Categories: ಕೊಡಗು

ದೇಶದ ಗಮನ ಸೆಳೆದಿದ್ದ ಅಯ್ಯಂಗೇರಿಯ ಸಫಿಯಾ ಕೊಲೆ ಪ್ರಕರಣ:ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ

ಕೊಲೆಯಾದ ಬರೋಬ್ಬರಿ 18 ವರ್ಷಗಳ ಬಳಿಕ ಕೊಡಗಿನ ಅಯ್ಯಂಗೇರಿಯ ಬಾಲಕಿಯ ಅಂತ್ಯ ಸಂಸ್ಕಾರ (ದಫನ ಕಾರ್ಯ) ನ.11, 2024 ನಡೆದಿದೆ..

ಡಿಸೆಂಬರ್ 2006ರಲ್ಲಿ ಸಫಿಯಾ ಎಂಬ ಅಯ್ಯಂಗೇರಿಯ 13 ವರ್ಷದ ಬಾಲಕಿಯ ಕೊಲೆ ನಡೆದಿತ್ತು. ಜೂನ್ 5, 2008 ರಂದು ಆಕೆಯ ತಲೆಬುರುಡೆ ಮತ್ತು ಕೆಲವು ಮೂಳೆಯ ತುಣುಕುಗಳು ಪತ್ತೆಯಾಗಿತ್ತು. ಅದನ್ನು ಕಾಸರಗೋಡು ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಇರಿಸಲಾಗಿತ್ತು.

ಸೋಮವಾರ (ನ.11) ನ್ಯಾಯಾಲಯದ ನಿರ್ದೇಶನದ ಮೇರೆಗೆ ಸಫಿಯಾಳ ಅಸ್ಥಿ ಪಂಜರವನ್ನು ಆಕೆಯ ಪೋಷಕರಿಗೆ ಹಸ್ತಾಂತರಿಸಲಾಯಿತು. ಬಳಿಕ ಪೋಷಕರು, ಅಯ್ಯಂಗೇರಿ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ದಫನ ಕಾರ್ಯ ನಡೆಸಿದ್ದಾರೆ.

*ಪ್ರಕರಣದ ಹಿನ್ನೆಲೆ :* ಕೊಡಗಿನ ಅಯ್ಯಂಗೇರಿಯ 13 ವರ್ಷದ ಬಾಲಕಿ ಸಫಿಯಾಳನ್ನು ಕಾರಸಗೋಡಿನ ಮುಲಿಯಾರ್ ಮಸ್ತಿಕುಂದ್‌ನ ಸಿವಿಲ್ ಕಾಂಟ್ರಾಕ್ಟರ್ ಕೆ.ಸಿ ಹಂಝ ಮತ್ತು ಮೈಮೂನ ದಂಪತಿ 2006ರಲ್ಲಿ ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಬಳಿಕ ಉದ್ಯೋಗ ನಿಮಿತ್ತ ಹಂಝ ದಂಪತಿ ಗೋವಾಕ್ಕೆ ಶಿಫ್ಟ್ ಆಗಿದ್ದರು. ಈ ವೇಳೆ ಸಫಿಯಾಳನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದರು.

ಕೆಲ ತಿಂಗಳ ಬಳಿಕ ಸಫಿಯಾಳನ್ನು ಕಾಸರಗೋಡಿಗೆ ಕರೆದುಕೊಂಡು ಬರುತ್ತೇನೆ ಎಂದು ಹಂಝ ಅವರು ಬಾಲಕಿಯ ತಂದೆ ಮೊಯ್ದು ಅವರಿಗೆ ತಿಳಿಸಿದ್ದರು. ಮಗಳನ್ನು ಬರಮಾಡಿಕೊಳ್ಳಲು ಆಕೆಯ ಇಷ್ಟದ ನೆಲ್ಲಿಕಾಯಿಯ ಜೊತೆ ಮೊಯ್ದು ಅವರು ಕಾಸರಗೋಡಿಗೆ ತೆರಳಿದಾಗ, ಸಫಿಯಾ ಕಾಣೆಯಾಗಿದ್ದಾಳೆ ಎಂದು ಹಂಝ ಹೇಳಿದ್ದರು. ಬಳಿಕ ಬಾಲಕಿಯ ತಂದೆ ಮತ್ತು ಹಂಝ ಜೊತೆಯಾಗಿ ಆದೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಪೊಲೀಸರು ಒಂದು ವರ್ಷಗಳ ಕಾಲ ಪ್ರಕರಣ ತನಿಖೆ ನಡೆಸಿದ್ದರು, ಸಫಿಯಾಳಿಗಾಗಿ ಹುಡುಕಾಡಿದ್ದರು. ಆದರೆ, ಆಕೆ ಪತ್ತೆಯಾಗಿರಲಿಲ್ಲ. ಈ ನಡುವೆ ಸಫಿಯಾ ಕ್ರಿಯಾ ಸಮಿತಿಯೊಂದನ್ನು ರಚಿಸಲಾಗಿತ್ತು. ಸಫಿಯಾಳ ತಾಯಿ ತನ್ನ ಮಗಳಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಕಾಸರಗೋಡು ಪಟ್ಟಣದಲ್ಲಿ 90 ದಿನಗಳ ಪ್ರತಿಭಟನೆಯನ್ನು ನಡೆಸಿದ್ದರು. ಒಂದೂವರೆ ವರ್ಷಗಳ ನಂತರ ಕೇರಳ ಕ್ರೈಂ ಬ್ರಾಂಚ್ ಪ್ರಕರಣವನ್ನು ಕೈಗೆತ್ತಿಕೊಂಡು ಸಫಿಯಾಳ ನಾಪತ್ತೆ ನಿಗೂಢವನ್ನು ಭೇದಿಸಿತ್ತು.

ಕ್ರೈ ಬ್ರಾಂಚ್ ತನಿಖೆಯಲ್ಲಿ ಸಫಿಯಾಳನ್ನು ಆಕೆ ಕೆಲಸ ಮಾಡುತ್ತಿದ್ದ ಮನೆಯ ಮಾಲೀಕ ಹಂಝ ಅವರೇ ಕೊಲೆ ಮಾಡಿರುವುದು ಬಯಲಾಗಿತ್ತು. ಹಂಝ ಅವರ ಮನೆಯಲ್ಲಿ ಕೆಲಸ ಮಾಡುವಾಗ ಬಿಸಿ ಗಂಜಿ ಸಫಿಯಾಳ ಮೈಮೇಲೆ ಬಿದ್ದಿತ್ತು. ಇದರಿಂದ ತೀವ್ರ ಸುಟ್ಟ ಗಾಯಗಳಿಗೆ ಒಳಗಾಗಿದ್ದ ಸಫಿಯಾಳನ್ನು, ಹಂಝ ಕ್ರೂರವಾಗಿ ಹತ್ಯೆ ಮಾಡಿ, ದೇಹವನ್ನು ತುಂಡರಿಸಿ ನಂತರ ಗೋವಾದ ಅಣೆಕಟ್ಟೆಯೊಂದರ ಬಳಿ ಹೂತಿದ್ದ.

ಮನೆ ಕೆಲಸ ಮಾಡುವಾಗ ಸಫಿಯಾ ಸುಟ್ಟ ಗಾಯಕ್ಕೆ ಒಳಗಾಗಿದ್ದಳು. ಈ ವೇಳೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು, ಆಕೆಯನ್ನು ಯಾರಾದರು ನೋಡಿದರೆ ಮನೆಯಲ್ಲಿ ಹಿಂಸಿಸಲಾಗಿದೆ ಅಂದುಕೊಳ್ಳುತ್ತಾರೆ. ಬಾಲ ಕಾರ್ಮಿಕ ಕೇಸ್ ಬೀಳುತ್ತದೆ ಎಂದು ಯೋಚಿಸಿದ ಹಂಝ, ಆಕೆಯನ್ನು ಕೊಲೆ ಮಾಡಿದ್ದ.

ಪ್ರಕರಣ ಸಂಬಂಧ 2008ರಲ್ಲಿ ಹಂಝ ಅವರನ್ನು ಬಂಧಿಸಲಾಗಿತ್ತು. ಜುಲೈ, 2015ರಲ್ಲಿ ಕಾಸರಗೋಡು ಸೆಷನ್ ನ್ಯಾಯಾಲಯ ಹಂಝಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಬಳಿಕ 2019ರಲ್ಲಿ ಕೇರಳ ಹೈಕೋರ್ಟ್ ಶಿಕ್ಷೆಯನ್ನು ಜೀವಾವಧಿಗೆ ಇಳಿಸಿತ್ತು.

ಕೊಲೆ ಅಪರಾಧಿ ಹಂಝಗೆ ಶಿಕ್ಷೆಯಾದರೂ, ಸಫಿಯಾಳ ಅಸ್ತಿಪಂಜರ ಕಾಸರಗೋಡು ನ್ಯಾಯಾಲಯದಲ್ಲೇ ಉಳಿದಿತ್ತು. ಅದನ್ನು ಇಸ್ಲಾಂ ಧರ್ಮದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲು ಅವಕಾಶ ಮಾಡಿಕೊಡುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ ಶುಕೂರ್ ಮೂಲಕ ಪೋಷಕರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ ನ್ಯಾಯಾಧೀಶ ಸಾನು ಎಸ್ ಪಣಿಕ್ಕರ್ ಅವರು ಅಸ್ತಿ ಪಂಜರ ಹಸ್ತಾಂತರಕ್ಕೆ ಆದೇಶಿಸಿದ್ದರು.

ನ್ಯಾಯಾಲಯದಿಂದ ಪೋಷಕರಿಗೆ ಹಸ್ತಾಂತರಿಸಿದ ಸಫಿಯಾಳ ಅಸ್ತಿ ಪಂಜವರನ್ನು ಕಾಸರಗೋಡಿನ ಮುಹಿಮ್ಮಾತ್‌ನಲ್ಲಿ ಶುದ್ದಿಗೊಳಿಸಿ (ಸ್ನಾನ) ಬಳಿಕ ಅಯ್ಯಂಗೇರಿ ಮಸೀದಿಯಲ್ಲಿ ಸೋಮವಾರ ರಾತ್ರಿ ದಫನ ಮಾಡಲಾಗಿದೆ. ಈ ಮೂಲಕ ದೇಶದ ಗಮನ ಸೆಳೆದಿದ್ದ ಪ್ರಕರಣವೊಂದು ಇತ್ಯರ್ಥಗೊಂಡಂತಾಗಿದೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

13 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

15 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

15 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

21 hours ago