ಪ್ರಸ್ತಕ ವರ್ಷದ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (ಎನ್ಐಆರ್ಎಫ್) ರ್ಯಾಂಕಿಂಗ್ನ ಮೊದಲ ಹತ್ತು ಅಗ್ರ ಶ್ರೇಯಾಂಕದ ಶಿಕ್ಷಣ ಸಂಸ್ಥೆಗಳಲ್ಲಿ ದೇಶದ ವಿವಿಧ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಸಂಸ್ಥೆಗಳು ಸ್ಥಾನ ಪಡೆದಿವೆ.
ಐಐಟಿ ಮದ್ರಾಸ್, ಐಐಟಿ ದೆಹಲಿ, ಐಐಟಿ ಕಾನ್ಪುರ ಮೊದಲ ಐದು ಸ್ಥಾನಗಳನ್ನು ಪಡೆದುಕೊಂಡಿವೆ. ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್ಯು) ಮತ್ತೊಮ್ಮೆ ಹತ್ತು ಅಗ್ರ ಶ್ರೇಯಾಂಕಗಳಲ್ಲಿ ಸ್ಥಾನ ಪಡೆದ ಏಕೈಕ ಕಲಾ ಶಿಕ್ಷಣ ಸಂಸ್ಥೆಯಾಗಿದೆ.
ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪೈಕಿಯೂ ಬೆಂಗಳೂರಿನ ಐಐಎಸ್ಸಿಯು 2ನೇ ಸ್ಥಾನ ಪಡೆದಿದೆ. ಒಟ್ಟಾರೆ ವಿಭಾಗದಲ್ಲಿ ಮೊದಲ ಹತ್ತರಲ್ಲಿ ಸ್ಥಾನ ಪಡೆದ ಇತರ ಸಂಸ್ಥೆಗಳ ಪೈಕಿ ಐಐಟಿ ಬಾಂಬೆ, ಐಐಟಿ ಕಾನ್ಪುರ, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ದೆಹಲಿ, ಐಐಟಿ ಖರಗ್ಪುರ, ಐಐಟಿ ರೂರ್ಕಿ ಮತ್ತು ಐಐಟಿ ಗುವಾಹಟಿ ಇವೆ.
ಕೊಯಮತ್ತೂರಿನ ಪಿಎಸ್ಜಿಆರ್ ಕೃಷ್ಣಾಮ್ಮಾಳ್ ಕಾಲೇಜ್ ಫಾರ್ ವುಮೆನ್ ಮತ್ತು ಕೋಲ್ಕತ್ತದ ಸೇಂಟ್ ಕ್ಸೇವಿಯರ್ಸ್ ಕಾಲೇಜು ಈ ವರ್ಷ ಐದು ಅಗ್ರ ಕಾಲೇಜುಗಳಲ್ಲಿ ಸ್ಥಾನ ಪಡೆದಿವೆ.
1. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ), ಬೆಂಗಳೂರು
2. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ, ನವದೆಹಲಿ
3. ಜಾಮಿಯಾ ಮಿಲಿಯಾ ಇಸ್ಲಾಮಿಯಾ, ನವದೆಹಲಿ
4. ಜಾಧವಪುರ ವಿಶ್ವವಿದ್ಯಾಲಯ, ಕೋಲ್ಕತ್ತ
5. ಬನಾರಸ್ ಹಿಂದೂ ವಿಶ್ವವಿದ್ಯಾಲಯ, ವಾರಾಣಸಿ
6. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಮಣಿಪಾಲ
7. ಅಮೃತ ವಿಶ್ವವಿದ್ಯಾಪೀಠಂ, ಕೊಯಮತ್ತೂರು
8. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವೆಲ್ಲೂರು
9. ಅಲೀಗಡ ಮುಸ್ಲಿಂ ವಿಶ್ವವಿದ್ಯಾಲಯ, ಅಲೀಗಡ
10. ಹೈದರಾಬಾದ್ ವಿಶ್ವವಿದ್ಯಾಲಯ, ಹೈದರಾಬಾದ್
ದೇಶದ ಹತ್ತು ಅತ್ಯುತ್ತಮ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳು
1. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮದ್ರಾಸ್
2. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ದೆಹಲಿ
3.ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬಾಂಬೆ
4. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕಾನ್ಪುರ
5.ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ರೂರ್ಕಿ
6. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಖರಗಪುರ
7.ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಗುವಾಹಟಿ
8. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಹೈದರಾಬಾದ್
9. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತಿರುಚಿರಾಪಳ್ಳಿ
10. ಜಾಧವ್ಪುರ ವಿಶ್ವವಿದ್ಯಾಲಯ, ಕೋಲ್ಕತ್ತ
ದೇಶದ ಹತ್ತು ಅತ್ಯುತ್ತಮ ಕಾಲೇಜುಗಳು
1.ಮಿರಾಂಡಾ ಹೌಸ್, ದೆಹಲಿ
2.ಹಿಂದೂ ಕಾಲೇಜ್, ದೆಹಲಿ
3.ಪ್ರೆಸಿಡೆನ್ಸಿ ಕಾಲೇಜು, ಚೆನ್ನೈ
4.PSGR ಕೃಷ್ಣಮ್ಮಲ್ ಮಹಿಳಾ ಕಾಲೇಜು, ಕೊಯಮತ್ತೂರು
5.ಸೇಂಟ್ ಕ್ಸೇವಿಯರ್ ಕಾಲೇಜು, ಕೋಲ್ಕತ್ತಾ
6.ಆತ್ಮ ರಾಮ್ ಸನಾತನ ಧರ್ಮ ಕಾಲೇಜು, ನವದೆಹಲಿ
7.ಲೊಯೊಲಾ ಕಾಲೇಜು, ಚೆನ್ನೈ
8.ರಾಮಕೃಷ್ಣ ಮಿಷನ್ ವಿದ್ಯಾಮಂದಿರ, ಹೌರಾ
9.ಲೇಡಿ ಶ್ರೀ ರಾಮ್ ಕಾಲೇಜ್ ಫಾರ್ ವುಮೆನ್, ದೆಹಲಿ
10ಕಿರೋರಿ ಮಾಲ್ ಕಾಲೇಜ್, ದೆಹಲಿ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…