ದೇಶದ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ: ಬರೋಬ್ಬರಿ 21.8 ಕಿ. ಮೀ. ಉದ್ದದ ಅಟಲ್ ಸೇತುವೆ‌

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ನವಾ ಶೇವಾದಿಂದ ಮುಂಬೈನ ಸರ್ವಿ ಪ್ರದೇಶವನ್ನು ಸಂಪರ್ಕಿಸುವ ಅತಿ ಉದ್ದವಾದ ಸಮುದ್ರ ಸೇತುವೆಯನ್ನು ಪ್ರಧಾನಿ ಮೋದಿ ಅವರು ಇಂದು ಲೋಕಾರ್ಪಣೆ ಮಾಡಿದ್ದಾರೆ.

ಬರೋಬ್ಬರಿ 21.8 ಕಿ. ಮೀ. ಉದ್ದದ ಸೇತುವೆ‌ ಇದಾಗಿದ್ದು, ಸಮುದ್ರದ ಎರಡು ತೀರಗಳ ನಡುವೆ ಸಂಪರ್ಕ ಕಲ್ಪಿಸಲಾಗಿದೆ. ಮುಂಬೈ ಮಹಾ ನಗರದ ಸಂಚಾರದ ಒತ್ತಡ ಕಡಿಮೆ ಮಾಡುಲು ಈ ಸೇತುವೆಯನ್ನ ನಿರ್ಮಾಣ ಮಾಡಲಾಗಿದೆ.

ಸೇತುವೆಯನ್ನು ಅಟಲ್ ಸೇತು ಎಂದೂ ಕರೆಯಲು ತೀರ್ಮಾನಿಸಲಾಗಿದೆ. ರಾಯಗಢ ಜಿಲ್ಲೆಯ ನವಾ ಶೇವಾದಿಂದ ಮುಂಬೈನ ಸರ್ವಿ ಪ್ರದೇಶಕ್ಕೆ ತೆರಳಲು ಈ ಹಿಂದೆ ಸುಮಾರು 2 ಗಂಟೆ ಕಾಲ ಬೇಕಾಗುತ್ತಿತ್ತು. ಆದರೆ, ಇದೀಗ ಹೊಸ ಸೇತುವೆಯಿಂದಾಗಿ ಪ್ರಯಾಣದ ಅವಧಿ 20 ನಿಮಿಷಕ್ಕೆ ಕಡಿತಗೊಂಡಿದೆ.

ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಎಂದೇ ಕರೆಯಲಾಗುವ ಈ ಯೋಜನೆಗೆ ಒಟ್ಟು 17,840 ಕೋಟಿ ರೂ. ವೆಚ್ಚವಾಗಿದೆ. ಈ ಸೇತುವೆಯಲ್ಲಿ ಒಟ್ಟು 6 ಲೇನ್‌ನ ರಸ್ತೆ ಮಾರ್ಗವಿದೆ. ಈ ಸೇತುವೆಯು ಸಮುದ್ರದ ಮೇಲೆ 16.5 ಕಿ. ಮೀ ಉದ್ದವಿದೆ. ಈ ಸೇತುವೆಯಿಂದಾಗಿ ಮುಂಬೈ ಹಾಗೂ ನವಿ ಮುಂಬೈ ಮತ್ತಷ್ಟು ಸನಿಹವಾಗಿದೆ.

ಅಟಲ್ ಸೇತುವನ್ನು ಉದ್ಘಾಟಿಸಲು ಸಂತೋಷವಾಗಿದೆ, ಇದು ನಮ್ಮ ನಾಗರಿಕರಿಗೆ ‘ಜೀವನ ಸುಲಭ’ವನ್ನು ಹೆಚ್ಚಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ.  ಈ ಸೇತುವೆಯು ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ ಮತ್ತು ಸಂಪರ್ಕವನ್ನು ಹೆಚ್ಚಿಸುತ್ತದೆ, ದೈನಂದಿನ ಪ್ರಯಾಣವನ್ನು ಸುಗಮಗೊಳಿಸುತ್ತದೆ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Ramesh Babu

Journalist

Recent Posts

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

1 hour ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

13 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

16 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

18 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

20 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

21 hours ago