟನೆಯ ಮತ್ತೊಬ್ಬ ಮುಖಂಡ ಫಾದರ್ ಎಡ್ವರ್ಡ್ ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಸೌಲತ್ತುಗಳನ್ನು ತಲುಪಿಸುವುದರಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಸಿಬ್ಬಂದಿ ಕಾರ್ಯಕರ್ತರು ಹಗಲಿರಳು ಕಾರ್ಯ ನಿರ್ವಹಿಸುತ್ತಿರುವುದನ್ನು ಕೇಂದ್ರ ಸರ್ಕಾರ ಗಮನಿಸಿ ಭಾರತದ ಸಂವಿಧಾನದ ಐದನೇ ಅಂಗವಾಗಿ ಸ್ವಯಂ ಸೇವಾ ಕ್ಷೇತ್ರವನ್ನುಗುತಿಸಿದೆ. ಈ ದಿಸೆಯಲ್ಲಿ ಕರ್ನಾಟಕದಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಸುಸ್ಥಿರ ಬಲವರ್ಧನೆಗೆ ಕರ್ನಾಟಕ ನಗರ ಮತ್ತು ಗ್ರಾಮಾಭ್ಯುಧ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ-ಫೆವಾರ್ಡ್- 1984 ರಿಂದ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಧ್ವನಿ ಇಲ್ಲದವರ ಮತ್ತು ಅವಕಾಶ ವಂಚಿತರಾಗಿ ಅಂಚಿನಲ್ಲಿರುವ ಸಮುದಾಯಗಳ ಅಭಿವೃದ್ಧಿಗಾಗಿ ಸರ್ಕಾರದ ಪರವಾಗಿ ಸೇವಾ ಮನೋಭಾವದಿಂದ ಕನಿಷ್ಠ ವೇತನವಿಲ್ಲದೆ ಕರ್ತವ್ಯದಲ್ಲಿ ನಿರತರಾಗಿರುವುದು ಸಮಾಜದಲ್ಲಿ ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ. ಎಂದು ಹೇಳಿದರು.

ರಾಜ್ಯದಲ್ಲಿ ಸರಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರುಗಳು ವಿವಿಧ ಕಾರ್ಯಕ್ರಮಗಳ ಯೋಜನಾ ಕ್ಷೇತ್ರದಲ್ಲಿ ಹಗಲಿರಳು ದುಡಿಯುತ್ತಿರುವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಯಾವುದೇ ಸಾಮಾಜಿಕ ಭದ್ರತೆ ಇಲ್ಲದಿರುವುದನ್ನು ಸರ್ಕಾರದ ಗಮನಕ್ಕೆ ತರಲು ಸಮಾವೇಶ ನಡೆಸುವುದು ಒಂದು ಸಣ್ಣ ಪ್ರಯತ್ನವಾಗಿದೆ ಎಂದರು.

ಸಂಘಟನೆಯ ಕಾರ್ಯದರ್ಶಿ ನಾಗರಾಜು ಮಾತನಾಡಿ, ಸಾಮಾಜಿಕ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ, ಕಾರ್ಯಕರ್ತರಿಗೆ ಯಾವುದೇ ಸಾಮಾಜಿಕ ಭದ್ರತೆ ಇಲ್ಲದ ಕಾರಣ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ರೂಪಿಸಿರುವ ಸರ್ಕಾರಿ ಯೋಜನೆಗಳಲ್ಲಿ ಕಡಿಮೆ ವೇತನ/ಸಂಭಾವನೆ ಹಾಗೂ ಕನಿಷ್ಕ ವೇತನ ಸಿಗದ ಕಾರಣ ಆರ್ಥಿಕವಾಗಿ ಹಿಂದುಳಿದಿರುವ ಕಾರ್ಯಕರ್ತರ ಕುಟುಂಬಗಳ ಪೋಷಣೆ ತೃಪ್ತಿಕರವಾಗಿಲ್ಲ ಮತ್ತು ಹಲವು ಸಂದರ್ಭಗಳಲ್ಲಿ ಕರ್ತವ್ಯದಲ್ಲಿರುವಾಗ ಸಿಬ್ಬಂದಿ ಕಾರ್ಯಕರ್ತರು ಸಾವನ್ನಪ್ಪಿ ಅವರ ಕುಟುಂಬಗಳು ಬೀದಿ ಪಾಲಾಗಿರುವ ಉದಾರಣೆಗಳು ಸಾಕಷ್ಟಿವೆ. ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವರಿಗೆ ಯಾವುದೇ ಸಾಮಾಜಿಕ ಭದ್ರತೆಯನ್ನು ಸರ್ಕಾರ ಕಲ್ಪಿಸಿಲ್ಲ ಎಂದು ತಿಳಿಸಿದರು.

ಕೋವಿಡ್, ಪ್ರವಾಹಗಳು ಏರ್ಪಟ್ಟಾಗ ಮುಂಚೂಣಿ ಕಾರ್ಯಕರ್ತರಾಗಿ ದುಡಿದ ಅದೆಷ್ಟೋ ಸಾಮಾಜಿಕ ಕ್ಷೇತ್ರದ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ, ಅವರ ಕುಟುಂಬ ಕಷ್ಟದಲ್ಲಿ ಜೀವನ ನಡೆಸುತ್ತಿದೆ. ಆದುದರಿಂದ, ಕರ್ನಾಟಕದಲ್ಲಿ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ/ಕಾರ್ಯಕರ್ತರಿಗೆ ಸಾಮಾಜಿಕ ಭದ್ರತೆ ಕಲ್ಪಿಸಿಕೊಡಲು ಸರ್ಕಾರದ ಮೇಲೆ ಒತ್ತಡ ಹೇರಲು ಕರ್ನಾಟಕದಲ್ಲಿ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ/ಕಾರ್ಯಕರ್ತರಗಳನ್ನು ಒಂದುಗೂಡಿಸಿ, ರಾಜ್ಯ ಮಟ್ಟದಲ್ಲಿ ಸಮಾವೇಶ ಆಯೋಜಿಸಿ ಮಾನ್ಯ ಮುಖ್ಯಮಂತ್ರಿಗಳು ವಿವಿದ ಇಲಾಖೆಯ ಸಚಿವರನ್ನು ಸಮಾವೇಶಕ್ಕೆ ಆಹ್ವಾನಿಸಿ ಸಾಮಾಜಿಕ ಕಾರ್ಯಕರ್ತರ ಬೇಡಿಕೆಗಳನ್ನು ಹೀಡೇರಿಸಲು ಹಕ್ಕೊತ್ತಾಯ ಮಂಡಿಸಲಾಗುವುದು ಎಂದರು.

ಕರ್ನಾಟಕದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಕಾರ್ಯಕರ್ತರುಗಳಿಗೆ ಸಾಮಾಜಿಕ ನ್ಯಾಯಾ ದೊರಕಿಸಿ ಕೊಡಲು ಕರ್ನಾಟಕ ನಗರ ಮತ್ತು ಗ್ರಾಮಾಭ್ಯುದ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ – ಫೆವಾರ್ಡ್-ಕ ನಿರ್ಧರಿಸಿದೆ. ಹಾಗಾಗಿ ಅ.20 ರೊಳಗಾಗಿ ಸ್ವಯಂ ಸೇವಾ ಕ್ಷೇತ್ರದ ಕಾರ್ಯಕರ್ತರು, ಸಿಬ್ಬಂದಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ವೇಳೆ ಫೆವಾರ್ಡ್-ಕ ಸಂಘಟನೆಯ ಸಂಸ್ಥಾಪಕ ಗೋಪಾಲ ನಾಯ್ಕ್, ರಾಮು ಜೋಗಿಹಳ್ಳಿ, ಲಿಲ್ಲಿ ಸಾಂಜೆ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

6 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

6 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

21 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago