ದೇಶದ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ: ಬರೋಬ್ಬರಿ 21.8 ಕಿ. ಮೀ. ಉದ್ದದ ಅಟಲ್ ಸೇತುವೆ‌

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ನವಾ ಶೇವಾದಿಂದ ಮುಂಬೈನ ಸರ್ವಿ ಪ್ರದೇಶವನ್ನು ಸಂಪರ್ಕಿಸುವ ಅತಿ ಉದ್ದವಾದ ಸಮುದ್ರ ಸೇತುವೆಯನ್ನು ಪ್ರಧಾನಿ ಮೋದಿ ಅವರು ಇಂದು ಲೋಕಾರ್ಪಣೆ ಮಾಡಿದ್ದಾರೆ.

ಬರೋಬ್ಬರಿ 21.8 ಕಿ. ಮೀ. ಉದ್ದದ ಸೇತುವೆ‌ ಇದಾಗಿದ್ದು, ಸಮುದ್ರದ ಎರಡು ತೀರಗಳ ನಡುವೆ ಸಂಪರ್ಕ ಕಲ್ಪಿಸಲಾಗಿದೆ. ಮುಂಬೈ ಮಹಾ ನಗರದ ಸಂಚಾರದ ಒತ್ತಡ ಕಡಿಮೆ ಮಾಡುಲು ಈ ಸೇತುವೆಯನ್ನ ನಿರ್ಮಾಣ ಮಾಡಲಾಗಿದೆ.

ಸೇತುವೆಯನ್ನು ಅಟಲ್ ಸೇತು ಎಂದೂ ಕರೆಯಲು ತೀರ್ಮಾನಿಸಲಾಗಿದೆ. ರಾಯಗಢ ಜಿಲ್ಲೆಯ ನವಾ ಶೇವಾದಿಂದ ಮುಂಬೈನ ಸರ್ವಿ ಪ್ರದೇಶಕ್ಕೆ ತೆರಳಲು ಈ ಹಿಂದೆ ಸುಮಾರು 2 ಗಂಟೆ ಕಾಲ ಬೇಕಾಗುತ್ತಿತ್ತು. ಆದರೆ, ಇದೀಗ ಹೊಸ ಸೇತುವೆಯಿಂದಾಗಿ ಪ್ರಯಾಣದ ಅವಧಿ 20 ನಿಮಿಷಕ್ಕೆ ಕಡಿತಗೊಂಡಿದೆ.

ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಎಂದೇ ಕರೆಯಲಾಗುವ ಈ ಯೋಜನೆಗೆ ಒಟ್ಟು 17,840 ಕೋಟಿ ರೂ. ವೆಚ್ಚವಾಗಿದೆ. ಈ ಸೇತುವೆಯಲ್ಲಿ ಒಟ್ಟು 6 ಲೇನ್‌ನ ರಸ್ತೆ ಮಾರ್ಗವಿದೆ. ಈ ಸೇತುವೆಯು ಸಮುದ್ರದ ಮೇಲೆ 16.5 ಕಿ. ಮೀ ಉದ್ದವಿದೆ. ಈ ಸೇತುವೆಯಿಂದಾಗಿ ಮುಂಬೈ ಹಾಗೂ ನವಿ ಮುಂಬೈ ಮತ್ತಷ್ಟು ಸನಿಹವಾಗಿದೆ.

ಅಟಲ್ ಸೇತುವನ್ನು ಉದ್ಘಾಟಿಸಲು ಸಂತೋಷವಾಗಿದೆ, ಇದು ನಮ್ಮ ನಾಗರಿಕರಿಗೆ ‘ಜೀವನ ಸುಲಭ’ವನ್ನು ಹೆಚ್ಚಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ.  ಈ ಸೇತುವೆಯು ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ ಮತ್ತು ಸಂಪರ್ಕವನ್ನು ಹೆಚ್ಚಿಸುತ್ತದೆ, ದೈನಂದಿನ ಪ್ರಯಾಣವನ್ನು ಸುಗಮಗೊಳಿಸುತ್ತದೆ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

43 minutes ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

14 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

17 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

18 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

21 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago