ದೇಶದ ಟಾಪ್ 10 ವಿವಿ, ಎಂಜಿನಿಯರಿಂಗ್ ಕಾಲೇಜುಗಳ ಎನ್‌ಐಆರ್‌ಎಫ್ ಶ್ರೇಯಾಂಕ ಪಟ್ಟಿ ರಿಲೀಸ್

ಪ್ರಸ್ತಕ ವರ್ಷದ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (ಎನ್‌ಐಆರ್‌ಎಫ್‌) ರ‍್ಯಾಂಕಿಂಗ್‌ನ ಮೊದಲ ಹತ್ತು ಅಗ್ರ ಶ್ರೇಯಾಂಕದ ಶಿಕ್ಷಣ ಸಂಸ್ಥೆಗಳಲ್ಲಿ ದೇಶದ ವಿವಿಧ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಸಂಸ್ಥೆಗಳು ಸ್ಥಾನ ಪಡೆದಿವೆ.

ಐಐಟಿ ಮದ್ರಾಸ್, ಐಐಟಿ ದೆಹಲಿ, ಐಐಟಿ ಕಾನ್ಪುರ ಮೊದಲ ಐದು ಸ್ಥಾನಗಳನ್ನು ಪಡೆದುಕೊಂಡಿವೆ. ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು) ಮತ್ತೊಮ್ಮೆ ಹತ್ತು ಅಗ್ರ ಶ್ರೇಯಾಂಕಗಳಲ್ಲಿ ಸ್ಥಾನ ಪಡೆದ ಏಕೈಕ ಕಲಾ ಶಿಕ್ಷಣ ಸಂಸ್ಥೆಯಾಗಿದೆ.

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ದೇಶದ ಅತ್ಯುತ್ತಮ ವಿಶ್ವವಿದ್ಯಾಲಯ ಎಂಬ ಶ್ರೇಯಕ್ಕೆ ಮತ್ತೊಮ್ಮೆ ಪಾತ್ರವಾಗಿದೆ.

ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪೈಕಿಯೂ ಬೆಂಗಳೂರಿನ ಐಐಎಸ್‌ಸಿಯು 2ನೇ ಸ್ಥಾನ ಪಡೆದಿದೆ. ಒಟ್ಟಾರೆ ವಿಭಾಗದಲ್ಲಿ ಮೊದಲ ಹತ್ತರಲ್ಲಿ ಸ್ಥಾನ ಪಡೆದ ಇತರ ಸಂಸ್ಥೆಗಳ ಪೈಕಿ ಐಐಟಿ ಬಾಂಬೆ, ಐಐಟಿ ಕಾನ್ಪುರ, ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ದೆಹಲಿ, ಐಐಟಿ ಖರಗ್‌ಪುರ, ಐಐಟಿ ರೂರ್ಕಿ ಮತ್ತು ಐಐಟಿ ಗುವಾಹಟಿ ಇವೆ.

ದೆಹಲಿಯ ವಿಶ್ವವಿದ್ಯಾಲಯದ ಮಿರಾಂಡಾ ಹೌಸ್ ಕಾಲೇಜು ಮತ್ತು ಹಿಂದೂ ಕಾಲೇಜು, ಚೆನ್ನೈನ ಪ್ರೆಸಿಡೆನ್ಸಿ ಕಾಲೇಜು ಮತ್ತೊಮ್ಮೆ ಅತ್ಯುತ್ತಮ ಕಾಲೇಜುಗಳು ಎಂಬ ಮನ್ನಣೆ ಪಡೆದಿವೆ.

ಕೊಯಮತ್ತೂರಿನ ಪಿಎಸ್‌ಜಿಆರ್ ಕೃಷ್ಣಾಮ್ಮಾಳ್ ಕಾಲೇಜ್ ಫಾರ್ ವುಮೆನ್ ಮತ್ತು ಕೋಲ್ಕತ್ತದ ಸೇಂಟ್ ಕ್ಸೇವಿಯರ್ಸ್ ಕಾಲೇಜು ಈ ವರ್ಷ ಐದು ಅಗ್ರ ಕಾಲೇಜುಗಳಲ್ಲಿ ಸ್ಥಾನ ಪಡೆದಿವೆ.

ವೈದ್ಯಕೀಯ ಕಾಲೇಜುಗಳಲ್ಲಿ ಪೈಕಿ ದೆಹಲಿಯ ಏಮ್ಸ್ ಹೊರತುಪಡಿಸಿ, ಚಂಡೀಗಢದ ವೈದ್ಯಕೀಯ ಶಿಕ್ಷಣ ಮತ್ತು ಸ್ನಾತಕೋತ್ತರ ಸಂಶೋಧನಾ ಸಂಸ್ಥೆ, ವೆಲ್ಲೂರಿನ ಕ್ರಿಶ್ಚಿಯನ್ ವೈದ್ಯಕೀಯ ಕಾಲೇಜು, ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌), ಪುದುಚೇರಿಯ ಜವಾಹರಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಮೊದಲ ಐದು ಸ್ಥಾನಗಳಲ್ಲಿವೆ. ದೇಶದ ಹತ್ತು ಅಗ್ರ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್‌ಗಳಲ್ಲಿ ಐಐಎಂ ಅಹಮದಾಬಾದ್, ಐಐಎಂ ಬೆಂಗಳೂರು, ಐಐಎಂ ಕೋಯಿಕ್ಕೋಡ್, ಐಐಎಂ ಕ್ಯಾಲಿಕಟ್, ಐಐಎಂ ದೆಹಲಿ, ಐಐಎಂ ಲಖನೌ, ಮುಂಬೈನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಎಂಜಿನಿಯರಿಂಘ್, ಐಐಎಂ ಇಂದೋರ್, ಕ್ಸೇವಿಯರ್ ಲೇಬರ್ ರಿಲೇಷನ್ಸ್ ಇನ್‌ಸ್ಟಿಟ್ಯೂಟ್ ಮತ್ತು ಐಐಟಿ ಬಾಂಬೆ ಸ್ಥಾನ ಪಡೆದಿವೆ.

ದೇಶದ ಹತ್ತು ಅತ್ಯುತ್ತಮ ವಿಶ್ವವಿದ್ಯಾಲಯಗಳು

1. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ), ಬೆಂಗಳೂರು

2. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ, ನವದೆಹಲಿ

3. ಜಾಮಿಯಾ ಮಿಲಿಯಾ ಇಸ್ಲಾಮಿಯಾ, ನವದೆಹಲಿ

4. ಜಾಧವಪುರ ವಿಶ್ವವಿದ್ಯಾಲಯ, ಕೋಲ್ಕತ್ತ

5. ಬನಾರಸ್ ಹಿಂದೂ ವಿಶ್ವವಿದ್ಯಾಲಯ, ವಾರಾಣಸಿ

6. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಮಣಿಪಾಲ

7. ಅಮೃತ ವಿಶ್ವವಿದ್ಯಾಪೀಠಂ, ಕೊಯಮತ್ತೂರು

8. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವೆಲ್ಲೂರು

9. ಅಲೀಗಡ ಮುಸ್ಲಿಂ ವಿಶ್ವವಿದ್ಯಾಲಯ, ಅಲೀಗಡ

10. ಹೈದರಾಬಾದ್ ವಿಶ್ವವಿದ್ಯಾಲಯ, ಹೈದರಾಬಾದ್

ದೇಶದ ಹತ್ತು ಅತ್ಯುತ್ತಮ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳು

1. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮದ್ರಾಸ್

2. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ದೆಹಲಿ

3.ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬಾಂಬೆ

4. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕಾನ್ಪುರ

5.ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ರೂರ್ಕಿ

6. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಖರಗಪುರ

7.ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಗುವಾಹಟಿ

8. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಹೈದರಾಬಾದ್

9. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತಿರುಚಿರಾಪಳ್ಳಿ

10. ಜಾಧವ್‌ಪುರ ವಿಶ್ವವಿದ್ಯಾಲಯ, ಕೋಲ್ಕತ್ತ

ದೇಶದ ಹತ್ತು ಅತ್ಯುತ್ತಮ ಕಾಲೇಜುಗಳು

1.ಮಿರಾಂಡಾ ಹೌಸ್, ದೆಹಲಿ

2.ಹಿಂದೂ ಕಾಲೇಜ್, ದೆಹಲಿ

3.ಪ್ರೆಸಿಡೆನ್ಸಿ ಕಾಲೇಜು, ಚೆನ್ನೈ

4.PSGR ಕೃಷ್ಣಮ್ಮಲ್ ಮಹಿಳಾ ಕಾಲೇಜು, ಕೊಯಮತ್ತೂರು

5.ಸೇಂಟ್ ಕ್ಸೇವಿಯರ್ ಕಾಲೇಜು, ಕೋಲ್ಕತ್ತಾ

6.ಆತ್ಮ ರಾಮ್ ಸನಾತನ ಧರ್ಮ ಕಾಲೇಜು, ನವದೆಹಲಿ

7.ಲೊಯೊಲಾ ಕಾಲೇಜು, ಚೆನ್ನೈ

8.ರಾಮಕೃಷ್ಣ ಮಿಷನ್ ವಿದ್ಯಾಮಂದಿರ, ಹೌರಾ

9.ಲೇಡಿ ಶ್ರೀ ರಾಮ್ ಕಾಲೇಜ್ ಫಾರ್ ವುಮೆನ್, ದೆಹಲಿ

10ಕಿರೋರಿ ಮಾಲ್ ಕಾಲೇಜ್, ದೆಹಲಿ

Ramesh Babu

Journalist

Recent Posts

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

49 minutes ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

1 hour ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

1 hour ago

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

5 hours ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

19 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

19 hours ago