ದೇಶದ ಟಾಪ್ 10 ವಿವಿ, ಎಂಜಿನಿಯರಿಂಗ್ ಕಾಲೇಜುಗಳ ಎನ್‌ಐಆರ್‌ಎಫ್ ಶ್ರೇಯಾಂಕ ಪಟ್ಟಿ ರಿಲೀಸ್

ಪ್ರಸ್ತಕ ವರ್ಷದ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (ಎನ್‌ಐಆರ್‌ಎಫ್‌) ರ‍್ಯಾಂಕಿಂಗ್‌ನ ಮೊದಲ ಹತ್ತು ಅಗ್ರ ಶ್ರೇಯಾಂಕದ ಶಿಕ್ಷಣ ಸಂಸ್ಥೆಗಳಲ್ಲಿ ದೇಶದ ವಿವಿಧ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಸಂಸ್ಥೆಗಳು ಸ್ಥಾನ ಪಡೆದಿವೆ.

ಐಐಟಿ ಮದ್ರಾಸ್, ಐಐಟಿ ದೆಹಲಿ, ಐಐಟಿ ಕಾನ್ಪುರ ಮೊದಲ ಐದು ಸ್ಥಾನಗಳನ್ನು ಪಡೆದುಕೊಂಡಿವೆ. ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು) ಮತ್ತೊಮ್ಮೆ ಹತ್ತು ಅಗ್ರ ಶ್ರೇಯಾಂಕಗಳಲ್ಲಿ ಸ್ಥಾನ ಪಡೆದ ಏಕೈಕ ಕಲಾ ಶಿಕ್ಷಣ ಸಂಸ್ಥೆಯಾಗಿದೆ.

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ದೇಶದ ಅತ್ಯುತ್ತಮ ವಿಶ್ವವಿದ್ಯಾಲಯ ಎಂಬ ಶ್ರೇಯಕ್ಕೆ ಮತ್ತೊಮ್ಮೆ ಪಾತ್ರವಾಗಿದೆ.

ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪೈಕಿಯೂ ಬೆಂಗಳೂರಿನ ಐಐಎಸ್‌ಸಿಯು 2ನೇ ಸ್ಥಾನ ಪಡೆದಿದೆ. ಒಟ್ಟಾರೆ ವಿಭಾಗದಲ್ಲಿ ಮೊದಲ ಹತ್ತರಲ್ಲಿ ಸ್ಥಾನ ಪಡೆದ ಇತರ ಸಂಸ್ಥೆಗಳ ಪೈಕಿ ಐಐಟಿ ಬಾಂಬೆ, ಐಐಟಿ ಕಾನ್ಪುರ, ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ದೆಹಲಿ, ಐಐಟಿ ಖರಗ್‌ಪುರ, ಐಐಟಿ ರೂರ್ಕಿ ಮತ್ತು ಐಐಟಿ ಗುವಾಹಟಿ ಇವೆ.

ದೆಹಲಿಯ ವಿಶ್ವವಿದ್ಯಾಲಯದ ಮಿರಾಂಡಾ ಹೌಸ್ ಕಾಲೇಜು ಮತ್ತು ಹಿಂದೂ ಕಾಲೇಜು, ಚೆನ್ನೈನ ಪ್ರೆಸಿಡೆನ್ಸಿ ಕಾಲೇಜು ಮತ್ತೊಮ್ಮೆ ಅತ್ಯುತ್ತಮ ಕಾಲೇಜುಗಳು ಎಂಬ ಮನ್ನಣೆ ಪಡೆದಿವೆ.

ಕೊಯಮತ್ತೂರಿನ ಪಿಎಸ್‌ಜಿಆರ್ ಕೃಷ್ಣಾಮ್ಮಾಳ್ ಕಾಲೇಜ್ ಫಾರ್ ವುಮೆನ್ ಮತ್ತು ಕೋಲ್ಕತ್ತದ ಸೇಂಟ್ ಕ್ಸೇವಿಯರ್ಸ್ ಕಾಲೇಜು ಈ ವರ್ಷ ಐದು ಅಗ್ರ ಕಾಲೇಜುಗಳಲ್ಲಿ ಸ್ಥಾನ ಪಡೆದಿವೆ.

ವೈದ್ಯಕೀಯ ಕಾಲೇಜುಗಳಲ್ಲಿ ಪೈಕಿ ದೆಹಲಿಯ ಏಮ್ಸ್ ಹೊರತುಪಡಿಸಿ, ಚಂಡೀಗಢದ ವೈದ್ಯಕೀಯ ಶಿಕ್ಷಣ ಮತ್ತು ಸ್ನಾತಕೋತ್ತರ ಸಂಶೋಧನಾ ಸಂಸ್ಥೆ, ವೆಲ್ಲೂರಿನ ಕ್ರಿಶ್ಚಿಯನ್ ವೈದ್ಯಕೀಯ ಕಾಲೇಜು, ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌), ಪುದುಚೇರಿಯ ಜವಾಹರಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಮೊದಲ ಐದು ಸ್ಥಾನಗಳಲ್ಲಿವೆ. ದೇಶದ ಹತ್ತು ಅಗ್ರ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್‌ಗಳಲ್ಲಿ ಐಐಎಂ ಅಹಮದಾಬಾದ್, ಐಐಎಂ ಬೆಂಗಳೂರು, ಐಐಎಂ ಕೋಯಿಕ್ಕೋಡ್, ಐಐಎಂ ಕ್ಯಾಲಿಕಟ್, ಐಐಎಂ ದೆಹಲಿ, ಐಐಎಂ ಲಖನೌ, ಮುಂಬೈನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಎಂಜಿನಿಯರಿಂಘ್, ಐಐಎಂ ಇಂದೋರ್, ಕ್ಸೇವಿಯರ್ ಲೇಬರ್ ರಿಲೇಷನ್ಸ್ ಇನ್‌ಸ್ಟಿಟ್ಯೂಟ್ ಮತ್ತು ಐಐಟಿ ಬಾಂಬೆ ಸ್ಥಾನ ಪಡೆದಿವೆ.

ದೇಶದ ಹತ್ತು ಅತ್ಯುತ್ತಮ ವಿಶ್ವವಿದ್ಯಾಲಯಗಳು

1. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ), ಬೆಂಗಳೂರು

2. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ, ನವದೆಹಲಿ

3. ಜಾಮಿಯಾ ಮಿಲಿಯಾ ಇಸ್ಲಾಮಿಯಾ, ನವದೆಹಲಿ

4. ಜಾಧವಪುರ ವಿಶ್ವವಿದ್ಯಾಲಯ, ಕೋಲ್ಕತ್ತ

5. ಬನಾರಸ್ ಹಿಂದೂ ವಿಶ್ವವಿದ್ಯಾಲಯ, ವಾರಾಣಸಿ

6. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಮಣಿಪಾಲ

7. ಅಮೃತ ವಿಶ್ವವಿದ್ಯಾಪೀಠಂ, ಕೊಯಮತ್ತೂರು

8. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವೆಲ್ಲೂರು

9. ಅಲೀಗಡ ಮುಸ್ಲಿಂ ವಿಶ್ವವಿದ್ಯಾಲಯ, ಅಲೀಗಡ

10. ಹೈದರಾಬಾದ್ ವಿಶ್ವವಿದ್ಯಾಲಯ, ಹೈದರಾಬಾದ್

ದೇಶದ ಹತ್ತು ಅತ್ಯುತ್ತಮ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳು

1. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮದ್ರಾಸ್

2. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ದೆಹಲಿ

3.ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬಾಂಬೆ

4. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕಾನ್ಪುರ

5.ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ರೂರ್ಕಿ

6. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಖರಗಪುರ

7.ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಗುವಾಹಟಿ

8. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಹೈದರಾಬಾದ್

9. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತಿರುಚಿರಾಪಳ್ಳಿ

10. ಜಾಧವ್‌ಪುರ ವಿಶ್ವವಿದ್ಯಾಲಯ, ಕೋಲ್ಕತ್ತ

ದೇಶದ ಹತ್ತು ಅತ್ಯುತ್ತಮ ಕಾಲೇಜುಗಳು

1.ಮಿರಾಂಡಾ ಹೌಸ್, ದೆಹಲಿ

2.ಹಿಂದೂ ಕಾಲೇಜ್, ದೆಹಲಿ

3.ಪ್ರೆಸಿಡೆನ್ಸಿ ಕಾಲೇಜು, ಚೆನ್ನೈ

4.PSGR ಕೃಷ್ಣಮ್ಮಲ್ ಮಹಿಳಾ ಕಾಲೇಜು, ಕೊಯಮತ್ತೂರು

5.ಸೇಂಟ್ ಕ್ಸೇವಿಯರ್ ಕಾಲೇಜು, ಕೋಲ್ಕತ್ತಾ

6.ಆತ್ಮ ರಾಮ್ ಸನಾತನ ಧರ್ಮ ಕಾಲೇಜು, ನವದೆಹಲಿ

7.ಲೊಯೊಲಾ ಕಾಲೇಜು, ಚೆನ್ನೈ

8.ರಾಮಕೃಷ್ಣ ಮಿಷನ್ ವಿದ್ಯಾಮಂದಿರ, ಹೌರಾ

9.ಲೇಡಿ ಶ್ರೀ ರಾಮ್ ಕಾಲೇಜ್ ಫಾರ್ ವುಮೆನ್, ದೆಹಲಿ

10ಕಿರೋರಿ ಮಾಲ್ ಕಾಲೇಜ್, ದೆಹಲಿ

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

8 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

10 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

10 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

11 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

15 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

16 hours ago