ದೇಶದ ಟಾಪ್ 10 ವಿವಿ, ಎಂಜಿನಿಯರಿಂಗ್ ಕಾಲೇಜುಗಳ ಎನ್‌ಐಆರ್‌ಎಫ್ ಶ್ರೇಯಾಂಕ ಪಟ್ಟಿ ರಿಲೀಸ್

ಪ್ರಸ್ತಕ ವರ್ಷದ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (ಎನ್‌ಐಆರ್‌ಎಫ್‌) ರ‍್ಯಾಂಕಿಂಗ್‌ನ ಮೊದಲ ಹತ್ತು ಅಗ್ರ ಶ್ರೇಯಾಂಕದ ಶಿಕ್ಷಣ ಸಂಸ್ಥೆಗಳಲ್ಲಿ ದೇಶದ ವಿವಿಧ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಸಂಸ್ಥೆಗಳು ಸ್ಥಾನ ಪಡೆದಿವೆ.

ಐಐಟಿ ಮದ್ರಾಸ್, ಐಐಟಿ ದೆಹಲಿ, ಐಐಟಿ ಕಾನ್ಪುರ ಮೊದಲ ಐದು ಸ್ಥಾನಗಳನ್ನು ಪಡೆದುಕೊಂಡಿವೆ. ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು) ಮತ್ತೊಮ್ಮೆ ಹತ್ತು ಅಗ್ರ ಶ್ರೇಯಾಂಕಗಳಲ್ಲಿ ಸ್ಥಾನ ಪಡೆದ ಏಕೈಕ ಕಲಾ ಶಿಕ್ಷಣ ಸಂಸ್ಥೆಯಾಗಿದೆ.

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ದೇಶದ ಅತ್ಯುತ್ತಮ ವಿಶ್ವವಿದ್ಯಾಲಯ ಎಂಬ ಶ್ರೇಯಕ್ಕೆ ಮತ್ತೊಮ್ಮೆ ಪಾತ್ರವಾಗಿದೆ.

ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪೈಕಿಯೂ ಬೆಂಗಳೂರಿನ ಐಐಎಸ್‌ಸಿಯು 2ನೇ ಸ್ಥಾನ ಪಡೆದಿದೆ. ಒಟ್ಟಾರೆ ವಿಭಾಗದಲ್ಲಿ ಮೊದಲ ಹತ್ತರಲ್ಲಿ ಸ್ಥಾನ ಪಡೆದ ಇತರ ಸಂಸ್ಥೆಗಳ ಪೈಕಿ ಐಐಟಿ ಬಾಂಬೆ, ಐಐಟಿ ಕಾನ್ಪುರ, ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ದೆಹಲಿ, ಐಐಟಿ ಖರಗ್‌ಪುರ, ಐಐಟಿ ರೂರ್ಕಿ ಮತ್ತು ಐಐಟಿ ಗುವಾಹಟಿ ಇವೆ.

ದೆಹಲಿಯ ವಿಶ್ವವಿದ್ಯಾಲಯದ ಮಿರಾಂಡಾ ಹೌಸ್ ಕಾಲೇಜು ಮತ್ತು ಹಿಂದೂ ಕಾಲೇಜು, ಚೆನ್ನೈನ ಪ್ರೆಸಿಡೆನ್ಸಿ ಕಾಲೇಜು ಮತ್ತೊಮ್ಮೆ ಅತ್ಯುತ್ತಮ ಕಾಲೇಜುಗಳು ಎಂಬ ಮನ್ನಣೆ ಪಡೆದಿವೆ.

ಕೊಯಮತ್ತೂರಿನ ಪಿಎಸ್‌ಜಿಆರ್ ಕೃಷ್ಣಾಮ್ಮಾಳ್ ಕಾಲೇಜ್ ಫಾರ್ ವುಮೆನ್ ಮತ್ತು ಕೋಲ್ಕತ್ತದ ಸೇಂಟ್ ಕ್ಸೇವಿಯರ್ಸ್ ಕಾಲೇಜು ಈ ವರ್ಷ ಐದು ಅಗ್ರ ಕಾಲೇಜುಗಳಲ್ಲಿ ಸ್ಥಾನ ಪಡೆದಿವೆ.

ವೈದ್ಯಕೀಯ ಕಾಲೇಜುಗಳಲ್ಲಿ ಪೈಕಿ ದೆಹಲಿಯ ಏಮ್ಸ್ ಹೊರತುಪಡಿಸಿ, ಚಂಡೀಗಢದ ವೈದ್ಯಕೀಯ ಶಿಕ್ಷಣ ಮತ್ತು ಸ್ನಾತಕೋತ್ತರ ಸಂಶೋಧನಾ ಸಂಸ್ಥೆ, ವೆಲ್ಲೂರಿನ ಕ್ರಿಶ್ಚಿಯನ್ ವೈದ್ಯಕೀಯ ಕಾಲೇಜು, ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌), ಪುದುಚೇರಿಯ ಜವಾಹರಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಮೊದಲ ಐದು ಸ್ಥಾನಗಳಲ್ಲಿವೆ. ದೇಶದ ಹತ್ತು ಅಗ್ರ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್‌ಗಳಲ್ಲಿ ಐಐಎಂ ಅಹಮದಾಬಾದ್, ಐಐಎಂ ಬೆಂಗಳೂರು, ಐಐಎಂ ಕೋಯಿಕ್ಕೋಡ್, ಐಐಎಂ ಕ್ಯಾಲಿಕಟ್, ಐಐಎಂ ದೆಹಲಿ, ಐಐಎಂ ಲಖನೌ, ಮುಂಬೈನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಎಂಜಿನಿಯರಿಂಘ್, ಐಐಎಂ ಇಂದೋರ್, ಕ್ಸೇವಿಯರ್ ಲೇಬರ್ ರಿಲೇಷನ್ಸ್ ಇನ್‌ಸ್ಟಿಟ್ಯೂಟ್ ಮತ್ತು ಐಐಟಿ ಬಾಂಬೆ ಸ್ಥಾನ ಪಡೆದಿವೆ.

ದೇಶದ ಹತ್ತು ಅತ್ಯುತ್ತಮ ವಿಶ್ವವಿದ್ಯಾಲಯಗಳು

1. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ), ಬೆಂಗಳೂರು

2. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ, ನವದೆಹಲಿ

3. ಜಾಮಿಯಾ ಮಿಲಿಯಾ ಇಸ್ಲಾಮಿಯಾ, ನವದೆಹಲಿ

4. ಜಾಧವಪುರ ವಿಶ್ವವಿದ್ಯಾಲಯ, ಕೋಲ್ಕತ್ತ

5. ಬನಾರಸ್ ಹಿಂದೂ ವಿಶ್ವವಿದ್ಯಾಲಯ, ವಾರಾಣಸಿ

6. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಮಣಿಪಾಲ

7. ಅಮೃತ ವಿಶ್ವವಿದ್ಯಾಪೀಠಂ, ಕೊಯಮತ್ತೂರು

8. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವೆಲ್ಲೂರು

9. ಅಲೀಗಡ ಮುಸ್ಲಿಂ ವಿಶ್ವವಿದ್ಯಾಲಯ, ಅಲೀಗಡ

10. ಹೈದರಾಬಾದ್ ವಿಶ್ವವಿದ್ಯಾಲಯ, ಹೈದರಾಬಾದ್

ದೇಶದ ಹತ್ತು ಅತ್ಯುತ್ತಮ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳು

1. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮದ್ರಾಸ್

2. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ದೆಹಲಿ

3.ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬಾಂಬೆ

4. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕಾನ್ಪುರ

5.ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ರೂರ್ಕಿ

6. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಖರಗಪುರ

7.ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಗುವಾಹಟಿ

8. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಹೈದರಾಬಾದ್

9. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತಿರುಚಿರಾಪಳ್ಳಿ

10. ಜಾಧವ್‌ಪುರ ವಿಶ್ವವಿದ್ಯಾಲಯ, ಕೋಲ್ಕತ್ತ

ದೇಶದ ಹತ್ತು ಅತ್ಯುತ್ತಮ ಕಾಲೇಜುಗಳು

1.ಮಿರಾಂಡಾ ಹೌಸ್, ದೆಹಲಿ

2.ಹಿಂದೂ ಕಾಲೇಜ್, ದೆಹಲಿ

3.ಪ್ರೆಸಿಡೆನ್ಸಿ ಕಾಲೇಜು, ಚೆನ್ನೈ

4.PSGR ಕೃಷ್ಣಮ್ಮಲ್ ಮಹಿಳಾ ಕಾಲೇಜು, ಕೊಯಮತ್ತೂರು

5.ಸೇಂಟ್ ಕ್ಸೇವಿಯರ್ ಕಾಲೇಜು, ಕೋಲ್ಕತ್ತಾ

6.ಆತ್ಮ ರಾಮ್ ಸನಾತನ ಧರ್ಮ ಕಾಲೇಜು, ನವದೆಹಲಿ

7.ಲೊಯೊಲಾ ಕಾಲೇಜು, ಚೆನ್ನೈ

8.ರಾಮಕೃಷ್ಣ ಮಿಷನ್ ವಿದ್ಯಾಮಂದಿರ, ಹೌರಾ

9.ಲೇಡಿ ಶ್ರೀ ರಾಮ್ ಕಾಲೇಜ್ ಫಾರ್ ವುಮೆನ್, ದೆಹಲಿ

10ಕಿರೋರಿ ಮಾಲ್ ಕಾಲೇಜ್, ದೆಹಲಿ

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

9 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

11 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

12 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

18 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

18 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

21 hours ago