ದೇಶದ ಟಾಪ್ 10 ಪ್ರಭಾವಿ ವ್ಯಕ್ತಿಗಳ ಪಟ್ಟಿ ರಿಲೀಸ್‌: ಯಾರ‍್ಯಾರಿಗೆ ಯಾವ ಸ್ಥಾನ?: ಪ್ರಭಾವಿಗಳ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ..

2024ನೇ ಸಾಲಿನ ಪ್ರಭಾವಿ ವ್ಯಕ್ತಿಗಳ ಪಟ್ಟಿ ಬಿಡುಗಡೆಯಾಗಿದ್ದು, ಭಾರತದ ಟಾಪ್‌ 10 ಪ್ರಭಾವಿಗಳ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಇಂಡಿಯನ್ ಎಕ್ಸ್‌ಪ್ರೆಸ್ ದೇಶದ ಟಾಪ್ 10 ಪ್ರಭಾವಿ ವ್ಯಕ್ತಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ರಾಜಕೀಯ, ವ್ಯಾಪಾರ ಮತ್ತು ಚಿತ್ರರಂಗದವರ ಹೆಸರುಗಳಿವೆ.

2024ರ ಅತ್ಯಂತ ಪ್ರಭಾವಿ ಭಾರತೀಯರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ನಾಯಕರೂ ಸೇರಿದ್ದಾರೆ. ಅಲ್ಲದೆ, ಖ್ಯಾತ ಉದ್ಯಮಿ ಗೌತಮ್ ಅದಾನಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಕೂಡ ಇದ್ದಾರೆ. ಹಾಗಾದರೆ ಇನ್ಯಾರೆಲ್ಲ ಇದ್ದಾರೆಂದು ತಿಳಿಯಿರಿ.

2024ರ 100 ಅತ್ಯಂತ ಶಕ್ತಿಶಾಲಿ ಭಾರತೀಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಪ್ರಧಾನಿ ಮೋದಿ ಮೊದಲ ಸ್ಥಾನದಲ್ಲಿದ್ದರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 16ನೇ ಸ್ಥಾನದಲ್ಲಿದ್ದಾರೆ. ಅದೇ ಸಮಯದಲ್ಲಿ ಎಎಪಿಯ ಸಂಚಾಲಕ ಮತ್ತು ನವದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 18ನೇ ಸ್ಥಾನದಲ್ಲಿದ್ದಾರೆ.

ದೇಶದ ಟಾಪ್ 10 ಪ್ರಭಾವಿ ವ್ಯಕ್ತಿಗಳ ಪಟ್ಟಿ

* ಪ್ರಧಾನಿ ನರೇಂದ್ರ ಮೋದಿ

* ಅಮಿತ್ ಶಾ

* ಮೋಹನ್ ಭಾಗವತ್

* ಡಿವೈ ಚಂದ್ರಚೂಡ್

* ಎಸ್ ಜೈಶಂಕರ್

* ಯೋಗಿ ಆದಿತ್ಯನಾಥ್

* ರಾಜನಾಥ್ ಸಿಂಗ್

* ನಿರ್ಮಲಾ ಸೀತಾರಾಮನ್

* ಜೆ.ಪಿ.ನಡ್ಡಾ

* ಗೌತಮ್ ಅದಾನಿ

1. ನರೇಂದ್ರ ಮೋದಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಟ್ವೀಟ್‌ನಲ್ಲಿ 95.6 ಮಿಲಿಯನ್ ಫಾಲೋವರ್ಸ್‌ ಅನ್ನು ಹೊಂದಿದ್ದಾರೆ.

2. ಅಮಿತ್ ಶಾ: ಪ್ರಧಾನಿ ನರೇಂದ್ರ ಮೋದಿ ನಂತರ ಮತ್ತೊಬ್ಬ ಪ್ರಭಾವಿ ಭಾರತೀಯ ವ್ಯಕ್ತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಿದ್ದಾರೆ. ಅವರು ಬಿಜೆಪಿಯ ಚಾಣಕ್ಷ್ಯ ಅಂತಲೇ ಪ್ರಖ್ಯಾತಿ ಹೊಂದಿದ್ದಾರೆ. ಇವರ ನಾಯಕತ್ವದಲ್ಲಿ, ಡಿಸೆಂಬರ್ 2023ರಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷವು ದೊಡ್ಡ ಮಟ್ಟದ ವಿಜಯವನ್ನು ಪತಾಕೆಯನ್ನು ಹಾರಿಸಿತ್ತು.

3. ಮೋಹನ್ ಭಾಗವತ್: ಈ ಪಟ್ಟಿಯಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಸ್ಥಾನ ಪಡೆದಿದ್ದಾರೆ. ಜನವರಿ 22ರಂದು ನಡೆದ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಪ್ರಧಾನಿ ಮೋದಿ ಅವರೊಂದಿಗೆ ಎನ್‌ಡಿಎ-ಬಿಜೆಪಿ ಮೈತ್ರಿಕೂಟದಲ್ಲಿ ತಮ್ಮ ಸ್ಥಾನದ ಪ್ರಬಲ ಸಂಕೇತವನ್ನು ಕಳುಹಿಸಿದರು.

4. ಡಿ.ವೈ ಚಂದ್ರಚೂಡ್: ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಜಮ್ಮು ಮತ್ತು ಕಾಶ್ಮೀರವನ್ನು ಭಾರತೀಯ ಒಕ್ಕೂಟಕ್ಕೆ ವಿಲೀನಗೊಳಿಸುವ ಕಾನೂನು ಸಂದೇಹವನ್ನು ಇತ್ಯರ್ಥಪಡಿಸಿತು. 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರದ ಪರವಾಗಿ ತೀರ್ಪು ನೀಡಿತು. ಚುನಾವಣಾ ವರ್ಷದಲ್ಲಿ, ಪ್ರತಿ ನಿರ್ಧಾರವು ನ್ಯಾಯಾಂಗ ಪರಿಶೀಲನೆ ಪ್ರಕರಣಗಳನ್ನು ಹೇಗೆ ನಿರ್ವಹಿಸುತ್ತದೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತದೆ. ಇವರ ಇವರ ಅಧಿಕಾರದ ಅವಧಿ ನವೆಂಬರ್‌ನಲ್ಲಿ ಕೊನೆಯಾಗಲಿದೆ.

5. ಎಸ್ ಜೈಶಂಕರ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ತಮ್ಮ ಬಲವಾದ ರಾಜತಾಂತ್ರಿಕ ಕೌಶಲ್ಯದಿಂದ ನಾಗರಿಕರನ್ನು ಮೆಚ್ಚಿಸಿದ್ದಾರೆ. ರಷ್ಯಾದ ತೈಲ ನಿರ್ಬಂಧ ಮತ್ತು ಖಲಿಸ್ತಾನ್ ಸಮಸ್ಯೆಯ ಸಮಯದಲ್ಲಿ ಅವರ ತೀಕ್ಷ್ಣವಾದ ಪ್ರತಿಕ್ರಿಯೆಗಳು ಜಾಗತಿಕ ರಾಜತಾಂತ್ರಿಕತೆಯ ಪಂದ್ಯದಲ್ಲಿ ಭಾರತವನ್ನು ಬಲವಾದ ಸ್ಥಾನದಲ್ಲಿರುವಂತೆ ಮಾಡಿದೆ.

6. ಯೋಗಿ ಆದಿತ್ಯನಾಥ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಬಿಜೆಪಿಯ ಪ್ರಮುಖ ನಾಯಕರಲ್ಲಿ ಯೋಗಿ ಆದಿತ್ಯನಾಥ್‌ ಅವರು ಕೂಡ ಒಬ್ಬರಾಗಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ರಾಜ್ಯದಿಂದ ಬಂದಾಗ ಅವರ ಪ್ರಾಮುಖ್ಯತೆ ಮತ್ತಷ್ಟು ಹೆಚ್ಚುತ್ತದೆ. ಕೇಂದ್ರವು ಯುಪಿ ಅಭಿವೃದ್ಧಿಗೆ ಕೋಟ್ಯಂತರ ಡಾಲರ್‌ಗಳನ್ನು ವಿನಿಯೋಗಿಸುತ್ತಿದ್ದರೆ, ಆದಿತ್ಯನಾಥ್ ರಾಜ್ಯದಲ್ಲಿ ಮಂದಿರ ನಿರ್ಮಾಣಕ್ಕೆ ಒತ್ತು ನೀಡುವ ಮೂಲಕ ತಮ್ಮ ಹಿಂದೂ ಮತದಾರರನ್ನು ಓಲೈಕೆ ಮಾಡುತ್ತಿದ್ದಾರೆ.

7. ರಾಜನಾಥ್ ಸಿಂಗ್: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಪ್ರಧಾನಿ ಮೋದಿಯವರ ಸಂಪುಟದಲ್ಲಿ ಅತ್ಯಂತ ಹಿರಿಯ ನಾಯಕರಾಗಿದ್ದಾರೆ. ಅವರ ಪ್ರಭಾವಶಾಲಿಯಿಂದಾಗಿ, ಅಲ್ಲದೆ, ಅವರು ಎಲ್ಲಾ ಪಕ್ಷಗಳ ನಾಯಕರಿಂದಲೂ ಮೆಚ್ಚುಗೆ ಪಡೆಯುತ್ತಿದ್ದಾರೆ.

8. ನಿರ್ಮಲಾ ಸೀತಾರಾಮನ್: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಮಹಿಳಾ ಹಣಕಾಸು ಸಚಿವೆ ಎನಿಸಿಕೊಂಡಿದ್ದಾರೆ. ಅವರ ನಾಯಕತ್ವದಲ್ಲಿ, ಭಾರತದ ಆರ್ಥಿಕತೆಯು ಸತತ ಮೂರು ವರ್ಷಗಳವರೆಗೆ 7%ನಷ್ಟು ಬೆಳವಣಿಗೆಯನ್ನು ದಾಖಲಿಸಿದೆಯಂತೆ.

9. ಜೆ.ಪಿ.ನಡ್ಡಾ: ಬಿಜೆಪಿ ರಾಷ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ದೇಶದ ಅತಿದೊಡ್ಡ ಸಂಘಟನೆಗೆ ಕಮಾಂಡರ್ ಆಗಿ ಗುರುತಿಸಿಕೊಂಡಿದ್ದಾರೆ. ಇಷ್ಟು ದೊಡ್ಡ ಸಂಸ್ಥೆಯ ಕಮಾಂಡರ್ ಆಗುತ್ತಲೇ ತನ್ನನ್ನು ಉಳಿಸಿಕೊಂಡು ಕೇಂದ್ರ ನಾಯಕತ್ವವವನ್ನು ಕೂಡ ಬಲಪಡಿಸಿಕೊಳ್ಳುತ್ತಿದ್ದಾರೆ.

10. ಗೌತಮ್ ಅದಾನಿ: ಇನ್ನು 101 ಬಿಲಿಯನ್ ಡಾಲರ್ ನಿವ್ವಳ ಮೌಲ್ಯ ಹೊಂದಿರುವ ಟಾಪ್ 10 ಪ್ರಭಾವಿ ಭಾರತೀಯರಲ್ಲಿ ಗೌತಮ್ ಅದಾನಿ ಏಕೈಕ ಉದ್ಯಮಿ ಆಗಿದ್ದಾರೆ. ಅವರ ನಾಯಕತ್ವದಲ್ಲಿ ಗುಂಪು ಸ್ವಾಧೀನಗಳು ಮತ್ತು ಗ್ರೀನ್‌ಫೀಲ್ಡ್ ಯೋಜನೆಗಳ ಸರಣಿಯ ಮೂಲಕ ವೇಗವಾಗಿ ಬೆಳೆದಿದೆ. ಅದಾನಿ ಅವರ ಹತ್ತಿರದ ಪ್ರತಿಸ್ಪರ್ಧಿ ಬಿಲಿಯನೇರ್ ಮುಖೇಶ್ ಅಂಬಾನಿ IE 100 ಪವರ್‌ಫುಲ್ ಭಾರತೀಯರ ಪಟ್ಟಿಯಲ್ಲಿ 11ನೇ ಸ್ಥಾನದಲ್ಲಿದ್ದಾರೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ, ಅಂಬಾನಿ ಅವರ ನಿವ್ವಳ ಮೌಲ್ಯ 109 ಬಿಲಿಯನ್ ಆಗಿದೆ ಎನ್ನುವ ಮಾಹಿತಿಯಿದೆ.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

7 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

7 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

11 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

13 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

16 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

20 hours ago